Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂಗ್ಲಿಷ್ ವ್ಯಾಮೋಹದಿಂದ ಮಾತೃಭಾಷೆಗೆ ಕುತ್ತು: ಲೇಖಕಿ ಮಾಧುರಿ ಕೃಷ್ಣ
    Uncategorized

    ಇಂಗ್ಲಿಷ್ ವ್ಯಾಮೋಹದಿಂದ ಮಾತೃಭಾಷೆಗೆ ಕುತ್ತು: ಲೇಖಕಿ ಮಾಧುರಿ ಕೃಷ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಆಂಗ್ಲ ಭಾಷೆಯ ಹಿಂದೆ ಬಿದ್ದಿರುವ ಪೋಷಕರು ಇಂದಿನ ಮಕ್ಕಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಮಾತೃಭಾಷೆಗೆ ಕುತ್ತು ಬಂದೊದಗಿದೆ. ಮನೆಯಲ್ಲಿಯೂ ಇಂಗ್ಲಿಷ್ ಭಾಷೆ ಬಳಕೆಯಾಗುತ್ತಿದ್ದು ಕನ್ನಡ ಭಾಷೆ ಹಾಗೂ ಸಂಸ್ಕೃತಿ ಬೇರು ಮರೆಯಾಗುತ್ತಿದೆ ಎಂದು ಲೇಖಕಿ ಮಾಧುರಿ ಕೃಷ್ಣ ವಿಷಾದ ವ್ಯಕ್ತಪಡಿಸಿದರು.

    Click Here

    Call us

    Click Here

    ಅವರು ಕುಂದಾಪುರ ಬೋರ್ಡ್ ಹೈಸ್ಕೂಲು ಶ್ರೀ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಕುಂದಪ್ರಭ ಆಶ್ರಯದಲ್ಲಿ ಜರುಗಿದ ಬರಹಗಾರರ ಅಕ್ಷರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಅನ್ಯಭಾಷಿಗರನ್ನೂ ಕನ್ನಡದತ್ತ ಸೆಳೆಯುವ ಕೆಲಸ ಆಗದಿದ್ದರೆ ಕನ್ನಡ ಭಾಷೆಗೆ ಅಪಾಯ ತಪ್ಪಿದ್ದಲ್ಲ. ಸಾಹಿತ್ಯ ಕ್ಷೇತ್ರ ಶ್ರೀಮಂತ ಹಾಗೂ ಸದೃಢವಾಗಿ ಬೆಳೆಸಲು ಯುವ ಸಮುದಾಯ ಪಣತೊಡಬೇಕಿದೆ ಎಂದ ಅವರು, ಇಂದಿನ ದಿನಮಾನದಲ್ಲಿ ಸಾಹಿತ್ಯ ಕ್ಷೇತ್ರವೂ ವೇಗವನ್ನು ಕಂಡುಕೊಂಡಿದ್ದು ಸ್ವಲ್ಪ ನಿಧಾನಿಸಿದರೂ ನಮ್ಮನ್ನು ಬೇರೊಬ್ಬರು ಹಿಂದಕ್ಕಿಕ್ಕಿ ಮುಂದೆ ಸಾಗುತ್ತಾರೆ. ಗಟ್ಟಿಯಾದ ಕನಸುಗಳ ಕಟ್ಟಿ ಅದನ್ನು ಸಾಕಾರ ಮಾಡುವ ಪ್ರಯತ್ನ ಮಾಡಿದರೆ ಸಾಹಿತ್ಯ ಕೇತ್ರದಲ್ಲಿ ಒಂದೊಂದೇ ಮೆಟ್ಟಿಲೇರಲು ಸಾಧ್ಯ ಎಂದರು.

    ಜಾನಪದ ಸಂಶೋಧಕ ಪ್ರೊ.ಎ.ವಿ. ನಾವಡ ದಿಕ್ಸೂಚಿ ಭಾಷಣ ಮಾಡಿ ಕುಂದಾಪುರ ಕನ್ನಡ ಅಕಾಡೆಮಿಯನ್ನು ಸರಕಾರ ಸ್ಥಾಪಿಸಿ, ಭಾಷೆ ಬಗ್ಗೆ ಇನ್ನಷ್ಟು ಅಧ್ಯಯನ ಕೈಗೊಳ್ಳಬೇಕಿದೆ. ಕೋಟ ಕನ್ನಡ ಅಥವಾ ಕುಂದಗನ್ನಡದ ಭಾಷಾ ಬಳಕೆ ಕಡಿಮೆಯಾಗುತ್ತಿದ್ದು, ಬಳಕೆ ಮತ್ತು ಬರವಣಿಗೆಯ ಮಾತ್ರ ಜೀವಂತಿಕೆಯಿಂಡಲು ಸಾಧ್ಯವಿದೆ. ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ನಾಟಕ, ಯಕ್ಷಗಾನದಲ್ಲಿ ಕುಂದಗನ್ನಡವನ್ನು ಹೆಚ್ಚು ಬಳಕೆ ಮಾಡಿಕೊಳ್ಳಬೇಕಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹನಿಗವಿ, ಹಿರಿಯ ಸಾಹಿತಿ ಎಚ್. ಡುಂಡಿರಾಜ್ ಮಾತನಾಡಿ ಕುಂದಗನ್ನಡ ಭಾಷೆಯ ಬಳಕೆಯ ಬಗೆಗಿರುವ ಮುಜುಗರದ ಭಾವನೆ ದೂರವಾಗಿ ಅಭಿಮಾನ ಮೂಡುವರೆಗೆ ಅಕಾಡೆಮಿ ಸ್ಥಾಪನೆಯಾದರೂ ಭಾಷೆಯ ಬೆಳವಣಿಗೆ ಸಾಧ್ಯವಿಲ್ಲ. ಆದರೆ ಅಕಾಡೆಮಿಗಳು ಭಾಷೆಯ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸುತ್ತವೆ. ಅಕಾಡೆಮಿಯ ಜೊತೆಗೆ ಭಾಷಾಪ್ರೇಮವೂ ಮೂಡಿದಾಗ ಮಾತ್ರ ಕುಂದಗನ್ನಡ ಬೆಳೆಯಲು ಸಾಧ್ಯವಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ಕುಂದಾಪುರ ಐಎಂಎ ಅಧ್ಯಕ್ಷೆ ಭವಾನಿ ರಾವ್, ಮಂಗಳೂರು ಡಾ.ಆಣ್ಣಯ್ಯ ಕುಲಾಲ್ ಇದ್ದರು, ಜಾದೂಗಾರ ಓಂಗಣೇಶ್ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.  ಕುಂದ್ರಪ್ರಭ ಟ್ರಸ್ಟ್ ಪ್ರವರ್ತಕ ಯು.ಎಸ್.ಶೆಣೈ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ನಿವೃತ್ತ ಉಪನ್ಯಾಸಕ ಕೋ.ಶಿವಾನಂದ ಕಾರಂತ್ ಪ್ರಾಸ್ತಾವನೆಗೈದರು. ಆಕಾಶವಾಣಿ ಕಲಾವಿದ ಗಣೇಶ್ ಗಂಗೊಳ್ಳಿ ಪ್ರಾರ್ಥಿಸಿದರು. ಕುಂದಾಪುರ ಪದವಿಪೂರ್ವ ಕಾಲೇಜ್ ಕನ್ನಡ ಉಪನ್ಯಾಸಕ ವಿಶ್ವನಾಥ ಕರಬ ಮತ್ತು ಇಂಗ್ಲಿಷ್ ಉಪನ್ಯಾಸಕ ರಾಜೀವ ನಾಯ್ಕ್ ನಿರೂಪಿಸಿದರು. ಜಯವಂತ ಪೈ ವಂದಿಸಿದರು.

    Click here

    Click here

    Click here

    Click Here

    Call us

    Call us

    kundaprabha-barahagarara-akshara-sammelana-2016-2 kundaprabha-barahagarara-akshara-sammelana-2016-3 kundaprabha-barahagarara-akshara-sammelana-2016-4 kundaprabha-barahagarara-akshara-sammelana-2016-5kundaprabha-barahagarara-akshara-sammelana-2016-1

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.