Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಭೀಕರ ಅಪಘಾತದಲ್ಲಿ ತಾಯಿ-ಮಗು ಬಲಿ
    ಅಪಘಾತ-ಅಪರಾಧ ಸುದ್ದಿ

    ಬೈಂದೂರು: ಭೀಕರ ಅಪಘಾತದಲ್ಲಿ ತಾಯಿ-ಮಗು ಬಲಿ

    Updated:16/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಲ್ಲಿಗೆ ಸಮೀಪದ ಒತ್ತಿನಣೆ ಬಳಿ ಕಂಟೇನರ್ ಹಾಗೂ ಸಾಂಟ್ರೊ ಕಾರಿನ ನಡುವಿನ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಹಸುಗೂಸು ಸ್ಥಳದಲ್ಲಿಯೇ ಮೃತಪಟ್ಟು ಈರ್ವರು ಗಾಯಗೊಂಡ ದಾರುಣ ಘಟನೆ ವರದಿಯಾಗಿದೆ. ಕಾರಿನಲ್ಲಿದ್ದ ನಾಲ್ಕರ ಪೈಕಿ ಸಾರಾ (25), ಆಕೆಯ ಮಗಳು ಫಾತಿಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಆಕೆಯ ಪತಿ ಅಬು ಸಲ್ಮಾನ್ (35), ಹಾಗೂ ಮಗ ಮೊಹಮ್ಮದ್ ರಜೀಕ್ (5) ಗಂಭೀರ ಗಾಯಗೊಂಡಿದ್ದಾರೆ.

    Click Here

    Call us

    Click Here

    ಘಟನೆಯ ವಿವರ:
    ಹೊನ್ನಾವರದ ಸಾರಾ ಅವರ ತವರು ಮನೆಯಿಂದ ಕುಂದಾಪುರದ ಹಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಬೈಂದೂರು ಬಳಿಕ ಒತ್ತಿನಣೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ಸಲ್ಮಾನ್ ಅವರಿಗೆ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಂಟೇನರ್‌ಗೆ ಢಿಕ್ಕಿ ಹೊಡೆದಿದ್ದರ ಕಾರು ಸೀದಾ ಕಂಟೇನರ್ ಹಿಂಭಾಗಕ್ಕೆ ನುಗ್ಗಿ ಜರ್ಜರಿತವಾಗಿದ್ದು ತಾಯಿ ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ರಫೀಕ್‌ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೇ, ಸಲ್ಮಾನ್ ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪ್ರ ಡಾಟ್ ಕಾಂ.

    ಮೂರು ತಿಂಗಳ ಮಗು ಸಾವು:
    ತಾಯಿಯೊಂದಿಗೆ ಇನ್ನೂ ಪ್ರಪಂಚವನ್ನೇ ಸರಿಯಾಗಿ ಅರಿಯದ ಮೂರು ತಿಂಗಳ ಹೆಣ್ಣು ಮಗಳು ಫಾತಿಮಾ ಘಟನೆಯಲ್ಲಿ ಮೃತಪಟ್ಟಿರುವುದು ನೆರೆದಿದ್ದವರ ಕಣ್ಣುಗಳನ್ನು ತೇವವಾಗಿಸಿತ್ತು. ನೂರಾರು ಅಫಘಾತಗಳನ್ನು ನೋಡುವ ಬೈಂದೂರು ಎಸೈ ಮಗುವನ್ನು ಕಾರಿನಿಂದ ಹೊರತೆಗೆಯುವಾಗ ಒಂದು ಕ್ಷಣ ವಿಚಲಿತರಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮೂಲತಃ ಕೊಡಿಯವರಾದ ಅಬು ಸಲ್ಮಾನ್ ಕುಂದಾಪುರದ ಹಂಗಳೂರಿನಲ್ಲಿ ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದರು. ಪತ್ನಿಯನ್ನು ಮರಳಿ ಕರೆತರುವ ಸಲುವಾಗಿ ಹೊನ್ನಾವರಕ್ಕೆ ತೆರಳಿದ್ದರು. ಅಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಇಂದು ಸಂಜೆ ವೇಳೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. © ಕುಂದಾಪ್ರ ಡಾಟ್ ಕಾಂ.

    news-accident-in-ottinane-mother-child-sport-death0news-accident-in-ottinane-mother-child-sport-death-pngnews-accident-in-ottinane-mother-child-sport-death-png

    Click here

    Click here

    Click here

    Call us

    Call us

    accident Byndoor Shiruru
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಡಿ.14ರಿಂದ 08 ದಿನಗಳ ಕಾಲ ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ಆನಂದ ಮದ್ದೋಡಿ

    12/12/2025

    ಡಿ.25ರಂದು ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.