Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಚರಣೆ, ಅನುಭವ, ಸಮೂಹ ಜೀವನ ಹಾಗೂ ಸಂಸ್ಕಾರ ಜಿಎಸ್‌ಬಿ ಸಮುದಾಯದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದ ವೇ.ಮೂ. ವೇದವ್ಯಾಸ ಆಚಾರ್ಯ ಹೇಳಿದರು.

    Click Here

    Call us

    Click Here

    ಉಪ್ಪುಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ನಡೆದ ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿಯ ಮೂರನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು. ಮಕ್ಕಳಿಗೆ ದೇವರು, ಧರ್ಮ, ಗುರು-ಹಿರಿಯರ ಬಗ್ಗೆ ಮನವರಿಕೆ ಮಾಡಬೇಕೆಂದ ಅವರು ನಮ್ಮ ಮಕ್ಕಳು ಶಾಲೆಯ ಶಿಕ್ಷಣದ ಜತೆಗೆ ಆಧ್ಯಾತ್ಮಿಕ, ನೈತಿಕ ಹಾಗೂ ಭೌತಿಕ ಶಿಕ್ಷಣವನ್ನು ಪಡೆಯಬೇಕು. ಸಂಜೆ ಧಾರಾವಾಹಿಗಳನ್ನು ನೋಡುವುದರ ಬದಲು ನಮ್ಮ ಹಿರಿಯರು ನಡೆಸಿಕೊಂಡು ಬಂದಂತೆ ಪ್ರತೀ ಮನೆಗಳಲ್ಲಿಯೂ ಸಂಧ್ಯಾಕಾಲದ ಭಜನೆ ಮಾಡಬೇಕು. ಮಕ್ಕಳಿಗೆ ಟೀವಿ, ಮೊಬೈಲ್ ಸಹವಾಸದಿಂದ ದೂರವಿಟ್ಟು ವ್ಯವಹಾರಿಕಾ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದ ಕುರಿತಾದ ಅರಿವು ಮೂಡಿಸಬೇಕು ಎಂದರು.

    ಕೊಲ್ಲೂರು ಜಿಎಸ್‌ಬಿ ವಲಯಾಧ್ಯಕ್ಷ ಜಿ. ವೆಂಕಟೇಶ್ ನಾಯಕ್ ಅಧ್ಯಕ್ಷತೆವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಾಧಕರನ್ನು ಗೌರವಿಸಲಾಯಿತು. ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಯು. ವಿಷ್ಣು ಪಡಿಯಾರ್, ಕಾರ್ಯದರ್ಶಿ ಯು. ಸತೀಶ್ ಪಡಿಯಾರ್, ಜಿಎಸ್‌ಬಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಸತೀಶ್ ಹೆಗ್ಡೆ ಕೋಟ, ನಿವೃತ್ತ ಮುಖ್ಯಶಿಕ್ಷಕ ಗುಜ್ಜಾಡಿ ಸುರೇಶ ಕಾಮತ್, ಸಿಂಡಿಕೆಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ರಾಮದಾಸ್ ಬಾಳಿಗ, ಉದ್ಯಮಿ ಬಿ. ವಿಶ್ವನಾಥ ಪಡಿಯಾರ್, ಸಮಿತಿಯ ಗೌರವಾಧ್ಯಕ್ಷ ಬಿ. ವಾಸುದೇವ ಭಟ್ ಹಾಗೂ ವಿಶೇಷ ಅತಿಥಿಗಳಾಗಿ ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಶಂಕರ ಪೂಜಾರಿ, ಕೆ. ಬಾಬು ಶೆಟ್ಟಿ ಉಪಸ್ಥಿತರಿದ್ದರು. ಯಳಜಿತ್ ಮಂಗೇಶ ಶ್ಯಾನುಭಾಗ್ ಸ್ವಾಗತಿಸಿ, ಕಾರ್ಯದರ್ಶಿ ಜಡ್ಕಲ್ ಅಶೋಕ ಶ್ಯಾನುಭಾಗ್ ವಂದಿಸಿದರು. ಎಲ್ಲೂರು ರಾಜೇಶ್ ಕಿಣಿ ನಿರೂಪಿಸಿದರು.
    ಬೆಳಿಗ್ಗೆ ಗಣಹವನ, ಶ್ರೀ ಸತ್ಯನಾರಾಯಣ ಪೂಜೆ, ನಂತರ ಭಟ್ಕಳ ಉದಯ ಪ್ರಭು ಮತ್ತು ಬಳಗದವರಿಂದ ಭಕ್ತಿ ಸಂಗೀತ ನಡೆಯಿತು.

    GSB
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    two − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.