Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲ್ಲಿಕೋಟೆಯಲ್ಲಿ ಶ್ರೀ ಮಂಗಲ ಸಹಸ್ರಚಂಡಿ ಮಹಾಯಾಗ: ಕೊಲ್ಲೂರಿಗೆ ವಿಶೇಷ ರಥ
    ಊರ್ಮನೆ ಸಮಾಚಾರ

    ಕಲ್ಲಿಕೋಟೆಯಲ್ಲಿ ಶ್ರೀ ಮಂಗಲ ಸಹಸ್ರಚಂಡಿ ಮಹಾಯಾಗ: ಕೊಲ್ಲೂರಿಗೆ ವಿಶೇಷ ರಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಕೇರಳದ ಕ್ಯಾಲಿಕಟ್‌ನ ಪಂತೀರನ್‌ಕಾವು ಗಣೇಶ ಸಾಧನ ಕೇಂದ್ರದ ಗುರುಗಳಾದ ಶ್ರೀ ಶ್ರೀ ಯಜ್ಞಾಚಾರ್ಯ ಇವರ ಮಾರ್ಗದರ್ಶನದಲ್ಲಿ ಲೋಕಕಲ್ಯಾರ್ಥವಾಗಿ ನ.೩೦ರಿಂದ ಪ್ರಾರಂಭವಾಗುವ ಶ್ರೀ ಮಂಗಲ ಸಹಸ್ರಚಂಡಿ ಮಹಾಯಾಗದಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ಸನ್ನಿಧಾನದಿಂದ ವಿಶೇಷ ರಥದಲ್ಲಿ ದೀಪಾಗ್ನಿ ಕೊಂಡೊಯ್ಯಲಾಯಿತು.

    Click Here

    Call us

    Click Here

    ಗುರುವಾರ ಬೆಳಿಗ್ಗೆ ಗೋಕರ್ಣ ಕ್ಷೇತ್ರದಿಂದ ತಿಡಂಬೊ (ಪೂಜೆಗೆ ಇಡುವ ಮೂರ್ತಿ) ದೇವರನ್ನು ಹೊತ್ತು ಕೊಲ್ಲೂರಿಗೆ ಸಾಗಿಬಂದ ವಿಶೇಷ ರಥವು ಯಾಗದ ಆರಂಭಕ್ಕೆ ಬೇಕಾದ ದೀಪಾಗ್ನಿಯನ್ನು ದೇವಿಯ ಸನ್ನಿಧಾನದಿಂದ ಪಡೆದು ನಂತರ ಶ್ರೀಕ್ಷೇತ್ರ ಕಟೀಲಿಗೆ ತೆರಳಿತು. ಅಲ್ಲಿಂದ ದೇವಿಯ ಪವಿತ್ರ ಗ್ರಂಥವನ್ನು ಪಡೆದು ನ.೦೬ಕ್ಕೆ ಕಲ್ಲಿಕೋಟೆ ತಲುಪಲಿದೆ. ನ.೧೮ರಿಂದ ಹೊರಡಲಿರುವ ಇನ್ನೊಂದು ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಶ್ರೀಚಂಡಿಕಾ ಮೂರ್ತಿಯನ್ನು ವಿಶೇಷ ರಥದಲ್ಲಿ ಕೇರಳದ ಎಲ್ಲಾ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸಿ ನ.೨೬ರಂದು ಯಾಗಸ್ಥಳಕ್ಕೆ ತರಲಾಗುವುದು. ಅಂದಿನಿಂದ (ನ.೨೬) ಸತತ ೧೨ ದಿನಗಳ ಪರ್ಯಂತ ಯಾಗದ ಸಂಪೂರ್ಣ ವಿಧಿ-ವಿಧಾನಗಳ ಮೂಲಕ ಡಿ.೧೦ರಂದು ಮಹಾಪೂರ್ಣಾಹುತಿ ನೀಡಲಾಗುವುದು. ಹಿಂದೆ ೨೦೦೪ರಲ್ಲಿ ಈ ಯಾಗ ನಡೆದಂತೆ ಈ ಬಾರಿಯೂ ಕೂಡಾ ಸಿದ್ದತೆಯಗುತ್ತಿದೆ ಎಂದು ರಥಯಾತ್ರೆಯ ಉಸ್ತುವಾರಿ ಸುರ್ಜಿತ್ ವಿಜಯವಾಣಿಗೆ ತಿಳಿಸಿದರು.

    ನ.೩೦ರಂದು ಪ್ರಾರಂಭವಾಗಲಿರುವ ಯಾಗಕ್ಕೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಲಿದ್ದು, ವಿಎಚ್‌ಪಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ದೇಶದಾದ್ಯಂತದ ಸಂತರು, ಕೇಂದ್ರ ಹಾಗೂ ರಾಜ್ಯದ ಮಂತ್ರಿಗಳು, ಜನಪ್ರತಿನಿಧಿಗಳು, ಹಿಂದು ಸಂಘಟನೆಗಳ ಮುಖ್ಯಸ್ಥರು, ದೇಶ-ವಿದೇಶದ ಭಕ್ತರು ಈ ಯಾಗದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ನ.೦೬ರಂದು ಕರ್ನಾಟಕ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಭಾಗದ ರಥಯಾತ್ರೆಯ ಸಮಾರೋಪಕ್ಕೆ ಕಲ್ಲಿಕೋಟೆಗೆ ಭೇಟಿನೀಡಲಿದ್ದಾರೆ ಎಂದೂ ಅವರು ತಿಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.