Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗರಿಗೆದರಿದ ಹಂಪಿ ಪಾರಂಪರಿಕ ನಡಿಗೆ. ನ. 3 ರಿಂದ 5 ಅದ್ದೂರಿ ಹಂಪಿ ಉತ್ಸವ
    ರಾಜ್ಯ

    ಗರಿಗೆದರಿದ ಹಂಪಿ ಪಾರಂಪರಿಕ ನಡಿಗೆ. ನ. 3 ರಿಂದ 5 ಅದ್ದೂರಿ ಹಂಪಿ ಉತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಅಪಾರ ಉಜಿರೆ
    ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮೆಲುಕು ಹಾಕುವ ಹಂಪಿ ಉತ್ಸವವು ಇದೇ ನವೆಂಬರ್ ತಿಂಗಳ ೩, ೪ ಮತ್ತು ೫ರಂದು ಹಂಪಿಯಲ್ಲಿ ನಡೆಯಲಿದ್ದು, ಉತ್ಸವಕ್ಕೆ ಪೂರ್ವಬಾವಿಯಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದರಲ್ಲಿ ಪಾರಂಪರಿಕ ನಡಿಗೆಯು ೨೦೧೬ರ ಹಂಪಿ ಉತ್ಸವದ ವಿಶೇಷ ಆಕರ್ಷಣೆ. ಹಂಪಿ ಸ್ಮಾರಕಗಳನ್ನು ಪರಿಚಯಿಸುವ ಪಾರಂಪರಿಕ ನಡಿಗೆಯನ್ನು ನ೩೦ರಂದು ಬೆಳಗ್ಗೆ ವೀರೂಪಾಕ್ಷ ದೇವಳದ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಡಾ. ವಿ. ರಾಮಪ್ರಸಾರ್ ಮನೋಹರ್ ಪಾರಂಪರಿಕ ನಡಿಗೆಗೆ ಚಾಲನೆ ನೀಡಿದರು

    Click Here

    Call us

    Click Here

    ಪಾರಂಪರಿಕ ನಡಿಗೆಯಲ್ಲಿ ಹಂಪಿಯ ಮಾರ್ಗದರ್ಶಕರ ನೇತೃತ್ವದಲ್ಲಿ ವೀರೂಪಾಕ್ಷ ದೇವಸ್ಥಾನ, ಬಜಾರ್, ಅಚ್ಚ್ಯುತ ದೇಗುಲ ಬಜಾರ್, ಪುಷ್ಕರಣಿ, ಚಕ್ರತೀರ್ಥ, ವರ್ಷ ದಏವಸ್ಥಾನ, ನರಸಿಂಹ ದೇವಸ್ಥಾನ, ಎರಡು ಅಂತಸ್ಥಿನ ಮಂಟಪ, ಸುಗ್ರೀವ ಕಾಲ್ವೆ, ಪುರಾತನ ಸೇತುವೆ, ಪುರಂದರ ಮಂಟಪ, ವಿಜಯವಿಠಲ ದೇವಸ್ಥಾನ, ಕಲ್ಲಿನ ರಥ, ಸಂಗೀತ ಮಂಟಪ ಮೊದಲಾದ ಸ್ಥಳಗಳಿಗೆ ಭೇಟಿ ನೀಡಲಾಯಿತು.

    ಪಾರಂಪರಿಕ ನಡಿಗೆಯಲ್ಲಿ ಕನ್ನಡ ವಿವಿ ಹಂಪಿ, ಹೋಟೆಲ್ ಮಾಲೀಕರ ಸಂಘ, ವ್ಯಾಪಾರಸ್ಥರ ಸಂಘ, ಸ್ಥಳೀಯ ಶಾಲಾ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿಗಳು, ನಾಗರೀಕರು ಮತ್ತು ವಿದೇಶಿ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಧ್ವನಿ ಬೆಳಕು, ಹಂಪಿ ಬೈನೈಟ್, ಬೈಸ್ಕೈಗಳೊಂದಿಗೆ ಜನೋತ್ಸವವಾಗಿ ೨೦೧೬ರ ಹಂಪಿ ಉತ್ಸವ

    ಈ ಬಾರಿಯ ಹಂಪಿ ಉತ್ಸವವನ್ನು ಜನರ ಉತ್ಸವವನ್ನಾಗಿ ಆಚರಿಸಲಿದ್ದು, ಆಗಸದಿಂದ ಹೆಲಿಕ್ಯಾಪ್ಟರ್ ಮೂಲಕ ಹಂಪಿಯನ್ನು ವೀಕ್ಷಿಸುವ ಹಂಪಿ ಬೈ ಸ್ಕೈ ಯೋಜನೆಯನ್ನು ನವೆಂಬರ್ ೧ರಿಂದ ಆರಂಭಿಸಲಾಗುತ್ತಿದೆ. ಅಲ್ಲದೆ ಈ ಬಾರಿ ಹಂಪಿ ಮ್ಯಾರಥಾನ್ ಮತ್ತು ಸ್ಥಳೀಯ ಮಾರ್ಗದರ್ಶಕರ ನರವಿನೊಂದಿಗೆ ಹಂಪಿಯೆಡೆಗೆ ಪಾರಂಪರಿಕ ನಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    Click here

    Click here

    Click here

    Call us

    Call us

    ಕಳೆದ ಎಂಟು ವರ್ಷಗಳಿಂದ ನಡೆಯದ ಧ್ವನಿ ಬೆಳಕು ಕಾರ್ಯಕ್ರಮ ಈ ಬಾರಿಯ ಉತ್ಸವದಲ್ಲಿ ನಡೆಯಲಿದ್ದು ಉತ್ಸವಕ್ಕೆ ವಿಶೆಷ ಮೆರಗನ್ನು ನೀಡಲಿದೆ. ವಿಜಯನಗರದ ವೈಭವವನ್ನು ಕಟ್ಟಿಕೊಡುವುದಕ್ಕಾಗಿ ಕೇಂದ್ರದ ಸಂಸ್ಕೃತಿ ಸಚಿವಾಲಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ. ಈ ಕಾರ್ಯಕ್ರಮ ನ.೩ ರಿಂದ ನ.೭ರವರೆಗೆ ನಿತ್ಯ ರಾತ್ರಿ ೭ ಗಂಟೆಯಿಂದ ೯:೩೦ರ ವರೆಗೆ ಆನೆಸಾಲು ಬಳಿ ನಡೆಯಲಿದೆ. ನ.೨ರಂದು ಗಣ್ಯರಿಗಾಗಿ ಪ್ರದರ್ಶನ ನಡೆಯಲಿದೆ. ಹಂಪಿ ಬೈ ನೈಟ್ ಕಾರ್ಯಕ್ರಮವೂ ಶಾಶ್ವತವಾಗಿ ನಡೆಯಲಿದೆ.

    ಈ ಬಾರಿಯ ಉತ್ಸವದಲ್ಲಿ ನಿತ್ಯವೂ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ ಚಿತ್ರಕಲೆ, ಶಿಲ್ಪಕಲಾ ಶಿಬಿರ ಮತ್ತು ಸ್ಪರ್ಧೆಗಳೂ ನಡೆಯಲಿವೆ. ನ.೩ರಂದು ರೈತರ ಸಮಾವೇಶವನ್ನು ಆಯೋಜಿಸಲಾಗಿದೆ.

    ಉತ್ಸವಕ್ಕೆ ೧೬೦ ಸ್ಥಳೀಯ ಕಲಾವಿದರ ತಂಡ

    ನವೆಂಬರ್ ೩ರಿಂದ ನಡೆಯುವ ಹಂಪಿ ಉತ್ವಕ್ಕೆ ಸ್ಥಳೀಯ ೧೬೦ ಕಲಾವಿದರ ತಂಡಗಳು ಜೊತೆಗೆ ೫೫ ರಾಜ್ಯ, ೧೫ ರಾಷ್ಟ್ರೀಯ ಮತ್ತು ೧೨ ಅಂತಾರಾಷ್ಟ್ರೀಯ ಕಲಾವಿದರನ್ನು ಹಂಪಿ ಉತ್ಸವಕ್ಕೆ ಕರೆಸಲು ನಿರ್ಧರಿಸಲಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ನವೆಂಬರ್ ೩ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದು, ಈ ಬಾರಿ ಎಂಟು ವೇದಿಕೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ಕೃಷಿ ಮೇಳವನ್ನೂ ಉತ್ಸವದಲ್ಲಿ ಹಮ್ಮಿಕೊಳ್ಳಲಾಗಿದೆ.

    news-hampi-utsava2 news-hampi-utsava4 news-hampi-utsava5

    Hampi Utsava 2016
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.