Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಸುವರ್ಣ ಮಹೋತ್ಸವ
    ಊರ್ಮನೆ ಸಮಾಚಾರ

    ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಸುವರ್ಣ ಮಹೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುವುದಲ್ಲದೇ ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದಲ್ಲಿ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ವರ ಸಹಕಾರದೊಂದಿಗೆ ಒಗ್ಗಟ್ಟಿನಿಂದ ಮುಂದುವರಿದರೆ ಏನನ್ನಾದರೂ ಸಾಧಿಸಬಹುದು ಎಂದು ರಾಯಚೂರಿನ ಉದ್ಯಮಿ ಯು. ಸದಾನಂದ ಪ್ರಭು ಹೇಳಿದರು.

    Click Here

    Call us

    Click Here

    ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ನೂತನ ಆಡಳಿತ ಟ್ರಸ್ಟಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ನಮ್ಮಲ್ಲಿರುವ ದ್ವೇಷ, ಮನೆಯ ಸಮಸ್ಯೆಗಳ ಚರ್ಚೆ ಈ ಚೌಕಟ್ಟಿನ ಒಳಗೆ ತಾರದೇ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷಕ್ಕಾಗಿ ಆತ್ಮ, ದೇಹಶುದ್ದರಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಪರಮೋನ್ನತಿಗಾಗಿ ದೇವರಲ್ಲಿ ಪ್ರಾರ್ಥಿಸಬೇಕು ಎಂದರು.

    ಡಾ. ಎಸ್. ಎನ್. ಪಡಿಯಾರ್ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಧರ ಪ್ರಭು, ಎನ್. ಅಚ್ಚುತ ಪೈ ನದಿಕಂಠ, ಬಿ. ಗಣಪತಿ ಪ್ರಭು, ಯು. ವಿಷ್ಣು ಪಡಿಯಾರ್ ಹಾಗೂ ಹಿರಿಯರ ಅನುಪಸ್ಥಿತಿಯಲ್ಲಿ ಹರೀಶ್ ಡಿ. ಭಟ್, ಸರಸ್ವತಿ ಭಟ್, ಎನ್. ನಾಗಪ್ಪಯ್ಯ ಪೈ ಭಟ್ಕಳ, ಯು. ಸತೀಶ್ ಪಡಿಯಾರ್, ಯು. ಶ್ರೀನಾಥ ಪಡಿಯಾರ್, ಯು. ಕಾಶೀನಾಥ ಪಡಿಯಾರ್, ಯು. ಉದಯ್ ಪಡಿಯಾರ್, ಯು. ಸುಧಾಕರ ಪ್ರಭು ಇವರಿಗೆ ಸನ್ಮಾನಿಸಲಾಯಿತು. ನೂತನ ಆಡಳಿತ ಟ್ರಸ್ಟಿಗಳ ಪದಗ್ರಹಣದ ನಂತರ ಅಧಿಕಾರ ಹಸ್ತಾಂತರಿಸಲಾಯಿತು.

    ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪಡಿಯಾರ್ ಯಳಜೀತ, ಉದ್ಯಮಿಗಳಾದ ಕೆ. ವೆಂಕಟೇಶ ಕಿಣಿ, ಕೆ. ಪ್ರಭಾಕರ ಕಿಣಿ, ಯು. ಅನಂತ ಪಡಿಯಾರ್, ಯು. ರಾಜೀವ ಭಟ್, ಯು. ರಾಮಚಂದ್ರ ಪ್ರಭು, ಯು. ವೆಂಕಟೇಶ ಪ್ರಭು, ಟ್ರಸ್ಟಿನ ಉಪಾಧ್ಯಕ್ಷ ರಾಜೇಶ್ ಪೈ, ಲಾವಣ್ಯ ಬೈಂದೂರು ಇದರ ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು, ಜಾದೂಗಾರ ಓಗಣೇಶ್ ಕಾಮತ್ ಉಪಸ್ಥಿತರಿದ್ದರು. ಬಿ. ವಿಠಲದಾಸ್ ಪ್ರಭು ನಿರೂಪಿಸಿದರು. ಆರಂಭದಲ್ಲಿ ಸಮಾಜದ ಮಕ್ಕಳು, ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿಯ ಐವತ್ತರ ಸವಿನೆನಪಿಗಾಗಿ ಬೆಳಿಗ್ಗೆ ದೇವಳದಲ್ಲಿ ಹತ್ತು ಸಮಸ್ತರಿಂದ ಲೋಕಲ್ಯಾಣಾರ್ಥವಾಗಿ ಲಘುವಿಷ್ಣು ಹವನ ನೆರವೇರಿಸಲಾಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

    08/12/2025

    ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ

    08/12/2025

    ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
    • ಕೋಟೇಶ್ವರದ ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು
    • ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ
    • ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ
    • ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d