ಜೀವವಿಮಾ ಪ್ರತಿನಿಧಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರಿಗೆ ಸನ್ಮಾನ

Call us

Call us

Call us

ಕುಂದಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಉಡುಪಿ ವಿಭಾಗದ ವತಿಯಿಂದ ಎಂಡಿಆರ್‌ಟಿ ಸಾಧನೆಗೈದ ಕುಂದಾಪುರ ಶಾಖೆಯ ಜೀವವಿಮಾ ಪ್ರತಿನಿಧಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರನ್ನು ಮಂಗಳೂರಿನ ದೀಪಾ ಕಂಫರ್ಟ್ ಹೋಟೆಲ್ ಸಭಾಂಗಣದಲ್ಲಿ ನಡೆದ ಎಂಡಿಆರ್‌ಟಿ ಸಾಧಕರ ಸನ್ಮಾನ ಸಮಾರಂಭದಲ್ಲಿ ಉಡುಪಿ ವಿಭಾಗದ ಸೀನಿಯರ್ ಡಿವಿಜನಲ್ ಮೇನೆಜರ್ ವಿ. ವಿಶ್ವೇಶ್ವರ ರಾವ್ ಅವರು ಸನ್ಮಾನಿಸಿದರು.

Call us

Click Here

ಕಳೆದ ಮೂರು ವರ್ಷಗಳಿಂದ ಎಂಡಿಆರ್‌ಟಿ ಸದಸ್ಯರಾಗಿರುವ ಇವರು ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ೫೦ ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ನಿವೃತ್ತ ಜೀವವಿಮಾ ಅಭಿವೃದ್ಧಿ ಅಧಿಕಾರಿ ಕೆ.ಕರುಣಾಕರ ಶೆಟ್ಟಿ ಹಾಗೂ ಶಾಖೆಯ ಮುಖ್ಯ ವ್ಯವಸ್ಥಾಪಕ ಕೆ. ವಿ. ಕುಲಕರ್ಣಿ, ಸಹಾಯಕ ವ್ಯವಸ್ಥಾಪಕ ಗುರುರಾಜ್ ಎಂ.ಎ ಅವರ ಮಾರ್ಗದರ್ಶನದಲ್ಲಿ ಪ್ರಥಮ ಗೆಲಾಕ್ಸಿ ಕ್ಲಬ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Leave a Reply