Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡಿಗರಿಗೆ ವಿದೇಶದಲ್ಲೂ ಪ್ರತಿಭಾವಂತರು ಎನ್ನುವ ಹೆಸರಿದೆ: ಎಸಿ ಅಶ್ವಥಿ ಬಣ್ಣನೆ
    ಊರ್ಮನೆ ಸಮಾಚಾರ

    ಕನ್ನಡಿಗರಿಗೆ ವಿದೇಶದಲ್ಲೂ ಪ್ರತಿಭಾವಂತರು ಎನ್ನುವ ಹೆಸರಿದೆ: ಎಸಿ ಅಶ್ವಥಿ ಬಣ್ಣನೆ

    Updated:02/11/2016No Comments
    Facebook Twitter Pinterest LinkedIn WhatsApp Reddit Tumblr Email
    ?????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕನ್ನಡಿಗರು ತಂಬಾ ಭಾವೈಖ್ಯತೆ ಉಳ್ಳವರಾಗಿದ್ದು, ದೇಶದಲ್ಲಷ್ಟೇ ಅಲ್ಲದೆ ವಿದೇಶದಲ್ಲಿ ಕನ್ನಡಿಗರು ಭಾವನಾತ್ಮಕ ಬೆಸುಗೆ ಮೂಲಕ ಕನ್ನಡದ ಕಂಪು ವಿಸ್ತರಿಸಿದ್ದು, ಪ್ರತಿಭಾವಂತರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಲವಾರು ಮಹನೀಯರ ಹೋರಾಟ ಫಲ ಮೈಸೂರು, ಕರ್ನಾಟಕ ರಾಜ್ಯವಾಗಿ ಮರು ನಾಮಕರಣ ಗೊಂಡಿತು. ಹಲವಾರು ಕ್ಷೇತ್ರದಲ್ಲಿ ರಾಜ್ಯ ಪ್ರಗತಿ ಕಂಡಿದ್ದರೂ, ಇನ್ನಷ್ಟು ಪ್ರಗತಿ ಸಾಧಿಸಲು ಕನ್ನಡಿಗರು ಕೈಜೋಡಿಸಬೇಕಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ಎಸ್ ಹೇಳಿದರು.

    ಕುಂದಾಪುರ ತಾಲೂಕು ಪಂಚಾಯತ್, ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ದ್ವಜಾರೋಹಣ ಮತ್ತು ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು.

    ಎಂಟು ಜನ ಕನ್ನಡ ಸಾಹಿತಿಗಳು ಜ್ಞಾನ ಪೀಠ ಪ್ರಶಸ್ತಿ ಪಡೆಯುವ ಮೂಲಕ ಭಾಷೆ ಹಾಗೂ ಸಾಹಿತ್ಯ ಹಿರಿಮೆ ಎತ್ತಿ ಹಿಡಿದು ಭಾಷೆ ಶ್ರೀಮಂತ ಗೊಳಿಸಿದ್ದು, ರಾಜ್ಯ ಸರಕಾರ ಕೂಡಾ ಭಾಷಾ ಅಭಿವೃದ್ಧಿಯ ದೃಷ್ಟಿಯಲ್ಲಿ ಕನ್ನಡ ಭಾಷೆಯ ಆಡಳಿತ ಭಾಷೆಯನ್ನಾಗಿ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಬ್ಬ ಕನ್ನಡಿಗರು ನಾಡು ಹಾಗೂ ದೇಶ ಪ್ರೇಮದ ಮೂಲಕ ಈ ನಾಡಿನ ಅಭಿವೃದ್ಧಿಗೆ ಸಮಯ ಮೀಸಲಿಟ್ಟು ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ಕರ್ನಾಟಕ ಸಾಂಸ್ಕೃತಿವಾಗಿ ಇನ್ನೂ ಶ್ರೀಮಂತವಾಗಿಲಿ ಎಂದು ಆಶಿಸಿದ ಅವರು, ಕರ್ನಾಕಟ ಉದ್ಯಮ, ಶೈಕ್ಷಣಿಕ, ಆರೋಗ್ಯ,ಕೈಗಾರಿಕಾ ಕ್ಷೇತ್ರದಲ್ಲಿ ಬಹಳಷ್ಟು ಪ್ರಗತಿ ಸಾಧಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಇನ್ನಷ್ಟು ಸಾಧನೆ ಮಾಡುವ ಜವಾಬ್ದಾರಿ ಎಲ್ಲಾ ಕನ್ನಡಿಗರ ಮೇಲಿದೆ ಎಂದು ತಿಳಿಸಿದರು.

    ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತ ಮೋಹನ್ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಅಧ್ಯಕ್ಷ ಜಿ.ಎಂ.ಬೋರ್ಕರ್, ಡಿಎಸ್ಪಿ ಪ್ರವೀಣ್ ಎಚ್.ನಾಯ್ಕ್, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಎಸ್. ಕುಂದಾಪುರ ತಾಪಂ ಸದಸ್ಯೆ ರೂಪಾ ಪೈ, ಪುರಸಭೆ ಸದಸ್ಯರಾದ ಪುಷ್ಪಾ ಶೇಟ್, ಶಕುಂತಲಾ ಗುಲ್ವಾಡಿ, ನಾಮ ನಿರ್ದೇಶಕ ಸದಸ್ಯರಾದ ಶ್ರೀರಾಮ ಪುತ್ರನ್, ದೇವಕಿ ಸಣ್ಣಯ್ಯ, ತಾಪಂ ಇಒ ಚೆನ್ನಪ್ಪ ಮೋಯ್ಲಿ ಇದ್ದರು. ಕುಂದಾಪುರ ಅಕ್ಷರ ದಾಸೋಹ ಅಧಿಕಾರಿ ಸೀತಾರಾಮ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್.ಶೆಟ್ಟಿ ವಂದಿಸಿದರು. ಕುಂದಾಪುರ ಪಿಎಸ್ಸೈ ನಾಸೀರ್ ಹುಸೇನ್ ನೇತೃತ್ವದಲ್ಲಿ ಪೊಲೀಸ್, ಗೃಹ ರಕ್ಷಕ ದಳ, ಸ್ಕೌಟ್ ಗೈಡ್ಸ್, ಸೇವಾದಳ ತಂಡಗಳ ಆಕರ್ಷಕ ಪಥ ಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ‍್ಯಕ್ರಮ ಜರುಗಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.