Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುರಸಭೆ ಸಾಮಾನ್ಯ ಸಭೆಯಿಂದ ಹೊರನಡೆದ ಆಡಳಿತ ಪಕ್ಷದ ಸದಸ್ಯರು
    ಕುಂದಾಪ್ರದ್ ಸುದ್ಧಿ

    ಪುರಸಭೆ ಸಾಮಾನ್ಯ ಸಭೆಯಿಂದ ಹೊರನಡೆದ ಆಡಳಿತ ಪಕ್ಷದ ಸದಸ್ಯರು

    Updated:09/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯು ಸಂಬಂಧಿತ ವಿಚಾರ ಕೇಂದ್ರಿತವಾಗಿರದೇ ಅಧ್ಯಕ್ಷರ ಪ್ರತಿಷ್ಠೆ, ಸದಸ್ಯರ ಆರೋಪ ಪ್ರತ್ಯಾರೋಪಗಳಿಗೆ ತುತ್ತಾಯಿತು. ಅಕ್ರಮ ಗೂಡಂಗಡಿ ತೆರವು ಪ್ರಕರಣವು ಸಭೆಯ ಕೊನೆಯವರೆಗೂ ಪ್ರತಿಧ್ವನಿಸಿದ್ದಲ್ಲದೇ ಆಡಳಿತ ಪಕ್ಷದ 13 ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷರ ಮಾತಿನಿಂದ ಆಕ್ರೋಶಗೊಂಡು ಸಭೆಯಿಂದ ಹೊರನಡೆದ ಪ್ರಕರಣ ನಡೆಯಿತು.

    Click Here

    Call us

    Click Here

    ಪುರಸಭಾ ಅಧ್ಯಕ್ಷೆ ಕಲಾವತಿ ಅಕ್ರಮ ಗೂಡಂಗಡಿ ವಿಚಾರವನ್ನು ಪ್ರಸ್ತಾವಿಸಿ ನಿರ್ಣಯ ಕೈಗೊಳ್ಳಲು ತಿಳಿಸಿದಾಗ ಪುರಸಭಾ ಸದಸ್ಯೆ ಪುಪ್ಪ ಶೇಟ್ ಮಾತನಾಡಿ, ಅಕ್ರಮ ಗೂಡಂಗಡಿಗಳನ್ನು ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಲಾಗಿತ್ತು. ಆದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ನಮ್ಮ ವಾರ್ಡಗಳಲ್ಲೂ ಇಂತಹ ಸಮಸ್ಯೆ ಸಾಕಷ್ಟಿವೆ ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಮತ್ತು ಈ ಹಿಂದೆ ನೀಡಿರುವ ದೂರುಗಳು ಏನಾದವು ಎಂಬುದನ್ನೂ ಅಧ್ಯಕ್ಷರು ತಿಳಿಸಬೇಕು ಎಂದು ಆಗ್ರಹಿಸಿದರು. ಸದಸ್ಯರಾದ ಶ್ರೀಧರ ಶೇರೆಗಾರ್, ಚಂದ್ರಶೇಖರ ಖಾರ್ವಿ ಧ್ವನಿಗೂಡಿಸಿದರು.

    Purasabhe1

    ಈ ನಡುವೆ ಸದಸ್ಯ ರಾಜೇಶ್ ಕಾವೇರಿ ಮಾತನಾಡಿ ಯಾವುದೋ ಒಂದು ವಿಚಾರವನ್ನಿಟ್ಟುಕೊಂಡು ಗೂಡಂಗಡಿ ವಿಚಾರವನ್ನು ಮುಂದಿಟ್ಟಕೊಂಡು ಬಡವರ ಮೇಲಿನ ಸವಾರಿ ತರವಲ್ಲ. ನಾವು ಈ ಹಿಂದೆ ನೀಡಿದ ದೂರಗಳ ಬಗ್ಗೆ ಯಾಕೆ ಗಮನಹರಿಸಿಲ್ಲ. ಇಲ್ಲಿ ಪುರಸಭೆಯ ಎಲ್ಲಾ ಸದಸ್ಯರ ಮಾತುಗಳನ್ನು ಒಪ್ಪುವ ಬದಲಿಗೆ ಕೆಲವು ಸದಸ್ಯರುಗಳ ನಿರ್ಣಯಗಳಿಗೆ ಮಾತ್ರ ಮನ್ನಣೆ ನೀಡುವ ಕ್ರಮ ಸರಿಯಲ್ಲ ಎಂದು ವಾದಿಸಿದರು.

    ಚಿಕ್ಕದಿರುವ ಗೂಡಗಂಡಿಗಳನ್ನು ದೊಡ್ಡದಾಗಿ ಮಾಡಿಕೊಳ್ಳಲಾಗುತ್ತಿದೆ. ಒಬ್ಬರು ಮಾಡುವುದನ್ನು ನೋಡಿ ಬೇರೆಯವರೂ ಕೂಡ ಅರ್ಜಿ ಸಲ್ಲಿಸುತ್ತಿದ್ದಾರೆ. ಎಲ್ಲಾ ಗೂಡಂಗಡಿಗಳನ್ನು ದೊಡ್ಡದು ಮಾಡಿದರೆ ಪುರಸಭೆಯಲ್ಲಿ ಜಾಗದ ಸಮಸ್ಯೆ ಉದ್ಭವಿಸಲಿದೆ. ಈ ಸಮಸ್ಯೆಗೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದಾಗ ಈ ವಿಚಾರದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಣಯ ತೆಗೆದುಕೊಳ್ಳುವುದಾಗಿ ಅಧ್ಯಕ್ಷರು ತಿಳಿಸಿದರು.

    Click here

    Click here

    Click here

    Call us

    Call us

    ಈ ನಡುವೆ ಸಾಮಾನ್ಯ ಸಭೆಯ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕುವಂತೆ ಪುರಸಭಾ ಅಧ್ಯಕ್ಷರು ಮನವಿ ಮಾಡಿದರೂ ಕೂಡ, ಸರಿಯಾದ ನಿರ್ಣಯ ಕೈಗೊಳ್ಳದೇ ತಮ್ಮ ಸಹಿ ಹಾಕುವುದಿಲ್ಲ ಎಂದು ಆಡಳಿತ ಪಕ್ಷದ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರು ಪಟ್ಟು ಹಿಡಿದಾಗ, ಸಾಮಾನ್ಯ ಸಭೆಗೆ ಹಾಜರಾದವರು ಸಹಿ ಹಾಕುವುದು ನಿಯಮ. ನಿಯಮ ಉಲ್ಲಂಗಿಸುವುದು ಸರಿಯಲ್ಲ ಎಂದು ಅಧ್ಯಕ್ಷರು ಹೇಳಿದರು. ಆದರೆ ಪಟ್ಟ ಬಿಡದ ಸದಸ್ಯರು ಸಹಿ ಹಾಕಲು ಸಾಧ್ಯವಿಲ್ಲ. ಇಲ್ಲಿ ಯಾವ ವಿಚಾರದ ಬಗ್ಗೆಯೂ ನಿರ್ಣಯ ಕೈಗೊಳ್ಳುತ್ತಿಲ್ಲ. ನಾವು ಜನರಿಗೆ ಉತ್ತರಿಸುವುದು ಹೇಗೆ ಎಂದು ಪ್ರಶ್ನಿಸಿದರು.

    ಅದಕ್ಕೆ ಅಧ್ಯಕ್ಷರು ಸಹಿ ಹಾಕದೇ ಇದ್ದ ಮೇಲೆ ಸಭೆಯಲ್ಲಿರುವ ಅಗತ್ಯವಿಲ್ಲ, ಹೊರನಡೆಯಬಹುದು ಎಂದಾಗ ಆಕ್ರೋಶಗೊಂಡು ಕಾಂಗ್ರಸ್ ಬೆಂಬಲಿತ ಸದಸ್ಯರು ಹೊರನಡೆಯಲು ತಾವು ಹೇಳುವುದು ಬೇಡ. ನಾವೇ ಹೋಗುತ್ತೇವೆ ಎಂದು ಹೇಳಿ, ಪ್ರಭಾರಕ ಕೋಡಿ ಅವರನ್ನು ಹೊರತುಪಡಿಸಿ ಉಳಿದವರು ಸಭೆಯಿಂದ ಹೊರನಡೆದರು.

    23 ಸದಸ್ಯರ ಪೈಕಿ ಮೂರನೇ ಒಂದರಷ್ಟು ಸದಸ್ಯರು ಹಾಜರಿದ್ದ ಕಾರಣ ಸಭೆಯನ್ನು ಮುಂದುವರಿಸಿಲಾಯಿತು. ಸಭೆಯಲ್ಲಿ ಸುಲಭ ಶೌಚಾಲಯ, ಕಿತ್ತು ಹೋದ ಹಂಪ್ಸ್, ನ್ಯೂ ಮೆಡಿಕಲ್ಸ್ ಮುಂಬಾಗದ ಜಾಗದ ತಕರಾರು, ಹಂದಿಗೂಡು ಮುಂತಾದ ವಿಚಾರಗಳು ಚರ್ಚೆಗೆ ಬಂದವು.
    ಸಭೆಯಲ್ಲಿ ಉಪಾಧ್ಯಕ್ಷ ನಾಗರಾಜ ಕಾಮಧೇನು, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ನಾಯಕ್, ಮುಖ್ಯಾಧಿಕಾರಿ ಗೋಪಾಲ ಶೆಟ್ಟಿ ಉಪಸ್ಥಿತಿರಿದ್ದರು.

    Like this:

    Like Loading...

    Related

    Kundapura Purasabhe
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d