Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಜ್ಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನವೀಕೃತ ಕಟ್ಟಡ ಉದ್ಘಾಟಿನೆ
    ಊರ್ಮನೆ ಸಮಾಚಾರ

    ಗುಜ್ಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನವೀಕೃತ ಕಟ್ಟಡ ಉದ್ಘಾಟಿನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೊಡಗಿಸಿದ ಸಮಯ ನಮ್ಮ ಜೀವನವಿಡಿ ನಮ್ಮ ಜೊತೆ ಬರುತ್ತದೆ. ವಿದ್ಯೆಯೆಂಬ ಧನವನ್ನು ಯಾರಿದಂಲೂ ಕದಿಯಲು ಸಾಧ್ಯವಿಲ್ಲ. ವಿದ್ಯೆಯನ್ನು ಹಂಚಿದಷ್ಟು ಕಡಿಮೆಯಾಗುದಿಲ್ಲ. ಶಾಲೆಗಳಲ್ಲಿ ಅಧ್ಯಾಪಕರು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಅವರನ್ನು ಸರಿದಾರಿಯಲ್ಲಿ ನಡೆಸಿಕೊಂಡು ಹೋಗಬೇಕು, ವಿದ್ಯಾರ್ಥಿಗಳು ತಪ್ಪಿದಾಗ ಬುದ್ಧಿಹೇಳಿ ತಿದ್ದಬೇಕು. ವಿದ್ಯಾಭ್ಯಾಸದಲ್ಲಿ ಮಾನವೀಯ ಗುಣಗಳನ್ನು ಸದ್ಭುದ್ಧಿಗಳ ಮೌಲ್ಯಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ಮಾಡುವುದರಲ್ಲಿ ಅಧ್ಯಾಪಕರ ಪಾತ್ರ ಹಿರಿದು ಎಂದು ದುಬೈನ ಕೊಂಚಾಡಿ ಸಬಿತಾ ಗಣಪತಿ ಶೆಣೈ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ತಾಲೂಕಿನ ಬೈಂದೂರು ವಲಯದ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಂಚಾಡಿ ರಾಧಾ ಶೆಣೈ ಮತ್ತು ಕೊಂಚಾಡಿ ಗೋಪಾಲಕೃಷ್ಣ ಶೆಣೈ ಸ್ಮರಣಾರ್ಥ ಕೊಂಚಾಡಿ ರಾಧಾ ಗೋಪಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರು ಕೊಡುಗೆಯಾಗಿ ನೀಡಿರುವ ಸುಮಾರು ೧೬.೮೦ ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡಿರುವ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ವಿದ್ಯೆಯಿಂದ ಮನುಷ್ಯನು ಪರಿಪೂರ್ಣ ಬೆಳವಣಿಗೆ ಹೊಂದುತ್ತಾನೆ. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಗ್ರಾಮದ ಹಾಗೂ ಶಾಲೆಯ ಬೆಳವಣಿಗಳಲ್ಲಿ ಶಿಕ್ಷಣದ ಪಾತ್ರ ಮಹತ್ವವಾದುದು. ಗ್ರಾಮೀಣ ಪ್ರದೇಶದಲ್ಲಿರುವ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಸಂಪೂರ್ಣ ನವೀಕರಣಗೊಳಿಸಿ ಸಮಾಜಕ್ಕೆ ಅರ್ಪಿಸಿದ ಕೊಂಚಾಡಿ ಗಣಪತಿ ಶೆಣೈ ಅವರ ಕಾರ್ಯ ಶ್ಲಾಘನೀಯ ಎಂದರು.

    ಗೌರವ ಅತಿಥಿಗಳಾದ ದುಬೈನ ಉದ್ಯಮಿ ಕೊಂಚಾಡಿ ಗಣಪತಿ ಶೆಣೈ ಶುಭ ಹಾರೈಸಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸುಜಯೀಂದ್ರ ಹಂದೆ ಅಭಿನಂದನಾ ಮಾತುಗಳನ್ನಾಡಿದರು. ಇದೇ ಸಂದರ್ಭ ಕಟ್ಟಡ ನವೀಕರಣಕ್ಕೆ ಕೊಡುಗೆ ನೀಡಿದ ಕೊಂಚಾಡಿ ಗಣಪತಿ ಶೆಣೈ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಕಟ್ಟಡ ನವೀಕರಣಕ್ಕೆ ಸಹಕರಿಸಿದ ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್, ಪತ್ರಕರ್ತ ಬಿ.ರಾಘವೇಂದ್ರ ಪೈ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಹನುಮಂತ ಬಿಲ್ಲವ ಅವರನ್ನು ಸನ್ಮಾನಿಸಲಾಯಿತು. ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ರಾಜು ದೇವಾಡಿಗ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್, ಪತ್ರಕರ್ತ ಬಿ.ರಾಘವೇಂದ್ರ ಪೈ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಹನುಮಂತ ಬಿಲ್ಲವ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಮೇಶ ಮೇಸ್ತ ಅತಿಥಿಗಳನ್ನು ಪರಿಚಯಿಸಿದರು. ಮೋಹನ ಸನ್ಮಾನಿತರನ್ನು ಪರಿಚಯಿಸಿದರು. ಸಹಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಜಯರಾಮ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.