ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಮ್ಮಾಡಿಯ ಜನತಾ ಪ್ರೌಢಶಾಲೆಯಲ್ಲಿ ೨೦೧೬-೧೭ನೇ ಸಾಲಿನ ಇಂಟರ್ಯಾಕ್ಟ್ ಪದಪ್ರದಾನ ಸಮಾರಂಭ ಇತ್ತೀಚೆಗೆ ರೋಟರಿ ಕ್ಲಬ್ ಕುಂದಾಪುರದ ಅದ್ಯಕ್ಷ ಉದಯಕುಮಾರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಇಂಟರ್ಯಾಕ್ಟ್ನ ನೂತನ ಅಧ್ಯಕ್ಷ ಜಿತಿನ್ ಕುಲಾಲ್, ಕಾರ್ಯದರ್ಶಿ ಶಮಿತಾ ದೇವಾಡಿಗ ಮತ್ತು ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಲಾಯಿತು.
ಮುಖ್ಯ ಅತಿಥಿ ರೋಟರಿ ಕ್ಲಬ್ ಕುಂದಾಪುರದ ಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಮಾತನಾಡಿ ವಿದ್ಯಾರ್ಥಿಗಳು ಆತ್ಮವಿಶ್ವಾಸದ ಮೇಲೆ ನಂಬಿಕೆಯನ್ನಿಟ್ಟುಕೊಂಡು ಕಾರ್ಯ ಪ್ರವೃತ್ತರಾದಾಗ ಯಶಸ್ಸು ಲಭಿಸುತ್ತದೆ. ಓದುವ ಪ್ರಕ್ರಿಯನ್ನು ಸರಳಗೊಳಿಸಿಕೊಂಡು ವಿಭಾಗವನ್ನು ಮಾಡಿಕೊಳ್ಳುವುದರಿಂದ ಸುಲಭವಾಗಿ ಓದಿರುವ ಸಂಗತಿಗಳು ಮನನವಾಗುತ್ತದೆ ಮತ್ತು ಜ್ಞಾಪನ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರು.
ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಮನೋಜ್ ನಾಯರ್ ಉಪಸ್ಥಿತರಿದ್ದರು. ಸಹಶಿಕ್ಷಕ ದಿನಕರ ಅವರು ಸ್ವಾಗತಿಸಿದರು. ಇಂಟರ್ಯಾಕ್ಟ್ ಚೇರ್ಮೆನ್ ರಾಘವೇಂದ್ರ ಚರಣ ನಾವಡ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಗದೀಶ ಕಾರ್ಯಕ್ರಮ ನಿರೂಪಿಸಿದರು.