Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನುಷ್ಯತ್ವಕ್ಕೆ ಗಡಿಗಳಿಲ್ಲ. ಮಾನವೀಯತೆಯನ್ನು ಮೀರಿದ ರಾಷ್ಟ್ರೀಯತೆಯೂ ಇಲ್ಲ: ವರದೇಶ ಹಿರೇಗಂಗೆ
    ಊರ್ಮನೆ ಸಮಾಚಾರ

    ಮನುಷ್ಯತ್ವಕ್ಕೆ ಗಡಿಗಳಿಲ್ಲ. ಮಾನವೀಯತೆಯನ್ನು ಮೀರಿದ ರಾಷ್ಟ್ರೀಯತೆಯೂ ಇಲ್ಲ: ವರದೇಶ ಹಿರೇಗಂಗೆ

    1 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಒಂದು ಧರ್ಮದ ಪರವಾಗಿರುವ ರಾಷ್ಟ್ರವಾದ ಎಂದಿಗೂ ರಾಷ್ಟ್ರೀಯತೆಯಾಗದು. ಎಲ್ಲಾ ಧರ್ಮ, ಭಾಷೆ, ಪಂಗಡವನ್ನೊಳಗೊಂಡ ಸಂವಿಧಾನ ಮಾತ್ರ ಭಾರತದ ಶ್ರೇಷ್ಠ ಗ್ರಂಥ. ಎಲ್ಲರನ್ನೂ ಸಮಾನರಾಗಿ, ಗೌರವದಿಂದ ಕಾಣುವ, ಎಲ್ಲವನ್ನೂ ಒಳಗೊಂಡ ಸಂವಿಧಾನದ ಮೂಲ ತತ್ವವೇ ರಾಷ್ಟ್ರೀಯತೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಕೇಂದ್ರದ ನಿರ್ದೇಶಕ ವರದೇಶ ಹಿರೇಗಂಗೆ ಹೇಳಿದರು.

    Click Here

    Call us

    Click Here

    ಸಮುದಾಯ ಕುಂದಾಪುರ ಇಲ್ಲಿನ ನೇತಾಜಿ ಸಭಾಭವನದಲ್ಲಿ ಆಯೋಜಿಸಿದ್ದ ’ರಾಷ್ಟ್ರೀಯತೆ – ಒಂದು ಮಾತುಕತೆ’ ಸಮುದಾಯ ಸಮೂಹ ಅಧ್ಯಯನದ ವಿಚಾರ ಸಂಕೀರಣದಲ್ಲಿ ಅವರು ಮಾತನಾಡಿದರು.

    ಭಾತರದ ಮಟ್ಟಿಗೆ ರಾಷ್ಟ್ರೀಯತೆ ಎನ್ನುವುದು ಆಧುನಿಕ ಸೃಷ್ಠಿ. ಇಲ್ಲಿ ವಿವಿಧ ಬಗೆಯ ರಾಷ್ಟ್ರೀಯತೆಯನ್ನು ಕಾಣಬಹುದಾದರೂ ಸಂವಿಧಾನವೇ ಪರಮೋಚ್ಚವಾದದ್ದು. ಇದು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ದೇಶದ ಪ್ರಜೆಯೊಬ್ಬ ತನಗೆ ಬಡತನದಿಂದ, ಕೋಮುವಾದದಿಂದ, ಜಾತೀಯತೆಯಿಂದ ಮುಕ್ತಿಬೇಕು ಎಂದು ಹೇಳಿದರೆ, ನೆರೆಯ ರಾಷ್ಟ್ರವನ್ನು ಹೊಗಳಿದರೇ ಅದು ರಾಷ್ಟ್ರವಿರೋಧಿ ಎನ್ನಲಾಗದು. ಗಡಿಯ ರೇಖೆಗಳು ನಮ್ಮ ಸೃಷ್ಠಿ. ಮನುಷತ್ವಕ್ಕೆ ಗಡಿಗಳಿಲ್ಲ. ಮಾನವೀಯತೆಯನ್ನು ಮೀರಿತ ರಾಷ್ಟ್ರೀಯತೆಯೂ ಇಲ್ಲ ಎಂದವರು ತಮ್ಮ ಮಾತಿನುದ್ದಕ್ಕೂ ಪ್ರತಿಪಾದಿಸಿದರು.

    ಭಂಡಾರ್‌ಕಾರ‍್ಸ್ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕ ಡಾ. ಎಸ್. ಹಯವದನ ಉಪಾಧ್ಯ ಮಾತನಾಡಿ ಭಾರತವು ಬಹುರಾಷ್ಟ್ರೀಯತೆಗಳುಳ್ಳ ದೇಶವಾಗಿದ್ದು ಎಲ್ಲವನ್ನೂ ಗೌರವಿಸುವ ಕೆಲಸವಾಗಬೇಕಿದೆ. ಈ ಭೂಮಿ ನಮಗೆ ಸೇರಿದ್ದು ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಇದು ಎಲ್ಲರಿಗೂ ಸೇರಿದ್ದು ಎಂಬುದನ್ನು ಗಮನಿಸಿಬೇಕು.

    ರಾಷ್ಟ್ರೀಯತೆ ಎನ್ನುವುದು ಸಾವಿರಾರು ವರ್ಷಗಳಿಂದ ಬಂದದ್ದು ಎನ್ನುವುದು ತಪ್ಪು ಕಲ್ಪನೆಯಷ್ಟೇ. ಭಾವುಟವನ್ನು ಹಿಡಿದು ಭಾವುಕತೆಯನ್ನು ಮುಂದಿಟ್ಟುಕೊಂಡು ಗಲಾಟೆ ಮಾಡುವುದು ರಾಷ್ಟವಾದವಾಗಲಾರದು. ಇಷ್ಟು ವರ್ಷದ ಬಳಿಕವೂ ಎಲ್ಲರಿಗೂ ಸಮನಾಗಿ ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಸ್ವಾತಂತ್ರ್ಯ ದೊರೆತಿದೆಯೇ ಎಂಬುದರ ಬಗ್ಗೆ ಆಲೋಚಿಸಬೇಕಿದೆ ಎಂದರು.

    Click here

    Click here

    Click here

    Call us

    Call us

    ಸಮುದಾಯ ಕುಂದಾಪುರದ ಅಧ್ಯಕ್ಷ ಉದಯ ಗಾಂವ್ಕರ್, ಕಾರ್ಯದರ್ಶಿ ಸದಾನಂದ ಬೈಂದೂರು ವೇದಿಕೆಯಲ್ಲಿದ್ದರು. ಪ್ರೇಕ್ಷಕರೊಂದಿಗೆ ಸಂವಾದ ಜರುಗಿತು.

    _MG_0649 copy _MG_0652

    Samudaya Kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    1 Comment

    1. Sadanand Byndoor on 29/08/2016 7:16 pm

      Thanks Sunil for nice report

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.