ತ್ರೋಬಾಲ್ ಪಂದ್ಯಾಟ: ನಾಗೇಂದ್ರ ಮೊಗವೀರ ರಾಷ್ಟ್ರಮಟ್ಟಕ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಇಬಿಎಸಿ ತರಗತಿಯ ವಿದ್ಯಾರ್ಥಿ ನಾಗೇಂದ್ರ ಮೊಗವೀರ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ತ್ರೋಬಾಲ್‌ನಲ್ಲಿ ಜಯಗಳಿಸುವ ಮುಖೇನ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಕರ್ನಾಟಕದ ಪರವಾಗಿ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಅವರು ಮಾರ್ಗದರ್ಶನ ನೀಡಿದ್ದರು.ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ಮತ್ತು ಸಿಬ್ಬಂದಿವರ್ಗ ಇಬ್ಬರ ಸಾಧನೆಯನ್ನು ಅಭಿನಂದಿಸಿದೆ.

Call us

Click Here

ವರದಿ : ನರೇಂದ್ರ ಎಸ್ ಗಂಗೊಳ್ಳಿ.

Leave a Reply