Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುತ್ತಿಗೆಯಿಂದ ಹೊಡೆದು ಕೊಲೆ
    ಅಪಘಾತ-ಅಪರಾಧ ಸುದ್ದಿ

    ಸುತ್ತಿಗೆಯಿಂದ ಹೊಡೆದು ಕೊಲೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಉಡುಪಿ: ಕುಡಿತದ ಚಟವಿದ್ದ ಇಬ್ಬರು ಸ್ನೇಹಿತರ ನಡುವೆ ವಿವಾದ ಉಂಟಾಗಿ ಒಬ್ಬಾತ ಸುತ್ತಿಗೆಯಿಂದ ಹೊಡೆದ ಪರಿಣಾಮ ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

    Click Here

    Call us

    Click Here

    ಉದ್ಯಾವರ ಬೊಳ್ಜೆ ಮಾಧವ ತಿಂಗಳಾಯ (65) ಮೃತಪಟ್ಟವರು. ಹೆಂಡತಿ ಮತ್ತು ನಾಲ್ವರು ಮಕ್ಕಳಿದ್ದರೂ ಕುಡಿತದಿಂದಾಗಿ ಮಾಧವ ತಿಂಗಳಾಯ ಮನೆಗೆ ಹೋಗುತ್ತಿರಲಿಲ್ಲ. ಗುಜರಿ ಮಾರಾಟ ಮಾಡುತ್ತಾ ದಿನ ಕಳೆಯುತ್ತಿದ್ದರು ಎನ್ನಲಾಗಿದೆ.

    ಕಳೆದ ಮೂರು ತಿಂಗಳಿಂದ ಮಾಧವ ತಿಂಗಳಾಯ ಮತ್ತು ಅವರಿಗೆ ಪರಿಚಿತನಾದ ಶೇಖರಪ್ಪ (70) ಎಂಬಾತನ ಜತೆಗೆ ಮಲ್ಪೆಯಲ್ಲಿ ತಿರುಗಾಡುತ್ತಾ, ಮೀನುಗಾರಿಕೆ ಇಲಾಖೆಗೆ ಸೇರಿದ ಒಣಗಿದ ಮೀನು ಇಡುವ ಶೆಡ್‌ನಲ್ಲಿ ಉಳಿದುಕೊಳ್ಳುತ್ತಿದ್ದರು. ಶನಿವಾರ ರಾತ್ರಿ ಕೂಡಾ ಈ ಇಬ್ಬರು ಒಟ್ಟಿಗೆ ತಿರುಗಾಡುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಭಾನುವಾರ ಬೆಳಗ್ಗೆ ಸುಲೇಮಾನ್ ಎಂಬವರು ಶೆಡ್ ಸಮೀಪದಿಂದ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದು ಕಂಡಿದೆ. ಅವರು ಪಕ್ಕದ ಐಸ್‌ಪ್ಲಾಂಟ್‌ನ ಧರಣೇಂದ್ರ ಕುಮಾರ್‌ಗೆ ತಿಳಿಸಿದ್ದಾರೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರು ಬಂದು ತನಿಖೆ ನಡೆಸಿದಾಗ ಮೃತಪಟ್ಟಿರುವುದು ಮಾಧವ ತಿಂಗಳಾಯ ಎಂಬುದು ಗೊತ್ತಾಗಿದ್ದು, ಅವರ ತಲೆಗೆ ಏಟು ಬಿದ್ದಿದೆ. ಶವದ ಕಾಲಿನ ಪಕ್ಕದಲ್ಲಿ ಸುತ್ತಿಗೆಯೊಂದು ಬಿದ್ದಿದ್ದು, ಅದರಲ್ಲಿ ರಕ್ತದ ಕಲೆಗಳಿದ್ದು, ಅದರಲ್ಲಿಯೇ ಹೊಡೆದು ಕೊಂದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

    ರಾತ್ರಿ ಮಾಧವ ತಿಂಗಳಾಯ ಜತೆಗೆ ಇದ್ದ ಶೇಖರಪ್ಪ ಬೆಳಗ್ಗೆ ನಾಪತ್ತೆಯಾಗಿರುವುದು ಈ ಶಂಕೆಗೆ ಕಾರಣವಾಗಿದೆ. ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಈ ಕೃತ್ಯ ಎಸಗಿರಬೇಕು ಎಂದು ಶಂಕಿಸಲಾಗಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೇಖರಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವ ಎಂದು ಗೊತ್ತಾಗಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ
    • ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ
    • ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ? ನಾಲ್ವರು ವಶಕ್ಕೆ
    • ಸಮುದ್ಯತಾ ಸಂಸ್ಥೆ ಉದ್ಯಮ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲಿಯೂ ಮುನ್ನುಡಿ ಬರೆಯುತ್ತಿದೆ: ಆನಂದ್ ಸಿ. ಕುಂದರ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.