Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಿಯು ಕಾಲೇಜಿನಲ್ಲಿ ಸಿಇಟಿ ರೆಗ್ಯುಲರ್ ತರಗತಿ
    ಕಾಯ್ದಿರಿಸಿದ ಲೇಖನ

    ಗುರುಕುಲ ಪಿಯು ಕಾಲೇಜಿನಲ್ಲಿ ಸಿಇಟಿ ರೆಗ್ಯುಲರ್ ತರಗತಿ

    Updated:02/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಸತ್ವಭರಿತ ಶಿಕ್ಷಣಕ್ಕೆ ಹೆಸರಾಗಿರುವ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆ 2015-16ನೇ ಸಾಲಿನಲ್ಲಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ರೆಗ್ಯುಲರ್ ತರಗತಿ ಆರಂಭಿಸಲಿದೆ.

    Click Here

    Call us

    Click Here

    ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಪರೀಕ್ಷೆ ಎದುರಿಸುವಲ್ಲಿ ಸಶಕ್ತರಾಗಬೇಕೆಂಬ ನೆಲೆಯಲ್ಲಿ ಸಂಸ್ಥೆ ಉಚಿತ ಶಿಬಿರಕ್ಕೆ ಲಕ್ಷಾಂತರ ರೂ ವ್ಯಯಿಸಿದೆ. ಸಿಇಟಿ ಕೋಚಿಂಗ್‌ನಲ್ಲಿ ದೇಶದಲ್ಲೇ ಅಗ್ರಗಣ್ಯ ಸ್ಥಾನ ಪಡೆದುಕೊಂಡಿರುವ ಹೆದ್ರಾಬಾದ್‌ನ ನಾರಾಯಣಿ ಮತ್ತು ಚೆತನ್ಯ ಇನ್‌ಸ್ಟಿಟ್ಯೂಟ್‌ನ ನುರಿತ ಉಪನ್ಯಾಸಕರು ಇನ್ನು ಮುಂದಕ್ಕೆ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ರೆಗ್ಯುಲರ್ ತರಗತಿ ತೆಗೆದುಕೊಳ್ಳಲಿದ್ದಾರೆ. ಸಿಇಟಿ, ಜೆಇಇ, ಐಐಟಿಯಂತಹ ಪರೀಕ್ಷೆಗೆ ತಳಮಟ್ಟದಿಂದಲೇ ವಿದ್ಯಾರ್ಥಿಗಳನ್ನು ತಯಾರುಗೊಳಿಸುವಲ್ಲಿ ಆಂಧ್ರದ ಈ ಉಪನ್ಯಾಸಕ ವರ್ಗ ಖ್ಯಾತಿ ವೆತ್ತಿದೆ. ಪ್ರಥಮ ಪಿಯುಸಿಯಿಂದಲೇ ಸಿಇಟಿ ತರಗತಿ ಆರಂಭಗೊಳ್ಳುವುದರಿಂದ ದೊಡ್ಡ ಮಟ್ಟದ ವೃತ್ತಿಪರ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಭಯ ನೀಗಲಿದೆ ಎಂದು ತಂಡದ ಪ್ರಮುಖ ತರಬೇತುದಾರ ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.

    ಈ ಬಾರಿ ಸಿಇಟಿ ಕ್ರ್ಯಾಶ್ ಕೋರ್ಸ್‌ನಲ್ಲಿ ನಿರೀಕ್ಷೆಗೂ ಮೀರಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ದ್ದರು. ಈ ನೆಲೆಯಲ್ಲಿ ಸಿಇಟಿ ರೆಗ್ಯುಲರ್ ತರಗತಿ ನಡೆಸಬೇಕೆಂಬ ಇಚ್ಛೆ ಉಂಟಾಯಿತು. ಈ ಶೆಕ್ಷಣಿಕ ವರ್ಷದಿಂದ ಸಿಇಟಿ ಅಲ್ಲದೆ ಜೆಇಇ, ಐಐಟಿ ಮತ್ತು ಎಐಪಿಎಂಟಿ ವಿಷಯಗಳಿಗೆ ಭಾರತದಲ್ಲಿಯೇ ಹೆಸರುವಾಸಿ ಯಾಗಿರುವ ಹೈದ್ರಾಬಾದ್‌ನ ನಾರಾಯಣಿ ಮತ್ತು ಚೈತನ್ಯ ಸಂಸ್ಥೆ ಅನುಭವಿ ಶಿಕ್ಷಕರು ತರಗತಿ ನಡೆಸಿಕೊಡಲಿದ್ದಾರೆ. ಇಲ್ಲಿಯೇ ವಾಸ್ತವ್ಯವಿದ್ದು ಮಾರ್ಗದರ್ಶನ ನೀಡಲಿ ದ್ದಾರೆ. ಸಿಇಟಿಯಲ್ಲಿ ರಾಷ್ಟ್ರೀಯ ಮಟ್ಟದ ತರಬೇತಿ ನೀಡಿದ 20 ವರ್ಷಕ್ಕೂ ಅಧಿಕ ಅನುಭವಿ ಉಪನ್ಯಾಸಕರಿವರು. ಈ ನೆಲೆ ಯಲ್ಲಿ ಪ್ರಥಮ ಪಿಯುಸಿಯಿಂದಲೇ ಈ ಶೆಕ್ಷ ಣಿಕ ವರ್ಷದಲ್ಲಿ ತರಗತಿ ಆರಂಭಿಸ ಲಾಗುತ್ತದೆ. ಅಧ್ಯಯನಕ್ಕೆ ಬೇಕಾಗುವ ಕಲಿಕಾ ಸಾಮಗ್ರಿ, ಪ್ರತಿ ವಿಷಯ ಮತ್ತು ಅಧ್ಯಾಯ ಗಳಿಗೆ ಬೇಕಾಗುವ ಕಲಿಕಾ ಪರಿಕರ, ಪ್ರತಿ ಶನಿವಾರ ಪದವಿ ಪೂರ್ವ ಮಂಡಳಿಯ ಪ್ರಶ್ನೆ ಪತ್ರಿಕೆ ಯನ್ನಾಧರಿಸಿದ ಮಾದರಿ ಪರೀಕ್ಷೆಗಳು, ಪ್ರತಿ ಸೋಮವಾರ ಸಿಇಟಿ ಮಾದರಿ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳ ನಿರಂತರ ವೌಲ್ಯಮಾಪನ ವಿವರಗಳನ್ನು ಪೋಷಕರಿಗೆ ಪ್ರತಿ ವಾರ ತಿಳಿಸಲಾಗುತ್ತದೆ. ಪ್ರತಿ 6 ವಾಕ್ಕೊಮ್ಮೆ ಪೋಷಕರ ಸಭೆ ಕರೆದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸ ಲಾಗುತ್ತದೆ. ಇದೊಂದಿಗೆ ಉಚಿತ ಸೇತು ಬಂಧ(ಬ್ರಿಡ್ಜ್ ಕೋರ್ಸ್) ನೀಡಲಾ ಗುತ್ತದೆ. ಮುಂದಿನ ವರ್ಷ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತ ಆರಂಭಿಸುವ ಬಗ್ಗೆ ಸಂಸ್ಥೆ ಚಿಂತನೆ ನಡೆಸಿದೆ ಎಂದು ಡಾ.ಜಿ.ಎಚ್. ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಿ: ಅನುಪಮಾ ಎಸ್. ಶೆಟ್ಟಿ

    18/03/2026

    ಗುರುಕುಲ ವಿದ್ಯಾಸಂಸ್ಥೆಯಲ್ಲಿ ʼಗುರುಕುಲ ಕಾರ್ನಿವಲ್‌ ಮಕ್ಕಳ ಹಬ್ಬʼ

    28/01/2026

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

    23/10/2025
    Leave A Reply Cancel Reply

    18 − eight =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.