ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ವ್ರತ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವರಮಹಾಲಕ್ಷ್ಮೀ ಹಬ್ಬದ ಪ್ರಯಕ್ತ ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ವ್ರತ ಜರುಗಿತು. ಕುಂದಾಪುರ, ಗಂಗೊಳ್ಳಿ, ಶಂಕರನಾರಾಯಣ, ಸಿದ್ಧಾಪುರ, ಉಪ್ಪುಂದ, ಬೈಂದೂರು, ಶಿರೂರು ಮುಂತಾದೆಡೆ ವಿವಿಧ ದೇವಸ್ಥಾನಗಳಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಜರುಗಿದವು.

Call us

Click Here

ಬೆಳಿಗ್ಗೆ ದೇವತಾ ಪ್ರಾರ್ಥನೆ, ಕಲಶ ಪ್ರತಿಷ್ಠಾಪನೆ, ಕಲ್ಪೋಕ್ತ ಪೂಜೆ, ಕಥಾಶ್ರವಣ, ಮಂಗಳಾರತಿ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗಂಗೊಳ್ಳಿಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ವತಿಯಿಂದ ೨೬ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶುಕ್ರವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ವಸಂತ ಭಟ್ ಮತ್ತು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರಗಿತು.

ಗಂಗೊಳ್ಳಿಯ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಂಕಾಳಿ ಕಲ್ಲುಕುಟ್ಟಿಗ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

Leave a Reply