Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಂಡನ್‌ನಲ್ಲಿ ಮತ್ತೊಮ್ಮೆ ಯಕ್ಷ ಮಿಂಚು ಹರಿಸಲಿರುವ ಕುಂದಾಪುರದ ತರುಣರು
    ಊರ್ಮನೆ ಸಮಾಚಾರ

    ಲಂಡನ್‌ನಲ್ಲಿ ಮತ್ತೊಮ್ಮೆ ಯಕ್ಷ ಮಿಂಚು ಹರಿಸಲಿರುವ ಕುಂದಾಪುರದ ತರುಣರು

    Updated:29/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಂಗ್ಲೆಂಡಿನ ಭಾರತೀಯ ದೂತಾವಾಸ ಆಗಸ್ಟ್‌ನಲ್ಲಿ ಲಂಡನಿನ ಜಿಮಖಾನಾ ಬಯಲಿನಲ್ಲಿ ಏರ್ಪಡಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಬಡಗುತಿಟ್ಟಿನ ಯಕ್ಷಗಾನದ ತುಣುಕೊಂದನ್ನು ಪ್ರದರ್ಶಿಸಿ ಜಾಗತಿಕ ಮಾಧ್ಯಮಗಳೂ ಸೇರಿ ನೆರೆದವರ ಗಮನ ಸೆಳೆದಿದ್ದ ಕುಂದಾಪುರದ ತರುಣರಿಬ್ಬರು ನವೆಂಬರ್ ಮೊದಲ ವಾರದಲ್ಲಿ ಲಂಡನ್ ನಗರದ ಪ್ರಮುಖ ಪ್ರದರ್ಶನ ಕೇಂದ್ರಗಳಲ್ಲಿ ನಡೆಯುವ ’ಲಂಡನ್ ಇಂಟರ್‌ನ್ಯಾಶನಲ್ ಆರ್ಟ್ ಫೆಸ್ಟಿವಲ್’ನಲ್ಲಿ ಇನ್ನೊಮ್ಮೆ ಮಿಂಚುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

    Click Here

    Call us

    Click Here

    ಅಲ್ಲಿನ ಡಂಕ್ಯಾಸ್ಟರ್ ನಗರದಲ್ಲಿ ವೈದ್ಯರಾಗಿರುವ ಬೈಂದೂರು ಮೂಲದ ಗುರುಪ್ರಸಾದ ಪಟ್ವಾಲ್ ಮತ್ತು ಬ್ರಿಸ್ಟಲ್‌ನ ಏರ್‌ಬಸ್ ವಿಮಾನ ತಯಾರಿಕಾ ಕಂಪನಿಯಲ್ಲಿ ತಂತ್ರಜ್ಞರಾಗಿರುವ ಯೋಗೀಂದ್ರ ಮರವಂತೆ ನವಂಬರ್ 5ರಂದು ಇಲ್ಫೋರ್ಡ್‌ನ ರೆಡ್‌ಬ್ರಿಜ್ ಟೌನ್‌ಹಾಲ್‌ನಲ್ಲಿ ’ಕಂಸವಧೆ’ಯ ದೃಶ್ಯವೊಂದನ್ನು ಪ್ರಸ್ತುತಪಡಿಸಲು ಆಮಂತ್ರಿತರಾಗಿದ್ದಾರೆ. ಲಂಡನ್ ಕೇಂದ್ರವಾಗಿಸಿಕೊಂಡು 2012ರಿಂದ ಭಾರತೀಯ ಕಲೆಯನ್ನು ಪ್ರಚುರಪಡಿಸುತ್ತಿರುವ ವಯಲಿನ್ ವಿದುಷಿ ಜ್ಯೋತ್ಸ್ನಾ ಶ್ರೀಕಾಂತ್ ಅವರ ಕಲಾಸಂಸ್ಥೆ ’ಧ್ರುವ್ ಆರ್ಟ್ಸ್’ ಈ ಐದು ದಿನಗಳ ಫೆಸ್ಟಿವಲ್‌ನ ಆಯೋಜಕ. ಭಾರತವೂ ಸೇರಿದಂತೆ ವಿವಿಧ ದೇಶಗಳ ಖ್ಯಾತನಾಮ ಸಂಗೀತ, ನೃತ್ಯ ಕಲಾವಿದರು ಇದರಲ್ಲಿ ಪ್ರದರ್ಶನ ನೀಡುತ್ತಾರೆ. ಇದೇ ಮೊದಲ ಬಾರಿಗೆ ಇದರಲ್ಲಿ ಯಕ್ಷಗಾನ ಸೇರ್ಪಡೆಯಾಗಿದೆ.

    ಬೈಂದೂರಿನ ದಿ. ಗೋವಿಂದ ಪಟ್ವಾಲ್-ಸರೋಜಿನಿ ಅವರ ಪುತ್ರರಾಗಿರುವ ಗುರುಪ್ರಸಾದ್ ಕುಂದಾಪುರ, ಉಡುಪಿಗಳಲ್ಲಿ ಆರಂಭಿಕ ಶಿಕ್ಷಣ, ಮೈಸೂರು ಮತ್ತು ಇಂಗ್ಲೆಂಡಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿದ್ದರೆ ಮರವಂತೆಯ ಎಸ್. ಜನಾರ್ದನ ಯು. ವಸಂತಕುಮಾರಿ ದಂಪತಿಯ ಪುತ್ರ ಯೋಗೀಂದ್ರ, ಮರವಂತೆ ಮತ್ತು ನಾವುಂದದಲ್ಲಿ ಆರಂಭಿಕ ಶಿಕ್ಷಣ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದರು. ಬಾಲ್ಯದಿಂದಲೇ ಯಕ್ಷಗಾನದ ಆಸಕ್ತಿ ಬೆಳೆಸಿಕೊಂಡಿದ್ದ ಉಭಯರು ಆ ಕಲೆಯಲ್ಲಿ ಪರಿಣತರಿಂದ ತರಬೇತಿ ಪಡೆದು ಅದನ್ನು ತಮ್ಮೊಂದಿಗೆ ವಿದೇಶಕ್ಕೆ ಒಯ್ದರು. ಅಲ್ಲಿ ತಮ್ಮ ಬಿಡುವಿನಲ್ಲಿ ಭಾರತೀಯರು ಹಾಗೂ ಅಲ್ಲಿನವರು ನಡೆಸುವ ಕಾರ್ಯಕ್ರಮಗಳಲ್ಲಿ ಯಕ್ಷರಂಜನೆ ನೀಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲೂ ಪ್ರಾತ್ಯಕ್ಷಿಕೆ ನೀಡುತ್ತಿದ್ದಾರೆ. ಸ್ವಾತಂತ್ರ್ಯೋತ್ಸವದ ಅವರ ಪ್ರದರ್ಶನದಿಂದ ಪ್ರಭಾವಿತವಾದ ಎನ್‌ಡಿಟಿವಿ ಅಂದು ನಡೆಸಿದ್ದ ಅವರಿಬ್ಬರ ಸಂದರ್ಶನವನ್ನು ಇದೇ ಅಕ್ಟೋಬರ್ 23ರಂದು ಪ್ರಸಾರ ಮಾಡಿದೆ.

    Read this
    ► ಲಂಡನ್’ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನದ ರಂಗು – http://kundapraa.com/?p=16953

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.