ಪರಿವರ್ತನ ಕೋಟದಲ್ಲಿ ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪರಿವರ್ತನ ಪುನರ್ ವಸತಿ ಕೇಂದ್ರ , ಮನಸ್ಮಿತಾ ಫೌಂಡೇಶನ್ ,ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ 11ನೇ ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣೆ ಶಿಬಿರ ನಡೆಯಿತು.

Call us

Click Here

ಕಾರ್ಯಕ್ರಮದಲ್ಲಿ ಸಾಸ್ತಾನದ ಭಾರ್ಗವಿ ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ನಂದಿನಿ ರಾಜೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಈ ಪರಿಸರದ ಜನರು ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ಹಾರೈಸಿದರು.

ಪರಿವರ್ತನ ಕೇಂದ್ರದ ವೈದ್ಯಕೀಯ ನಿದೇರ್ಶಕ ಡಾ. ಪ್ರಕಾಶ ಸಿ. ತೋಳರ್ ರವರು ಮಾತನಾಡಿ, ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದೆ. ಬಡ ರೋಗಿಗಳು ಔಷಧ ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಹಕಾರಿಯಾಗಿದೆ ಎಮದರು.

ಪರಿವರ್ತನ ಕೇಂದ್ರದ ನಿರ್ದೇಶಕ ಡಾ. ಸತೀಶ ಪೂಜಾರಿ ಅವರು ಪ್ರಾಸ್ತಾವಿಕವಾಕವಾಗಿ ಮಾತನಾಡಿದರು. ಮನಸ್ಮಿತ ಫೌಂಡೇಶನ್‌ನ ನಿರ್ದೇಶಕರಾದ ಸವಿತಾ. ಪಿ ತೋಳಾರ್, ನೇಹಾ ಎಸ್ ಪೂಜಾರಿ ಉಪಸ್ಥಿತರಿದ್ದರು. ಆಪ್ತ ಸಮಾಲೋಚಕರಾದ ವಿಧಾಯಕ ಸ್ವಾಗತಿಸಿದರು. ಅನುಷಾ ಶೆಟ್ಟ ವಂದಿಸಿದರು.

Leave a Reply