Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ಮಕ್ಕಳ ಧ್ವನಿ 2016 ಉದ್ಘಾಟನೆ
    ಊರ್ಮನೆ ಸಮಾಚಾರ

    ಕೋಟ: ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ಮಕ್ಕಳ ಧ್ವನಿ 2016 ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಇಂದು ನಮ್ಮ ದೇಶದಲ್ಲಿ ಪರಿಸರದಲ್ಲಿರುವ ಕಸ ಕಲ್ಮಶಗಳನ್ನು ಸ್ವಚ್ಛಗೊಳಿಸುವ ಯೋಜನೆ ಜಾರಿಯಲ್ಲಿದೆ. ಹಾಗೆಯೇ ಇಂದು ನಮ್ಮ ಮನ ಮನಸ್ಸಿನಲ್ಲಿರುವ ಅಶುದ್ಧವನ್ನು ಹೋಗಲಾಡಿಸುವುದು ಅಗತ್ಯವಾಗಿದೆ. ಸಾಹಿತ್ಯ ಎಂದರೆ ಒಂದು ಅಕ್ಷರ, ಒಂದು ಪದ, ಒಂದು ವಾಕ್ಯ ಗುಚ್ಛ, ಒಂದು ಪುಸ್ತಕವಲ್ಲ, ಸಾಹಿತ್ಯ ಎಂದರೆ ಅದು ಒಂದು ಶಕ್ತಿ. ಸಾಹಿತ್ಯದ ಮಾಧ್ಯಮವಾದ ಒಂದು ಪುಸ್ತಕದಿಂದ ಒಂದು ಉತ್ತಮ ಮಾನವನ ನಿರ್ಮಾಣ ಸಾಧ್ಯವಿದೆ ಎಂದು ಮೈಸೂರು ಜಯಜಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕುಮಾರಿ ತೃಪ್ತಿ ಕೆ.ಆರ್. ಹೇಳಿದರು.

    Click Here

    Call us

    Click Here

    ಅವರು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಮಹಾತ್ಮ ಗಾಂಧಿ ಸಭಾಭವನದಲ್ಲಿ ಉಡುಪಿ ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ (ರಿ.) ಮಂಗಳೂರು ಸಹಯೋಗದೊಂದಿಗೆ ಕೋಟ ವಿವೇಕ ವಿದ್ಯಾ ಸಂಸ್ಥೆಗಳು, ಡಾ.ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ(ರಿ.) ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ೨೩ನೇ ವರ್ಷದ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ಮಕ್ಕಳ ಧ್ವನಿ ೨೦೧೬ ಉದ್ಘಾಟಿಸಿ ಮಾತನಾಡಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಶಾಮ ಪ್ರಸಾದ ಎಚ್.ಪಿ. ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಲೂರ ಮಾತನಾಡಿ, ಪ್ರತಿ ಮಗುವಿನ ಆರಂಭಿಕ ಶಿಕ್ಷಣವು ಆ ಮಗುವಿನ ಭದ್ರ ಬುನಾದಿಗೆ ಕಾರಣವಾಗುತ್ತದೆ. ಪ್ರಾರಂಭಿಕ ಶಿಕ್ಷಣ ವ್ಯವಸ್ಥೆಯಲ್ಲಿ ಮಾಲ್ಯಯುತವಾದ ಸತ್ವಯುತವಾದ ವಿಷಯಗಳನ್ನು ಅಳವಡಿಸಿದರೆ ಮಗುವಿನ ಭವಿಷ್ಯಕ್ಕೆ ಅದು ನೆರವಾಗುತ್ತದೆ. ಕೇವಲ ಜಯಂತಿಗಳ ಆಚರಣೆಯಿಂದ ಯಾವುದೇ ಪ್ರಯೋಜನವಿಲ್ಲ ಮಹಾನ್ ವ್ಯಕ್ತಿಗಳ ಆದರ್ಶ ಮಕ್ಕಳಿಗೆ ಪಾಠವಾಗವ ವ್ಯವಸ್ಥೆಯಾಗಬೇಕು ಎಂದರು. ಇದೇ ಸಂದರ್ಭ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ೨೦೧೫ರಲ್ಲಿ ಪುಸ್ತಕ ಪ್ರಕಟಿಸಿದ ಪುಟಾಣಿಗಳಿಗೆ ಗೌರವಧನ ಅರ್ಪಿಸಿದರು.
    ಕಾರ್ಯಕ್ರಮದಲ್ಲಿ ಉದ್ಯಮಿ ಆನಂದ ಸಿ.ಕುಂದರ್, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ವಿಜಯ ಬಲ್ಲಾಳ್, ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ(ರಿ.) ಅಧ್ಯಕ್ಷ ಪ್ರೋ ಸಿ.ಉಪೇಂದ್ರ ಸೋಮಯಾಜಿ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅರ್ಜುನ್ ಶೆಣೈ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅಭಿಷೇಕ್ ಪಿ.ವಿ. ಉಪಸ್ಥಿತರಿದ್ದರು.

    ದ.ಕ.ಮಕ್ಕಳ ಸಾಹಿತ್ಯ ಸಂಗಮದ ಪ್ರಧಾನ ಕಾರ್ಯದರ್ಶಿ ಬಿ.ಶ್ರೀನಿವಾಸ ರಾವ್ ಪ್ರಸ್ತಾವಿಸಿದರು. ವಿವೇಕ ಆಂಗ್ಲ ಮಾಧ್ಯಮ ಶಾಲೆಯ ರಿತೇಶ್ ಕುಂದರ್ ಸ್ವಾಗತಿಸಿದರು. ಪಣಂಬೂರು ಎನ್.ಎಮ್.ಪಿ.ಟಿ. ಆಂಗ್ಲಮಾಧ್ಯಮ ಪ್ರೌಢಶಾಲೆಯ ಭೂಮಿಕಾ ಪ್ರಿಯದರ್ಶಿನಿ ಮತ್ತು ನಂತೂರು ಸ್ವಾಮಿ ಸದಾನಂದ ಸರಸ್ವತಿ ಪ್ರೌಢಶಾಲೆಯ ಶಮಂತ್ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

    ಸಭಾ ಕಾರ್ಯಕ್ರಮಕ್ಕೂ ಮೊದಲು ಕೋಟ ಹಂದೆ ದೇವಸ್ಥಾನದಿಂದ ವಿದ್ಯಾರ್ಥಿಗಳ ಮತ್ತು ಗಣ್ಯರ ಮೆರವಣಿಗೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯ ಭೋಜ ಪೂಜಾರಿ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ ಮತ್ತು ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty + 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.