Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ: ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಚಾಲನೆ
    ಊರ್ಮನೆ ಸಮಾಚಾರ

    ಸಾಲಿಗ್ರಾಮ: ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಚಾಲನೆ

    Updated:16/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಈಜು ಎನ್ನುವುದು ಯಾವುದೇ ದುಶ್ಪರಿಣಾಮ ಇಲ್ಲದ, ಎಲ್ಲರೂ ಮಾಡಬಹುದಾದ ಒಂದು ವ್ಯಾಯಾಮ. ದಿನನಿತ್ಯ ಈಜುವುದರಿಂದ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುದರೊಂದಿಗೆ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಈಜು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಸ್ವೀಮ್ಮಿಂಗ್ ಕ್ಲಬ್ ಆಯೋಜಿಸಿದ ಈ ಈಜುಸ್ಪರ್ಧೆ ಈಜುಪಡುಗಳಿಗೆ ಪ್ರೋತ್ಸಾಹ ನೀಡುವಂತಹುದು ಎಂದು ಯುವಜನ ಸೇವೆ, ಕ್ರೀಡೆ, ಮೀನುಗಾರಿಕಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು.

    Click Here

    Call us

    Click Here

    ಅವರು ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಪುಷ್ಕರಣಿಯಲ್ಲಿ ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಮಹಾಲಸಾ ಎಂಟರ್‌ಪ್ರೈಸಸ್ ಮತ್ತು ಏಕದಂತ ಎಂಟರ್‌ಪ್ರೈಸಸ್ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿರುವ ಇಂದಿನ ಮಕ್ಕಳಿಗೆ ಮನೆಯಲ್ಲಿ ಮತ್ತು ಶಾಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಮರೆಯಾಗುತ್ತಿದೆ. ಆದ್ದರಿಂದ ಹೆತ್ತವರು ಮಕ್ಕಳ ಅಭಿರುಚಿಯನ್ನು ಗಮನಿಸಿ ಅವರ ಭವಿಷ್ಯಕ್ಕೆ ಸಹಕಾರ ನೀಡಬೇಕು ಎಂದರು.

    ಇದೇ ಸಂದರ್ಭ ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್‌ವತಿಯಿಂದ ಕಾರ್ಕಡದಲ್ಲಿ ಹೊಸ ಕಾರ್ಕಡ ಶಾಲೆಯವರು ನೀಡಿದ ಒಂದು ಎಕರೆ ಸ್ಥಳದಲ್ಲಿ ಈಜುಕೊಳ ನಿರ್ಮಿಸಲು ಅನುದಾನ ಕೋರಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಅವಕಾಶಗಳನ್ನು ಗಮನಿಸಿ ಸಹಕಾರ ನೀಡುವ ಪ್ರಯತ್ನ ಮಾಡುದಾಗಿ ತಿಳಿಸಿದರು. ಇದೇ ಸಂದರ್ಭ ಈಜು ಗುರುಗಳಾದ ಗೋಪಾಲ ಅಡಿಗ ಅವರನ್ನು ಸಚಿವರು ಸನ್ಮಾನಿಸಿ ಗೌರವಿಸಿದರು. ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಅಧ್ಯಕ್ಷ ಮುರುಳಿಧರ ನಾಯಿರಿ ಅಧ್ಯಕ್ಷತೆವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಅನಂತಪದ್ಮನಾಭ ಐತಾಳ್, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ ಅಧ್ಯಕ್ಷ ಅನಂತ ಶ್ಯಾನುಭಾಗ್, ಸ್ವಿಮ್ಮಿಂಗ್ ಕ್ಲಬ್‌ನ ನಿತ್ಯಾನಂದ ಶ್ಯಾನುಭಾಗ್, ಹೊಸ ಕಾರ್ಕಡ ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಸುಮತಿ ನಾಯಿರಿ ಉಪಸ್ಥಿತರಿದ್ದರು.
    ಸ್ವಿಮ್ಮಿಂಗ್ ಕ್ಲಬ್‌ನ ಚಂದ್ರಶೇಖರ ಅಡಿಗ ಪ್ರಸ್ತಾವಿಸಿದರು. ಶಿಕ್ಷಕ ಸಾಹಿತಿ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ವೆಂಕಟೇಶ್ ಭಟ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ವಿಮ್ಮಿಂಗ್ ಸ್ಪರ್ಧೆ ನಡೆಯಿತು. ಅಂತರಾಷ್ಟ್ರೀಯ ಈಜುಪಟು ಗೋಪಾಲ ಅಡಿಗ ನಿರ್ಣಾಯಕರಾಗಿದ್ದರು.

    Like this:

    Like Loading...

    Related

    Minister Pramod Madwaraj
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d