Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾದ ಸುರಭಿ ಸಂಗೀತ ಶಿಬಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾದ ಸುರಭಿ ಸಂಗೀತ ಶಿಬಿರ ಉದ್ಘಾಟನೆ

    Updated:31/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೈಂದೂರು ಸುರಭಿ ಇದರ ಆಶ್ರಯದಲ್ಲಿ ಭಾನುವಾರ ರೋಟರಿ ಸಮುದಾಯ ಭವನದಲ್ಲಿ ೨ ದಿನಗಳ ಕಾಲ ನಡೆಯುವ ಕರ್ನಾಟಕ ಶಾಸ್ತ್ರೀಯ ಹಾಗೂ ಸುಗಮ ಸಂಗೀತ ಕಲಿಕೆಯ ನಾದ ಸುರಭಿ ಶಿಬಿರವನ್ನು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರೊಫೆಸರ್ ಡಾ. ಶ್ರೀಕಾಂತ್ ರಾವ್ ಉದ್ಘಾಟಿಸಿದರು.

    Click Here

    Call us

    Click Here

    ಬಳಿಕ ಮಾತನಾಡಿದ ಅವರು, ಈಗಿನ ಆಧುನಿಕ ಪ್ರಪಂಚದಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಪ್ರಮಾಣ ಹೆಚ್ಚಾಗಿದ್ದು, ಜನ್ಮನೀಡಿದ ತಾಯಿ-ತಂದೆ, ವಿದ್ಯೆ ಕಲಿಸಿದ ಗುರುಗಳ ಮೇಲೆ ಹಲ್ಲೆ ಮಾಡುವಂತ ಮಟ್ಟಿಗೆ ಮಕ್ಕಳು ಬೆಳೆದಿರುವುದು ಬೇಸರತರಿಸುವ ವಿಚಾರವಾಗಿದೆ ಎಂದರು.

    ಹಿಂದೆ ಗ್ರಾಮೀಣ ಭಾಗದಲ್ಲಿ ಹುಟ್ಟುವುದು ಒಂದು ಶಾಪ ಎಂದು ಅಂದುಕೊಂಡಿದ್ದೆವು. ಆಗ ನಮಗೆ ಯಕ್ಷಗಾನ ಬಿಟ್ಟರೆ ಬೇರಾವ ಮನರಂಜನೆಯಿರಲಿಲ್ಲ. ಈಗಿನ ತಾಂತ್ರಿಕತೆಯಿಂದ ಎಲ್ಲವೂ ಬದಲಾವಣೆಯಾಗಿದೆ. ನಾವು ಇಂಟರ್‌ನೆಟ್ ಯುಗದಲ್ಲಿ ಬಹಳ ವೇಗ ಮತ್ತು ಒತ್ತಡಗಳ ಬದುಕು ಸಾಗಿಸುತ್ತಿದ್ದೇವೆ. ಮನಸ್ಸನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯದ ಕಡೆ ಗಮನ ಹರಿಸಲು ಬಿಡುವಿಲ್ಲದೇ ದುಡಿಯುತ್ತಿದ್ದೇವೆ. ಹಣವಿದ್ದರೂ ನೆಮ್ಮದಿ ಇಲ್ಲದ ಜೀವನ ನಡೆಸುವಂತಾಗಿದೆ. ಆಧುನಿಕ ಸಂಸ್ಕಾರಕ್ಕೆ ಒಗ್ಗಿಕೊಂಡು ಮಾನಸಿಕವಾಗಿ ಕುಗ್ಗುತ್ತಿದ್ದೇವೆ ಎಂದರು.

    ಸಾಹಿತಿ ಉಪ್ಪುಂದ ವರಮಹಾಲಕ್ಷ್ಮೀ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ವಿದ್ವಾನ್ ಮದೂರು ಪಿ. ಬಾಲಸುಬ್ರಹ್ಮಣ್ಯಂ ಉಡುಪಿ, ಮೆಸ್ಕಾಂ ಶಾಖಾಧಿಕಾರಿ ರಾಘವೇಂದ್ರ ಎಂ., ರೋಟರಿ ಅಧ್ಯಕ್ಷ ಜಿ. ಮಂಜುನಾಥ ಶೆಟ್ಟಿ ಶುಭಹಾರೈಸಿದರು. ಸುರಭಿ ಅಧ್ಯಕ್ಷ ಶಿವರಾಮ ಕೊಠಾರಿ, ನಿರ್ದೇಶಕ ಸುಧಾಕರ್ ಪಿ., ಉಪಸ್ಥಿತರಿದ್ದರು. ಕೃಷ್ಣಮೂತಿ ಉಡುಪ ಸ್ವಾಗತಿಸಿ, ಗಣಪತಿ ಹೋಬಳಿದಾರ್ ನಿರೂಪಿಸಿದರು. ಸುಮಾರು ೬೦ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಸೋಮವಾರ ಸಂಗೀತ ವಿದ್ವಾನ್ ಮದೂರು ಪಿ. ಬಾಲಸುಬ್ರಹ್ಮಣ್ಯಂ ಉಡುಪಿ, ಮತ್ತು ತಂಡದವರಿಂದ ಗಾನ ಸಂಜೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

    08/12/2025

    ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ

    08/12/2025

    ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
    • ಕೋಟೇಶ್ವರದ ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು
    • ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ
    • ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ
    • ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d