ಎನ್‌ಎಸ್‌ಯುಐ ಬೈಂದೂರು – ವಿದ್ಯಾರ್ಥಿ ಸಾಂಸ್ಕೃತಿಕ ವೈಭವ: ಭಂಡಾರ್‌ಕಾರ್ಸ್ ಕಾಲೇಜು ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನ್ಯಾಶನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಬೈಂದೂರು ಘಟಕದ ಆಶ್ರಯದಲ್ಲಿ ಬೈಂದೂರಿನ ರಾಜರಾಜೇಶ್ವರಿ ಸಭಾಭವನದಲ್ಲಿ ಜರುಗಿದ ವಿದಾರ್ಥಿ ಸಮಾವೇಶ ಹಾಗೂ ವಿದ್ಯಾರ್ಥಿ ಸಾಂಸ್ಕೃತಿಕ ವೈಭವ -2016ರ ಕುಂದಾಪುರ ತಾಲೂಕಿನ ಕಾಲೇಜುಗಳ ಸಾಂಸ್ಕೃತಿಕ ಪ್ರತಿಭಾ ಸ್ವರ್ಧೆಯಲ್ಲಿ ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ವಿಧ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

Call us

Click Here

ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಕ್ರಮವಾಗಿ ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳೂ ಪಡೆದುಕೊಂಡಿದ್ದಾರೆ. ಭಂಡಾರ್‌ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಅತ್ಯುತ್ತಮ ನಿರೂಪಣೆಗಾಗಿ, ರಿಚರ್ಡ್ ಅಲ್ಮೆಡಾ ಕಾಲೇಜಿನ ವಿದ್ಯಾರ್ಥಿನಿ ಅತ್ಯುತ್ತಮ ಯೋಗ ಪ್ರತಿಭೆಗಾಗಿ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ವಿಜೇತರಿಗೆ ಫಲಕ ಹಾಗೂ ನಗದು ಬಹುಮಾನವನ್ನು ಹಸ್ತಾಂತರಿಸಿದರು. ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ಗ್ರೀಷ್ಮಾ ಬೀಡೆ, ಜಗದೀಶ ಹಕ್ಕಾಡಿ, ವಾಸದೇವ ಪೈ, ಕೆಪಿಸಿಸಿ ಸದಸ್ಯ ರಘುರಾಮ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ ಗಾಣಿಗ ಹಾಗೂ ಎನ್‌ಎಸ್‌ಯುಐ ಬೈಂದೂರು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಮಣಿಕಂಠ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

news-nsui-byndoor-vidyarthi-samsratika-vaibhava-2016-3 news-nsui-byndoor-vidyarthi-samsratika-vaibhava-2016-4 news-nsui-byndoor-vidyarthi-samsratika-vaibhava-2016-5 news-nsui-byndoor-vidyarthi-samsratika-vaibhava-2016-7news-nsui-byndoor-vidyarthi-samsratika-vaibhava-2016-2news-nsui-byndoor-vidyarthi-samsratika-vaibhava-2016-8 news-nsui-byndoor-vidyarthi-samsratika-vaibhava-2016-6

Leave a Reply