ಗಂಗೊಳ್ಳಿ: ಬನ್ನಾಡಿ ಸೋಮನಾಥ ಹೆಗ್ಡೆ ಅವರಿಗೆ ಅಭಿನಂದನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮ್ಮಿಲನದ ಕಾರ್ಯಕ್ರಮದಲ್ಲಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಬನ್ನಾಡಿ ಸೋಮನಾಥ ಹೆಗ್ಡೆಯವರನ್ನು ಅಭಿನಂದಿಸಲಾಯಿತು.

Call us

Click Here

ಗಂಗೊಳ್ಳಿ ಮುಖ್ಯ ರಸ್ತೆಯ ವಿಜಯ ವಿಠಲ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರವಾಡದ ಕಲಘಟಗಿ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ, ಖ್ಯಾತ ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಶ್ರೀ ಎಸ್.ಆರ್.ಹಿರೇಮಠ್‌ರವರು ಅವರನ್ನು ಅಭಿನಂದಿಸಿದರು.

ಅಭಿನಂದನೆಯನ್ನು ಸ್ವೀಕರಿಸಿ ಮಾತಾನಾಡಿದ ಬನ್ನಾಡಿ ಸೋಮನಾಥ ಹೆಗ್ಡೆಯವರು ಅಭಿನಂದಿಸಲು ಕಾರಣರಾದ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಸದಸ್ಯರಿಗೆ ಹಾಗೂ ಅಭಿನಂದಿಸಿದ ಎಸ್.ಆರ್. ಹಿರೇಮಠ್‌ರವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ಹಾಗೂ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಇದರ ಅಧ್ಯಕ್ಷರಾದ ಕೆ.ಬಿ.ಖಾರ್ವಿ ಮತ್ತು ಉಪ್ಪುಂದ ಮೀನುಗಾರ ಮುಖಂಡರಾದ, ಎಸ್. ಮದನ್ ಕುಮಾರ್ ಉಪಸ್ಥಿತರಿದ್ದರು. ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಗಂಗೊಳ್ಳಿ ಇದರ ಅಧ್ಯಕ್ಷರಾದ ಜಿ. ಭಾಸ್ಕರ ಖಾರ್ವಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು

Leave a Reply