Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮದಲ್ಲದ ಲೋಕವನ್ನು ನಮ್ಮದಾಗಿಸುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಹೆಚ್. ಎಸ್. ರಾಘವೇಂದ್ರ ರಾವ್
    ಊರ್ಮನೆ ಸಮಾಚಾರ

    ನಮ್ಮದಲ್ಲದ ಲೋಕವನ್ನು ನಮ್ಮದಾಗಿಸುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಹೆಚ್. ಎಸ್. ರಾಘವೇಂದ್ರ ರಾವ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ವೈ ಎಸ್. ಹರಗಿ ಅವರಿಗೆ ಡಾ. ಹೆಚ್. ಶಾಂತಾರಾಮ್ ಪ್ರಶಸ್ತಿ ಪ್ರದಾನ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನಮ್ಮದಲ್ಲದ ಲೋಕವನ್ನು ನಮ್ಮದಾಗುವಂತೆ ಕಟ್ಟಿಕೊಡುವ ಸಾಮರ್ಥ್ಯ ಕಥೆ, ಕವನ ಮತ್ತು ಕಾದಂಬರಿಗಳಲ್ಲಿ ಅಡಗಿದೆ. ಸಾಹಿತ್ಯವನ್ನು ಸಂಗಾತಿಯನ್ನಾಗಿ ಮಾಡಿಕೊಂಡವರಿಗೆ ಅದರೊಳಗಿನ ಅಂತಃಶಕ್ತಿ ಅರಿವಾಗುತ್ತದೆ ಎಂದು ವಿಮರ್ಶಕ ಡಾ. ಹೆಚ್. ಎಸ್. ರಾಘವೇಂದ್ರ ರಾವ್ ಅವರು ಅಭಿಪ್ರಾಯಪಟ್ಟರು.

    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಒಬ್ಬ ಒಳ್ಳೆಯ ಸಾಹಿತ್ಯ ಒದುಗನಿಗೆ ಪ್ರಪಂಚದ ತನ್ನದಲ್ಲದ ಜೀವನದ ಸಂವೇದನೆ ಮತ್ತು ಸಂಘರ್ಷಗಳನ್ನು ಏಕಕಾಲದಲ್ಲಿ ಮನಸಿಗೆ ನಾಟುವಂತೆ ಅದನ್ನು ಅನಿಭವಿಸುವಂತೆ ಮಾಡುವುದು ಕಾದಂಬರಿಗಳು. ಅವು ಸೃಷ್ಠಿಸುವ ಪಾತ್ರಗಳು ಹೇಗೆ ಇರಲಿ ಅವು ನಮ್ಮದಾಗುತ್ತಾ ನಮ್ಮನ್ನು ನಾವು ಅರ್ಥೈಸಿಕೊಳ್ಳಲು ನಮ್ಮೊಳಗಿನ ಮನಸನ್ನು ತೆರೆದಿಡುತ್ತಾ ಹೋಗುತ್ತದೆ. ಕಾದಂಬರಿಗಳಿಗೆ ಪಾತ್ರವನ್ನು ಕಟ್ಟಿಕೊಡುವ ಶಕ್ತಿ ಇದೆ. ಕೆಲವೊಮ್ಮೆ ವಾಸ್ತವವನ್ನು ಹೇಳಲು ಅವಾಸ್ತವಿಕತೆಯನ್ನು ಬಳಸುತ್ತವೆ ಎಂದು ಹೇಳಿದರು.

    ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ‘ಉರಿವ ಜಲ’ ಕಾದಂಬರಿ ಕುರಿತು ಮಾತನಾಡಿ ಶಾಂತವಾಗಿರುವ ಸಮಾಜದ ಮನಸ್ಸುಗಳನ್ನು ಅವರೊಳಗಿನ ಜ್ವಾಲಾಮುಖಿಯನ್ನು ತಿಳಿಸಿಕೊಡುತ್ತದೆ. ಅಲ್ಲಿ ಬರುವ ಪಾತ್ರಗಳು ದೇವದಾಸಿಯರುರ, ಸ್ತ್ರೀಯರ, ದಲಿತರ ಹಾಗೆ ಸಾಮಾಜಿಕ ನೆಲೆಗಳ ಹತಾಶೆ ಮತ್ತು ಅವರ ಒಳಮನಸ್ಸಿನ ಉರಿಯನ್ನು ಹೇಳುತ್ತದೆ. ಜೊತೆಗೆ ಆಯಸ್ಕಾಂತದಂತೆ ಸೆಳೆಯುವ ಮುದುಕನ ಪಾತ್ರದ ಮೂಲಕ ಆಶಾವಾದವನ್ನು ತುಂಬುತ್ತದೆ. ಜೊತೆಯಲ್ಲಿ ಕಾದಂಬರಿ ಇತಿಹಾಸದ ಹಲವು ಮುಖಗಳನ್ನು ಪರಿಚಯಿಸುತ್ತಾ ಹೋಗುತ್ತದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯನ್ನು ‘ಉರಿವ ಜಲ’ ಕಾದಂಬರಿಯ ಕರ್ತೃ ವೈ.ಎಸ್. ಹರಗಿಯವರಿಗೆ ಪ್ರದಾನ ಮಾಡಿದ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಮಾತನಾಡಿ ಒಳ್ಳೆಯ ಕಾದಂಬರಿಗೆ ಪ್ರಶಸ್ತಿ ದೊರೆಕಿದೆ. ಕಾದಂಬರಿ ಓದುಗನನ್ನು ಸುಲಲಿತವಾಗಿ ಓದಿಸಿಕೊಂಡು ಹೋಗುತ್ತದೆ. ಸಾಮಾಜಿಕ ನೆಲೆಗಳ ತುಡಿತ, ಗ್ರಾಮೀಣ ಪರಿಸರ ಸೇರಿದಂತೆ ಸಮಾಜದ ಸಂಘರ್ಷ ಮತ್ತು ಸಂವೇದನೆಗಳ ಚಿತ್ರಣ ತಿಳಿಯಬೇಕಾದರೆ ಈ ಕಾದಂಬರಿ ಓದಲೇ ಬೇಕಾಗುತ್ತದೆ. ಇಂತಹ ಕಾದಂಬರಿಗಳಿಂದ ಯುವಜನತೆಯ ಸಾಹಿತ್ಯದ ಬಗೆಗಿನ ಕಾಳಜಿ ಹೆಚ್ಚಲಿ ಮತ್ತು ಸಾಹಿತ್ಯ ರಚನೆಗಳಿಗೆ ಪ್ರಚೋದನೆ ಸಿಗಲಿ ಎಂದು ಹೇಳಿದರು.

    Click here

    Click here

    Click here

    Call us

    Call us

    ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ವೈ ಎಸ್. ಹರಗಿಯವರು ಮಾತನಾಡಿ ಕೃತಿಯಲ್ಲಿ ಬರುವ ಪಾತ್ರಗಳು ಪರಸ್ಪರ ನಮ್ಮ ನಮ್ಮಲ್ಲಿಯೇ ನಡೆಯುವ ಮತ್ತು ಸಾಮಾಜಿಕ ವವಸ್ಥೆಯ ನಡುವಿನ ಸಂಘರ್ಶಗಳನ್ನು ಹೇಳುತ್ತದೆ . ಅಲ್ಲದೇ ಪ್ರಶಸ್ತಿ ನನ್ನ ಮೇಲೆ ಇನ್ನಷ್ಟು ಜವಾಬ್ದಾರಿಯನ್ನು ಕೊಟ್ಟಿದೆ ಎಂದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿಯ ಸದಸ್ಯರಾದ ಕೋಣಿ ಶಿವರಾಮ ಕಾರಂತ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಸ್ವಾಗತಿಸಿದರು. ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿಯ ಸಂಚಾಲಕರಾದ ಡಾ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ ವಂದಿಸಿದರು. ಉಪಾನ್ಯಾಸಕ ರಂಜಿತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d