ಬೈಂದೂರು: ಪಿಕಪ್ ಗುದ್ದಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಉಪ್ಪುಂದ ಬಿಜೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ಬೊಲೆರೊ ಪಿಕ್‌ಅಪ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಯಡ್ತರೆ ಸಸಿಹಿತ್ಲು ಅಣ್ಣಪ್ಪ ಪೂಜಾರಿ ಅವರ ಪುತ್ರ ಗುರುರಾಜ ಪೂಜಾರಿ (28) ಮೃತ ದುರ್ದೈವಿ.

Call us

Click Here

ಗುರುರಾಜ್ ಯಡ್ತರೆಯಿಂದ ಕುಂದಾಪುರದ ಕಡೆಗೆ ತಮ್ಮ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬೈಂದೂರಿಗೆ ಬರುತ್ತಿದ್ದ ಬೊಲೆರೋ ಪಿಕ್‌ಅಪ್ ವಾಹನಕ್ಕೆ ಢಿಕ್ಕಿಹೊಡೆದ ಪರಿಣಾಮ ಗುರುರಾಜ್ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply