ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಶೀ ಮಠದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯತಿಥಿ ಆರಾಧನಾ ಮಹೋತ್ಸವ ಹಾಗೂ ವೃಂದಾವನದಲ್ಲಿ ಮುಖ್ಯ ಪ್ರಾಣ ದೇವರ ಪ್ರತಿಷ್ಟಾ ಕಾರ್ಯಕ್ರಮ ಹರಿದ್ವಾರದ ವ್ಯಾಸ ಆಶ್ರಮದಲ್ಲಿ 30 ಡಿಸೆಂಬರ್ 2016 ರಿಂದ 06 ಜನವರಿ 2017ರ ವರೆಗೆ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವೆಬ್ಸೈಟ್ http://punyathithi.org ನ್ನು ಕಾಶೀ ಮಠಾದೀಶ ಶ್ರೀ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ತಮ್ಮ ಅಮೃತ ಹಸ್ತಗಳಿಂದ ಕಾಜ್ಞಂಗಾಡ್ನಲ್ಲಿ ಲೋಕಾರ್ಪಣೆಗೊಳಿಸಿದರು. ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ವಿವರ ಈ ವೆಬ್ಸೈಟ್ನಲ್ಲಿ ಲಭ್ಯವಿದೆ.