Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿಯ ಅಂಚೆ ಕಛೇರಿ ಸಮಸ್ಯೆಗಳ ಆಗರ. ಜನರ ಗೋಳು ಕೇಳೋರಿಲ್ಲ
    Recent post

    ಗಂಗೊಳ್ಳಿಯ ಅಂಚೆ ಕಛೇರಿ ಸಮಸ್ಯೆಗಳ ಆಗರ. ಜನರ ಗೋಳು ಕೇಳೋರಿಲ್ಲ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಗಂಗೊಳ್ಳಿ : ಬೆಳೆಯುತ್ತಿರುವ ಪಟ್ಟಣ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಇರುವ ಏಕೈಕ ಅಂಚೆ ಕಛೇರಿಯು ಸಮಸ್ಯೆಗಳ ಆಗರವಾಗಿದ್ದು, ಇಲಾಖೆಯ ಅಸಮರ್ಪಕ ಸೇವೆಯಿಂದ ಜನರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

    Click Here

    Call us

    Click Here

    ಗಂಗೊಳ್ಳಿಯು ಸುಮಾರು ಒಂದು ಸಾವಿರ ಎಕ್ರೆ ವಿಸ್ತೀರ್ಣದ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಸುಮಾರು 25 ಸಾವಿರಕ್ಕೂ ಮಿಕ್ಕಿ ಜನರು ವಾಸಿಸುತ್ತಿದ್ದಾರೆ. ಎರಡು ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಸುಮಾರು 10ಕ್ಕೂ ಮಿಕ್ಕಿ ಸಹಕಾರಿ, ಸೌಹಾರ್ದ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಅಲ್ಲದೆ ಸುಮಾರು 10ಕ್ಕೂ ಮಿಕ್ಕಿ ಶಾಲಾ ಕಾಲೇಜುಗಳು ಗಂಗೊಳ್ಳಿಯಲ್ಲಿ ಮಕ್ಕಳ ವಿದ್ಯಾರ್ಜನೆಯಲ್ಲಿ ತೊಡಗಿಕೊಂಡಿದೆ. ಮೀನುಗಾರಿಕಾ ಚಟುವಟಿಕೆಗಳಿಂದ ಸದಾ ಬ್ಯೂಸಿಯಾಗಿರುವ ಗಂಗೊಳ್ಳಿ ಗ್ರಾಮದ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಕಛೇರಿಯು ಗ್ರಾಹರಿಗೆ ಉತ್ತಮ ಸೇವೆ ನೀಡುವಲ್ಲಿ ವಿಫಲವಾಗಿದೆ.

    ಈ ಹಿಂದೆ ಗಂಗೊಳ್ಳಿಯಲ್ಲಿ ಎರಡು ಅಂಚೆ ಕಛೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಭಾರ ಕಡಿಮೆಯಾದ ಹಿನ್ನಲೆಯಲ್ಲಿ ಬಂದರು ಅಂಚೆ ಕಛೇರಿಯನ್ನು ಮುಚ್ಚಲಾಗಿತ್ತು. ಬಳಿಕ ಗಂಗೊಳ್ಳಿಯ ಮಧ್ಯಭಾಗದಲ್ಲಿ ಬಾಡಿಗೆ ಕಟ್ಟಡದಲ್ಲಿ ಗಂಗೊಳ್ಳಿ ಅಂಚೆ ಕಛೇರಿಯು ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಓರ್ವ ಅಂಚೆ ಪಾಲಕರು, ಇಬ್ಬರು ಪೋಸ್ಟ್‌ಮ್ಯಾನ್ ಹಾಗೂ ಓರ್ವ ಪ್ಯಾಕರ್ ಕಾರ್ಯನಿರ್ವಹಿಸುತ್ತಿದ್ದಾರೆ. ಅಂಚೆ ಕಛೇರಿಯಲ್ಲಿ ಬೆಳಿಗ್ಗೆ ಅಂಚೆ ವಿತರಣೆ ಸೇರಿದಂತೆ ಇನ್ನಿತರ ಕೆಲಸವನ್ನು ನಿರ್ವಹಿಸುವುದರ ಜೊತೆಗೆ ದೂರವಾಣಿ, ವಿದ್ಯುತ್ ಬಿಲ್ಲು ಸ್ವೀಕರಿಸಬೇಕಾಗಿದೆ. ಮಧ್ಯಾಹ್ನ ೨ ಗಂಟೆ ಒಳಗೆ ಅಂಚೆ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಕೆಲಸಗಳನ್ನು ಮುಗಿಸಬೇಕಾಗಿರುವುದರಿಂದ ಅಂಚೆ ಪಾಲಕರು ಕೆಲಸದಿಂದ ಹೈರಾಣಾಗಿದ್ದಾರೆ.

    ಗಂಗೊಳ್ಳಿ ಅಂಚೆ ಕಛೇರಿಯಲ್ಲಿ ಕಾಡುತ್ತಿರುವ ಸಿಬ್ಬಂದಿ ಕೊರತೆಯಿಂದ ಜನರಿಗೆ ಸರಿಯಾದ ಸೇವೆ ದೊರೆಯುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಪ್ರತಿನಿತ್ಯ ನೂರಾರು ಮಂದಿ ಅಂಚೆ ಕಛೇರಿಯಲ್ಲಿ ಸರದಿ ಸಾಲಿನಲ್ಲಿ ನಿಲ್ಲುವ ದೃಶ್ಯ ಮಾಮೂಲಾಗಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಸಾಕಷ್ಟು ಹೆಚ್ಚಳವಾಗಿದೆ ಅಲ್ಲದೆ ಸಂಘ ಸಂಸ್ಥೆಗಳು, ಬ್ಯಾಂಕುಗಳ ಸಂಖ್ಯೆ ಕೂಡ ಹೆಚ್ಚಾಗಿರುವುದರಿಂದ ಸಹಕವಾಗಿಯೇ ಅಂಚೆ ಕಛೇರಿಯ ಕಾರ್ಯ ಹೆಚ್ಚಾಗಿದೆ. ಅಂಚೆ ವಿತರಣೆಯ ಜೊತೆಗೆ ಸರಕಾರದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಪಿಂಚಣಿ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಪೋಸ್ಟ್‌ಮ್ಯಾನ್‌ಗಳು ಮಾಡುತ್ತಿದ್ದಾರೆ. ಗಂಗೊಳ್ಳಿ ಅಂಚೆ ಕಛೇರಿಯಲ್ಲಿ ಕಾರ್ಯಾಭಾರ ಹೆಚ್ಚಾಗಿರುವುದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಿಳಿದಿದ್ದರೂ ಹೆಚ್ಚುವರಿ ಸಿಬ್ಬಂದಿಗಳು ಗಂಗೊಳ್ಳಿಗೆ ನಿಯೋಜನೆ ಮಾಡಿಲ್ಲ. ಕಡಿಮೆ ಕಾರ್ಯಭಾರ ಇರುವ ಅಂಚೆ ಕಛೇರಿಗಳಿಗೆ ಹೆಚ್ಚು ಸಿಬ್ಬಂದಿಗಳಿದ್ದು, ಗಂಗೊಳ್ಳಿಯಲ್ಲಿ ಮಾತ್ರ ಹೆಚ್ಚುವರಿ ಸಿಬ್ಬಂದಿಗಳನ್ನು ನೀಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಿರುವ ಸಿಬ್ಬಂದಿಗಳನ್ನು ದೂರಿದರೆ ಯಾವುದೇ ಪ್ರಯೋಜನವಿಲ್ಲ. ಸಿಬ್ಬಂದಿಗಳು ತಮ್ಮ ಕೈಲಾದಷ್ಟು ಕೆಲಸ ನಿರ್ವಹಿಸುತ್ತಿದ್ದು, ಇನ್ನಷ್ಟು ಸಿಬ್ಬಂದಿಗಳನ್ನು ನೇಮಕ ಮಾಡಿದರೆ ಮಾತ್ರ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ನೆಮ್ಮದಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

    ಗಂಗೊಳ್ಳಿ ಅಂಚೆ ಕಛೇರಿಯಲ್ಲಿ ಈಗಿರುವ ಕೆಲಸದ ಒತ್ತಡ ಕಡಿಮೆ ಮಾಡಲು ಹಾಗೂ ಜನರಿಗೆ ಸರಿಯಾದ ಸೇವೆ ನೀಡಲು ಹೆಚ್ಚುವರಿ ಸಿಬ್ಬಂದಿಗಳ ಅವಶ್ಯಕತೆ ಇದೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಲ್ಲಿ ಸಾರ್ವಜನಿಕರು ಮಾಡಿಕೊಂಡ ಮನವಿಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಮುಂದಿನ ದಿನಗಳಲ್ಲಿ ಬೆಳೆಯುತ್ತಿರುವ ಗಂಗೊಳ್ಳಿ ಪ್ರದೇಶಕ್ಕೆ ಅಂಚೆ ಕಛೇರಿಯಲ್ಲಿ ಸಾಕಷ್ಟು ಸಿಬ್ಬಂದಿಗಳನ್ನು ನೇಮಕ ಮಾಡಿ ಕಛೇರಿಯಲ್ಲಿ ಸಮರ್ಪಕ ಸೇವೆ ನೀಡುವಲ್ಲಿ ಇಲಾಖಾಧಿಕಾರಿಗಳು ಮುಂದಾಗಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಗಂಗೊಳ್ಳಿ ಅಂಚೆ ಕಛೇರಿಯಲ್ಲಿ ಒಬ್ಬರೇ ಅಂಚೆ ಪಾಲಕರಿಂದ ಎಲ್ಲಾ ಕಾರ್ಯಗಳನ್ನು ನಿರ್ವಹಿಸುವುದು ಕಷ್ಟಸಾಧ್ಯ. ಇವರಿಗೆ ಇನ್ನೊಬ್ಬರು ಸಹಾಯಕರನ್ನು ಹಾಗೂ ಅಂಚೆ ವಿತರಣೆ ಸುವ್ಯವಸ್ಥಿತವಾಗಿ ನಡೆಯಲು ಇನ್ನಿಬ್ಬರು ಪೋಸ್ಟ್‌ಮ್ಯಾನ್‌ಗಳನ್ನು ನೇಮಕ ಮಾಡಬೇಕಿದೆ. ಈಗಿನ ಕಾರ್ಯ ಒತ್ತಡ ಕಡಿಮೆ ಮಾಡಲು ಇಲಾಖಾಧಿಕಾರಿಗಳು ಶ್ರಮಿಸಬೇಕು – ಎನ್.ನರೇಶ ಕಿಣಿ, ಉದ್ಯಮಿ, ಗಂಗೊಳ್ಳಿ.

    ಗಂಗೊಳ್ಳಿ ಅಂಚೆ ಕಛೇರಿಗೆ ಸಾಕಷ್ಟು ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಈಗಾಗಲೇ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಲಾಗಿದ್ದು, ಯಾವುದೇ ಸೂಕ್ತ ಸ್ಪಂದನೆ ದೊರೆತಿಲ್ಲ. ಈಗಿನ ಕಾರ್ಯವೈಖರಿ ಜನರಲ್ಲಿ ನಿರಾಸೆ ಮೂಡಿಸಿದೆ. ನಾಗರಿಕರು ಪ್ರತಿನಿತ್ಯ ಸರದಿ ಸಾಲಿನಲ್ಲಿ ನಿಂತು ತಮ್ಮ ದೈನಂದಿನ ಕಾರ್ಯ ಮಾಡಬೇಕಾಗಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮತ್ತು ವ್ಯವಸ್ಥೆ ಸರಿಯಾಗುವ ತನಕ ಹೋರಾಟ ರೂಪಿಸಲಾಗುವುದು – ಎಚ್.ಎಸ್.ಚಿಕ್ಕಯ್ಯ ಪೂಜಾರಿ, ಅಧ್ಯಕ್ಷರು, ನಾಗರಿಕ ಹೋರಾಟ ಸಮಿತಿ ಗಂಗೊಳ್ಳಿ.

    Gangolli Postal department
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ

    21/04/2026

    ಗಂಗೊಳ್ಳಿ: ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ

    20/04/2026

    ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

    15/04/2026
    Leave A Reply Cancel Reply

    five + nine =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.