Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಕುಶಲ ಕಲಾಶಿಲ್ಪಿ : ಕೋಟ ಗಣೇಶ ಆಚಾರ್ಯ
    ಕಲೆ-ಸಂಸ್ಕೃತಿ

    ಕರಕುಶಲ ಕಲಾಶಿಲ್ಪಿ : ಕೋಟ ಗಣೇಶ ಆಚಾರ್ಯ

    Updated:17/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಲೇಖನ.
    ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ, ಮುಂತಾದ ಲೋಹಗಳಿಂದ ಮೂರ್ತಿ, ದಾರಂದ, ದ್ವಾರ ಬಾಗಿಲು, ಪಲ್ಲಕ್ಕಿ ಮುಂತಾದವುಗಳನ್ನು ತಯಾರಿಸುವ ಮೂಲಕ ಶಿಲ್ಪಕಲಾಲೋಕಕ್ಕೆ ವಿಶೇಷ ಮೆರಗು ನೀಡಿದ ಕಲಾಶಿಲ್ಪಿ ಕೋಟ ಗಣೇಶ ಆಚಾರ್ಯ.

    Click Here

    Call us

    Click Here

    ಒಂದು ಕಲೆ ಸಿದ್ಧಿಯಾಗಬೇಕಾದರೆ ಒಂದೋ ವಂಶಪಾರಂಪರ್ಯವಾಗಿ ಬಂದಿರಬೇಕು ಅಥವಾ ತನ್ನ ಸ್ವ ಪ್ರಯತ್ನದಿಂದಾಗಿ ಕಲೆಯನ್ನು ಸಿದ್ಧಿಸಿ ಮುಂದುವರಿಸಿಕೊಂಡು ಬಂದಾಗ ಆ ಕಲೆಯ ಸತ್ವವನ್ನು ಹೀರಿಕೊಳ್ಳಲು ಸಾಧ್ಯ. ಗಣೇಶ ಆಚಾರ್ಯ ರಿಗೆ ಈ ಕಲೆ ವಂಶಪಾರಂಪರ್ಯವಾಗಿ ಬಂದಿದೆ.

    ಉಡುಪಿ ತಾಲೂಕಿನ ಕೋಟತಟ್ಟುವಿನ ಶಂಕರ ಆಚಾರ್ಯ ಹಾಗೂ ಗಿರಿಜಾ ಆಚಾರ್ಯರ ಮೂರು ಮಕ್ಕಳಲ್ಲಿ ಎರಡನೆಯವರಾಗಿ ಜನಿಸಿದ ಗಣೇಶ ಆಚಾರ್ಯರು ತಂದೆಯ ರಕ್ತಗತವಾದ ಕಲೆಯನ್ನು ಮುಂದುವರಿಸಿಕೊಂಡು ಬಂದ ಕಲಾಕಾರ. ಕಲಾ ಕ್ಷೇತ್ರದಲ್ಲಿ ಸದ್ದಿಲ್ಲದೇ ಸುದ್ದಿ ಆಗುವವರು ಒಂದು ವರ್ಗವಾದರೆ ಇನ್ನೋಂದು ಸದ್ದು ಮಾಡಿ ಸುದ್ದಿ ಆಗುವವರು ಇನ್ನೊಂದು ವರ್ಗ. ಅದರಲ್ಲಿ ಗಣೇಶ ಆಚಾರ್ಯರು ಸದ್ದಿಲ್ಲದ ಸುದ್ದಿ ಆದವರ ಸಾಲಿನಲ್ಲಿ ಸೇರುತ್ತಾರೆ. ಅರ್ಥಾತ್ ಪ್ರಚಾರಕ್ಕೆ ಕಟ್ಟುಬೀಳದ ಮಿತಭಾಷಿ. ಕೇವಲ ಕರಕುಶಲ ಕಲೆಯಿಂದ ತನ್ನ ಕಲಾನೈಪುಣ್ಯತೆಯನ್ನು ತೆರೆದಿಡುವ ಕಲಾನಿಪುಣ.

    ಕೋಟದ ಹಲವು ಮಕ್ಕಳತಾಯಿ ಶ್ರೀ ಅಮೃತೇಶ್ವರೀ ದೇವಸ್ಥಾನದ ರಜತ ದ್ವಾರ, ಇನ್ನಿತರ ತಾಮ್ರ,ಹಿತ್ತಾಳೆ ಕೆಲಸ , ಕೋಟ ಹೀರೇಮಹಾಲಿಂಗೇಶ್ವರ ದೇವಸ್ಥಾನದ ರಜತ ಪೀಠ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಉತ್ಸವ ಮೂರ್ತಿಗೆ ಚಿನ್ನದ ಪ್ರಭಾವಳಿ, ಶ್ರೀ ಮಂಗಳಾದೇವಿ ದೇವಿ ದೇವಸ್ಥಾನದ ರಜತ ದ್ವಾರ, ತೀರ್ಥಮಂಟಪ ಗಣಪತಿ ವಿಗ್ರಹಕ್ಕೆ ಚಿನ್ನದ ಕವಚ, ಶಂಕರನಾರಾಯಣ ದೇವಸ್ಥಾನದ ಉತ್ಸವ ಮೂರ್ತಿಗೆ ಚಿನ್ನದ ಕವಚ, ಆನೆಗುಡ್ಡೆ ದೇವಸ್ಥಾನದ ಬೆಳ್ಳಿಯ ಪಲ್ಲಕ್ಕಿ ಹಾಗೂ ತೊಟ್ಟಿಲು, ತುಮಕೂರಿನ ಲಕ್ಷ್ಮೀ ಮೂರ್ತಿಗೆ ಚಿನ್ನದ ಕವಚ, ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನದ ರಜತ ದ್ವಾರ, ದ್ವಾರಬಾಗಿಲು ಅಲ್ಲದೆ ಯಕ್ಷಗಾನ ಪರಿಕರಗಳಾದ ಕೀರಿಟ, ಆಕರ್ಷಕ ಬೆಳ್ಳಿಯ ದೀಪಾರತಿಗಳು ಹೀಗೇ ಕೇವಲ ಸ್ಥಳೀಯ ದೇವಸ್ಥಾನಗಳಿಗೆ ಇವರ ಕರಕುಶಲ ಕಲೆ ಸೀಮಿತವಾಗಿರದೆ ಕಾಸರಗೋಡಿನ ಐಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ರಜತ ದ್ವಾರ ಒಳಗೊಂಡಂತೆ ಹತ್ತು ಹಲವು ದೇವಸ್ಥಾನಗಳಲ್ಲಿ ಕಲಾನೈಪುಣ್ಯತೆ ಯನ್ನು ಕಾಣುದರೊಂದಿಗೆ ಅವರ ವೃತ್ತಿ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸುದರೊಂದಿಗೆ 2010 ರ ಉಡುಪಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಾಧನಶೀಲ ಪ್ರಶಸ್ತಿಗಳು ತಾನಾಗಿಯೇ ಹುಡುಕಿಕೊಂಡು ಬಂದಿದೆ.

    ಕಳೆದ ಸುಮಾರು ನಾಲ್ಕು ದಶಕಗಳಿಂದ ಹಿರಿಯರಿಂದ ಬಳುವಳಿಯಾಗಿ ಬಂದ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕನಸು ಮಗ ನಿತ್ಯಾನಂದರ ಮೂಲಕ ಸಾಕಾರಗೊಂಡಿದೆ.

    Click here

    Click here

    Click here

    Call us

    Call us

    kota ganesh acharya kota ganesh acharya2 kota ganesh acharya4

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025

    ರಾಮೀ ಗ್ರೂಪ್ಸ್ ಸಂಸ್ಥಾಪಕ, ಹೆಸರಾಂತ ಉದ್ಯಮಿ ವರದರಾಜ್ ಎಂ. ಶೆಟ್ಟಿ ಅವರ ವಿಶೇಷ ಸಂದರ್ಶನ

    14/12/2023

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.