Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರ್ಮಾಣ ಹಂತದ ಸೇತುವೆಗೆ ಬಸ್‌ ಢಿಕ್ಕಿ: ಓರ್ವ ಗಂಭೀರ
    ಅಪಘಾತ-ಅಪರಾಧ ಸುದ್ದಿ

    ನಿರ್ಮಾಣ ಹಂತದ ಸೇತುವೆಗೆ ಬಸ್‌ ಢಿಕ್ಕಿ: ಓರ್ವ ಗಂಭೀರ

    Updated:21/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಮರವಂತೆ ಬಳಿ ನಿಯಂತ್ರಣ ಚಾಲಕನ ತಪ್ಪಿದ ಸರಕಾರಿ ಬಸ್ಸೊಂದು ಚತುಷ್ಪಥ ಕಾಮಗಾರಿಗಾಗಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಢಿಕ್ಕಿಯಾದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡು ಚಾಲಕರಿಬ್ಬರುಸಹಿತ ಎಂಟು ಮಂದಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬಸ್ಸಿನ ಪ್ರಯಾಣಿಕ ಗದಗ ಜಿಲ್ಲೆಯ ಕಳಸ ಎಂಬಲ್ಲಿಯ ನಿವಾಸಿ ವೀರೇಶ್‌(28) ಎಂದು ಗುರುತಿಸಲಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

    Click Here

    Call us

    Click Here

    ಬಸ್‌ ಚಾಲಕ ಹಾಗೂ ಕಂಡಕ್ಟರ್‌ ಗದಗ ಜಿಲ್ಲೆಯ ಕೋಟಂಗುಚ್ಚಿ ನಿವಾಸಿ ಜೀವನ್‌ ಸಾಬ್‌(41), ಮತ್ತೋರ್ವ ಚಾಲಕ ಬಾದಾಮಿ ಮೂಲದ ಈಶ್ವರ(38), ಪ್ರಯಾಣಿಕರಾದ ಶಿರಹಟ್ಟಿ ತಾಲೂಕಿನ ಮೊಗೇರಿಹೊನೆ ನಿವಾಸಿ ಬಸವರಾಜ್‌(24), ಎಲ್ಲಪ್ಪ ಶಿರಹಟ್ಟಿ (30), ಗದಗ ಜಿಲ್ಲೆಯ ಯಲ್ಲಪ್ಪ (66) , ಗದಗ ಜಿಲ್ಲೆಯ ಮಹಾದೇವಪ್ಪ ಹಳಗೇರಿ (26), ಹಾವೇರಿ ಜಿಲ್ಲೆಯ ರಾಜಪ್ಪ ಬಾಬಣ್ಣ (23), ಧಾರವಾಡದ ಬಸಪ್ಪ ರಾಮಣ್ಣ (53)ಗಾಯಾಳುಗಳು. ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗದಗದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸನ್ನು ಬೈಂದೂರು ತನಕ ಚಾಲಕ ಈಶ್ವರ್‌ ಚಲಾಯಿಸಿದ್ದು, ನಂತರ ಅಲ್ಲಿ ಚಾ ಕುಡಿದ ನಂತರ ಕಂಡಕ್ಟರ್‌ ಜೀವನ್‌ ಸಾಬ್‌ ಬಸ್ಸನ್ನು ಚಲಾಯಿಸುತ್ತಿದ್ದರು. ಬಸ್ಸು ಮರವಂತೆ ಹಾಗೂ ತ್ರಾಸಿ ನಡುವಿನ ಬೀಚ್‌ ರಸ್ತೆಯಲ್ಲಿ ಸಾಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್‌ ಮಾಡುವ ಹಂತದಲ್ಲಿ ಮುಂದಕ್ಕೆ ಚಲಿಸಿ ನಿಯಂತ್ರಣ ಕಳೆದುಕೊಂಡು ತೀರಾ ಎಡಕ್ಕೆ ಚಲಿಸಿದ ಪರಿಣಾಮ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಸೇತುವೆಗೆ ನೇರವಾಗಿ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಮುವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು ಕೆಲವರು ಸಣ್ಣಪುಟ್ಟ ಗಾಯಗೊಂಡಿದೆ.

    ತಪ್ಪಿದ ಭಾರೀ ಅನಾಹುತ: ಬಸ್ಸು ನಿಯಂತ್ರಣ ತಪ್ಪಿ ಸೇತುವೆಗೆ ಇನ್ನಷ್ಟು ವೇಗವಾಗಿ ಢಿಕ್ಕಿಹೊಡೆದಿದ್ದರೆ ಇನ್ನಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅಲ್ಲದೇ ಈ ಸ್ಥಳದಲ್ಲಿ ಮೊದಲಿದ್ದಂತೆ ಸೇತುವೆ ನಿರ್ಮಾಣವಾಗದೇ ಇಲ್ಲವಾದಲ್ಲಿ ಬಸ್ಸು ಸೌಪರ್ಣಿಕ ನದಿಗೆ ಉರುಳುವ ಸಾಧ್ಯತೆ ಇತ್ತು ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಗಂಗೊಳ್ಳಿಯ ಅಂಬುಲೆನ್ಸ್‌ ಸ್ಥಳಕ್ಕೆ ಆಗಮಿಸಿದ್ದು ಗಾಯಾಳುಗಳನ್ನು ಸಾಗಿಸುವಲ್ಲಿ ಸಹಕರಿಸಿತು. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ

    05/06/2026

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026
    Leave A Reply Cancel Reply

    sixteen + three =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.