Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಧ್ಯಮದ ಆರ್ಥಿಕ ಯಶಸ್ಸು ಸಂಪಾದಕನ ಯಶಸ್ಸಿನ ಮಾನದಂಡವಾಗಿರುವುದು ಅಪಾಯಕಾರಿ: ರವಿ ಹೆಗಡೆ
    alvas nudisiri

    ಮಾಧ್ಯಮದ ಆರ್ಥಿಕ ಯಶಸ್ಸು ಸಂಪಾದಕನ ಯಶಸ್ಸಿನ ಮಾನದಂಡವಾಗಿರುವುದು ಅಪಾಯಕಾರಿ: ರವಿ ಹೆಗಡೆ

    Updated:20/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮೂಡುಬಿದಿರೆ: `ಮಾಧ್ಯಮಗಳು ನಾಳೆಗಳನ್ನು ನಿರ್ಮಾಣ ಮಾಡುತ್ತಿವೆಯಾ ಅಥವಾ ನಿರ್ನಾಮ ಮಾಡುತ್ತಿವೆಯಾ ಎಂಬ ಪ್ರಶ್ನೆ ಇಂದಿನ ಮಾಧ್ಯಮಗಳನ್ನು ನೋಡಿದಾಗ ಉದ್ಭವಿಸುವುದು ಖಂಡಿತ!’ ಹೀಗೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಉದಯವಾಣಿ ಮಾಧ್ಯಮ ಸಮೂಹದ ಮುಖ್ಯಸ್ಥ ರವಿ ಹೆಗಡೆ. ಆಳ್ವಾಸ್ ನುಡಿಸಿರಿಯಲ್ಲಿ ನಡೆದ `ಮಾಧ್ಯಮ-ನಾಳೆಗಳ ನಿರ್ಮಾಣ’ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. `ಸ್ಪರ್ಧೆ ಇದ್ದಾಗ ಅದರಿಂದ ಹೊರಬರುವ ಫಲಿತಾಂಶ ಯಾವಾಗಲೂ ಗುಣಮಟ್ಟದ್ದಾಗಿರುತ್ತದೆ ಎಂಬುದು ಎಲ್ಲರ ನಂಬಿಕೆ. ದುರದೃಷ್ಟವಶಾತ್ ಮಾಧ್ಯಮಗಳಲ್ಲಿ ಇದಕ್ಕೆ ವ್ಯತಿರಿಕ್ತ ಬದಲಾವಣೆ ಕಂಡು ಬರುತ್ತಿದೆ. ಮಾಧ್ಯಮಗಳಲ್ಲಿ ಪ್ರಬುದ್ಧತೆಯ ಕೊರತೆ ಉಂಟಾಗಿರುವುದರಿಂದ ಈ ನಕಾರಾತ್ಮಕ ಬೆಳವಣಿಗೆ ಉಂಟಾಗುತ್ತಿದೆ’ ಎಂದರು.

    Click Here

    Call us

    Click Here

    `ಮಾಧ್ಯಮಗಳು ಯಾವಾಗಲೂ ನಕಾರಾತ್ಮಕ ಸುದ್ದಿಗಳನ್ನು ಕೊಡುತ್ತವೆ ಎಂಬ ಆರೋಪ ಮಾಧ್ಯಮಗಳ ಮೇಲಿದೆ. ಆದರೆ ಇತ್ತೀಚೆಗೆ ನಡೆಸಿದ ಒಂದು ಟಿ.ಆರ್.ಪಿ. ಸಮೀಕ್ಷೆಯ ಪ್ರಕಾರ ಹೀಗೆ ಮಾಧ್ಯಮಗಳ ಮೇಲೆ ಆರೋಪ ಮಾಡಿದ ಜನರೇ ನಕಾರಾತ್ಮಕ ಸುದ್ದಿಗಳನ್ನು ನೋಡುತ್ತಿದ್ದರು ಎಂಬ ಅಂಶ ಗಮನಕ್ಕೆ ಬಂದಿದೆ. ಆದರೆ ಮಾಧ್ಯಮಗಳು ಈ ಬಗೆಯ ಸುದ್ದಿಯನ್ನು ಕೊಡುವುದರಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳಾಗಿದ್ದು ಖಂಡಿತ. ಖಾಸಗಿ ವಾಹಿನಿಯೊಂದು ಸತತವಾಗಿ ಒಂದು ಅಪಘಾತದ ಸುದ್ದಿಯನ್ನು ತೋರಿಸಿದ ಪರಿಣಾಮ ಇಂದು `ಹರೀಶ್ ಸಾಂತ್ವನ’ದಂತಹ ಯೋಜನೆ ರಾಜ್ಯಮಟ್ಟದಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲೂ ಅನುಷ್ಠಾನಗೊಂಡಿದೆ’ ಎಂದು ಹಲವು ಉದಾಹರಣೆಗಳ ಸಮೇತ ವಿವರಿಸಿದರು.

    ಮನರಂಜನಾ ಮಾಧ್ಯಮಗಳು ಕೆಲವು ಮಿತಿಗಳನ್ನು ದಾಟುತ್ತಿರುವುದು ಸತ್ಯ. ಆರ್ಥಿಕ ಯಶಸ್ಸೇ ಒಬ್ಬ ಸಂಪಾದಕನ ಯಶಸ್ಸಿನ ಮಾನದಂಡವಾಗಿರುವುದು ತುಂಬಾ ಅಪಾಯಕಾರಿ ಬೆಳವಣಿಗೆ. ಇದರಿಂದ ಅನೇಕ ಅನರ್ಥಗಳು ಸೃಷ್ಟಿಯಾಗುತ್ತಿರುವುದು ಸುಳ್ಳಲ್ಲ. ಇನ್ನು ದೃಶ್ಯ ಮಾಧ್ಯಮಗಳಿಗಿಂತ ಹೆಚ್ಚಿನ ಅಪಾಯವನ್ನು ತಂದೊಡ್ಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಸುಳ್ಳನ್ನೇ ಸತ್ಯವನ್ನಾಗಿಸಿ ಜನರನ್ನು ಪ್ರಚೋದಿಸುತ್ತಿರುವ ಕಾರ್ಯ ಈ ಸಾಮಾಜಿಕ ಜಾಲತಾಣಗಳಿಂದಾಗುತ್ತಿದೆ. ಇದನ್ನು ತಡೆಯಲು ಪ್ರಬಲ ಕಾನೂನುಗಳು ಬೇಕೆಂದು ವಿಶ್ಲೇಷಿಸಿದರು.

    ಮಾಧ್ಯಮಗಳಲ್ಲಿ ಒಳ್ಳೆಯ ನಾಳೆಗಳು ಸೃಷ್ಟಿಯಾಗಬೇಕೆಂದರೆ ಮಾಧ್ಯಮದವರೇ ಸ್ವಯಂ ಪ್ರೇರಣೆಯಿಂದ ಕೆಲವು ಚೌಕಟ್ಟುಗಳನ್ನು ನಿರ್ಮಿಸಿಕೊಳ್ಳಬೇಕಿದೆ. ಅಲ್ಲದೇ ಓದುಗರೂ ಕೂಡ ಋಣಾತ್ಮಕತೆಯನ್ನು ಬಿಂಬಿಸುವ ಸುದ್ದಿಗಳನ್ನು ನಿರ್ಲಕ್ಷಿಸಿದಾಗ ಒಳ್ಳೆಯ ಬದಲಾವಣೆಗಳನ್ನು ಕಾಣಬಹುದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    15 + six =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.