Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪತ್ರಕರ್ತ ಜಾನ್ ಡಿಸೋಜಾಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕುಂದಾಪುರ: ಪತ್ರಕರ್ತ ಜಾನ್ ಡಿಸೋಜಾಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    Updated:31/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರಾವಳಿಯ ಗ್ರಾಮೀಣ ಪತ್ರಿಕೋದ್ಯಮದ ಹೆಸರು ಬಂದಾಗಲೆಲ್ಲಾ ಅಗ್ರಪಂಕ್ತಿಯಲ್ಲಿ ನಿಲ್ಲುವ ಹಿರಿಯ ಪತ್ರಕರ್ತ, ವಿಜಯ ಕರ್ನಾಟಕದ ದೈನಿಕ ಕುಂದಾಪುರದ ಸಿನಿಯರ್ ಕಾಫಿ ಎಡಿಟರ್ ಜಾನ್ ಡಿಸೋಜಾ ಅವರಿಗೆ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

    Click Here

    Call us

    Click Here

    ಬಿಎಸ್ಸಿ ಪದವೀಧರರಾಗಿರುವ ಜಾನ್ ಡಿಸೋಜಾ ಅವರನ್ನು ಸೆಳದದ್ದು ಪತ್ರಿಕೋದ್ಯಮ ಕ್ಷೇತ್ರ. ವಿದ್ಯಾರ್ಥಿಯಾಗಿದ್ದಾಗಲೇ ಕುಂದಪ್ರಭ ವಾರಪತ್ರಿಕೆಯ ಮೂಲಕ ಪತ್ರಿಕೋದ್ಯಮದ ಪ್ರವೇಶಿಸಿದ ಅವರು ಗ್ರಾಮಾಂತರ ಪ್ರದೇಶಗಳು ಹಾಗೂ ತನಿಖಾ ವರದಿಗಾಗಿ ಸುತ್ತಾಟ, ಮನೆ ಮನೆಗೆ ಪತ್ರಿಕೆಯ ಹಾಕುವುದರಿಂದ ಹಿಡಿದು ಸ್ಥಳೀಯ ಪತ್ರಿಕೆಯ ಎಲ್ಲಾ ಆಯಾಮಗಳಲ್ಲಿಯೂ ಅನುಭವ ಪಡೆದವರು. ಅದರ ನಡುವೆ ಜೈಕೊಂಕಣಿ ಕೊಂಕಣಿ ಭಾಷಿಕ ಪತ್ರಿಕೆಯ ಹೊಣೆಗಾರಿಕೆ. ಪದವಿಯ ಬಳಿಕ ೧೯೯೯ರಿಂದ ಒಂದು ವರ್ಷ ಕುಂದಪ್ರಭದ ವರದಿಗಾರರಾಗಿ ಆ ಬಳಿಕ ೨೦೦೧ರಲ್ಲಿ ಹೊಸತಾಗಿ ಆರಂಭಗೊಂಡಿದ್ದ ವಿಜಯ ಕರ್ನಾಟಕ ಪತ್ರಿಕೆಯ ಕುಂದಾಪುರದ ವರದಿಗಾರರಾದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಅಲ್ಲಿಂದಿಚಿಗೆ ಜಾನ್ ಅವರು ಹಿಂತಿರುಗಿ ನೋಡಿದ್ದಿಲ್ಲ. ಸಾಮಾನ್ಯರನ್ನೂ ಸೆಳೆಯುವ ತನ್ನ ವಿಶಿಷ್ಟ ಬರವಣಿಗೆ ಶೈಲಿಯ ಮೂಲಕವೇ ಜನರನ್ನು ತಲುಪಿದ್ದಾರೆ. ಹಳ್ಳಿ ಹಳ್ಳಿಗಳನ್ನು ಸುತ್ತಿ ಕುಂದಾಪುರ ತಾಲೂಕಿನ ಮೂಲೆ ಮೂಲೆಗಳ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಇವರ ಪತ್ರಿಕೋದ್ಯಮದಲ್ಲಿನ ಸೇವೆಯನ್ನು ಪರಿಗಣಿಸಿ ರಾಜೇಶ್ ಶಿಬಾಜೆ ಪ್ರಶಸ್ತಿ, ಅಂಬೇಡ್ಕರ್ ಗೌರವ ಪ್ರಶಸ್ತಿ ಸೇರಿದಂತೆ ಹಲವು ಗೌರವ ಸನ್ಮಾನಗಳು ಸಂದಿವೆ. ಕುಂದಾಪ್ರ ಡಾಟ್ ಕಾಂ.

    ಭಂಡಾರ್‌ಕಾರ‍್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಪ್ರಗತಿಪರರ ಚಿಂತಕರ ವೇದಿಕೆ, ಕೋಣಿ ಯಕ್ಷಗಾನ ಕಲಾ ಸಂಘದಲ್ಲಿ ಸದಸ್ಯರಾಗಿ ತೊಡಗಿಸಿಕೊಂಡಿದ್ದಾರೆ. ದಿ.ಫಿಲಿಪ್ ಡಿಸೋಜ, ತಾಯಿ ಇಸಬೆಲ್ ಡಿಸೋಜ ಅವರ ಪುತ್ರರಾದ ಜಾನ್ ಡಿಸೋಜಾ ಮೂಲತಃ ಬಸ್ರೂರಿನವರು. ಪ್ರಸ್ತುತ ಮಡದಿ ಪೂರ್ಣಿಮಾಜ್ಯೋತಿ ಹಾಗೂ ಇರ್ವರು ಪುತ್ರಿಯರೊಂದಿಗೆ ಕೋಣಿಯಲ್ಲಿ ನೆಲೆಸಿದ್ದಾರೆ. © ಕುಂದಾಪ್ರ ಡಾಟ್ ಕಾಂ.

    – ಸುನಿಲ್ ಹೆಚ್. ಜಿ. ಬೈಂದೂರು

    Click here

    Click here

    Click here

    Call us

    Call us

    Like this:

    Like Loading...

    Related

    Journalist John Dsoza
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d