Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಕಾರ್ಟೂನು ಹಬ್ಬ 2016ಕ್ಕೆ ಲಾಗಿನ್
    Recent post

    ಕುಂದಾಪುರದಲ್ಲಿ ಕಾರ್ಟೂನು ಹಬ್ಬ 2016ಕ್ಕೆ ಲಾಗಿನ್

    Updated:26/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ತೀಕ್ಷ್ಣ ಗರೆಯ ಕಾರ್ಟೂನು ಪ್ರಬಲ ಅಭಿವ್ಯಕ್ತಿ ಮಾಧ್ಯಮ: ಎಸ್ಪಿ ಅಣ್ಣಾಮಲೈ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಯಾವುದೇ ವಿದ್ಯಮಾನವನ್ನೂ ಸೂಕ್ಷ್ಮವಾಗಿ ಅವಲೋಕಿಸಿ ತೀಕ್ಷ್ಣ ಗೆರೆಗಳ ಮೂಲಕ ಚಿತ್ರಿಸುವ ಬುದ್ಧಿಮತ್ತೆ, ಪ್ರತಿಭೆ ಹಾಗೂ ಸಾಮರ್ಥ್ಯ ವ್ಯಂಗ್ಯಚಿತ್ರಕಾರರಿಗಿದೆ. ಪುಟಗಳಲ್ಲಿ ಹೇಳಬೇಕಾದ್ದನ್ನು ಚಿಕ್ಕ ಕಾರ್ಟೂನು ತಿಳಿಸುತ್ತದೆ. ಹಾಗಾಗಿಯೇ ಇಂದಿಗೂ ಕಾರ್ಟೂನು ಅಭಿವ್ಯಕ್ತಿಯ ಪ್ರಬಲ ಮಾಧ್ಯಮವಾಗಿ ಉಳಿದುಕೊಂಡಿದೆ ಎಂದು ಚಿಕ್ಕಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು

    ಕುಂದಾಪುರ ಕಲಾಮಂದಿರದಲ್ಲಿ ಕಾರ್ಟೂನು ಕುಂದಾಪ್ರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್, ಟಿಎನ್‌ಎಸ್ ’ಕಾರ್ಟೂನು ಹಬ್ಬ’ ಕಾರ್ಯಕ್ರಮಕ್ಕೆ ’ಥಿಂಕ್, ಲಾಫ್ ಎಂಜಾಯ್’ ಎಂಬ ಪಾಸ್‌ವರ್ಡ್ ಬರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

    ನಮ್ಮ ಒಂದು ಕ್ಷಣದ ನಗುವಿನ ಹಿಂದೆ ವ್ಯಂಗ್ಯಚಿತ್ರಕಾರರ ಹಲವು ಗಂಟೆಗಳ ಆಲೋಚನೆ ಹಾಗೂ ಶ್ರಮವಿದೆ. ಎಲ್ಲವನ್ನೂ ಭಿನ್ನವಾಗಿ ನೋಡುವ ದೃಷ್ಟಿಕೋನವೇ ಅವರಲ್ಲಿನ ಭಿನ್ನ ಆಲೋಚನೆಗಳಿಗೆ ಕಾರಣವಾಗುತ್ತದೆ ಎಂದರು.

    ಭಾರತರವು ಹಲವು ವೈರುಧ್ಯಗಳ ದೇಶ. ವ್ಯಂಗ್ಯಚಿತ್ರಕಾರ ಎಲ್ಲವನ್ನೂ ಮೀರಿ, ಹಲವು ಗಡಿಗಳನ್ನು ದಾಟಿ ಬರುತ್ತಾನೆ. ಇದು ಸಹಜವಾಗಿ ಪರ ಪ್ರತಿರೋಧಗಳಿಗೆ ಕಾರಣವಾಗುತ್ತದೆ. ಇಂತಹ ಸಂದರ್ಭದಲ್ಲಿ ನಾವು ವ್ಯಂಗ್ಯಚಿತ್ರಕಾರರ ಬೆಂಬಲಕ್ಕೆ ನಿಲ್ಲಬೇಕಿದೆ. ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರೋತ್ಸಾಹಿಸಿ ಅವರಲ್ಲಿನ ಕಾರ್ಟೂನ್ ಹ್ಯೂಮರ್ ಸಾಯಲು ಬಿಡಬಾರದು ಎಂದರು.

    Click here

    Click here

    Click here

    Call us

    Call us

    ಉಡುಪಿ ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋವೈದ್ಯ ಡಾ. ಪಿ.ವಿ ಭಂಡಾರಿ ಮಾತನಾಡಿ ಎಂಬಿಎ ಮುಗಿಸಿದ್ದರೂ ಬದುಕಿನ ಹಾದಿಯನ್ನು ಬದಲಿಸಿಕೊಂಡು ಕಾರ್ಟೂನು ಕಲೆಯನ್ನು ವೃತ್ತಿಯಾಗಿ ತೆಗೆದುಕೊಂಡ ಸತೀಶ್ ಆಚಾರ‍್ಯ ಅವರ ನಿರ್ಣಯವೇ ದೊಡ್ಡದು. ಇದರ ನಡುವೆಯೇ ಯಶಸ್ಸಿನ ಉತ್ತುಂಗದಲ್ಲಿದ್ದ ಸತೀಶ್ ಆಚಾರ‍್ಯ ಅವರು ಮುಂಬೈ ಮಹಾನಗರವನ್ನು ಬಿಟ್ಟು ಹುಟ್ಟೂರಿಗೆ ಬಂದು ತಾನೂ ಬೆಳೆಯುವುದಲ್ಲದೇ, ಹುಟ್ಟೂರಿನಲ್ಲಿಯೇ ಕಾರ್ಟೂನು ಪರವಾದ ವಾತಾವರಣ ನಿರ್ಮಿಸಿರುವುದು ವಿಶೇಷವೇ ಸರಿ ಎಂದರು.

    ಹಿರಿಯ ಪತ್ರಕರ್ತ ಯು.ಎಸ್. ಶೆಣೈ, ರೋಟರಿ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಯುವ ಮೆರಿಡಿಯನ್‌ನ ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಹಿರಿಯ ವ್ಯಂಗ್ಯಚಿತ್ರಕಾರ ರಾಮಕೃಷ್ಣ ಹೇರ್ಳೆ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ವ್ಯಂಗ್ಯಚಿತ್ರಕಾರ ರವಿಕುಮಾರ್ ಗಂಗೊಳ್ಳಿ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ನಿರೂಪಿಸಿದರು. ಕಾರ್ಟೂನು ಹಬ್ಬದ ಸಂಘಟಕ ಸತೀಶ್ ಆಚಾರ‍್ಯ ವಂದಿಸಿದರು.

    ಪೋಟೋಗಳು: ವಿಶ್ವನಾಥ ಮುನ್ನ, ಛಾಯಾ ಸ್ವುಡಿಯೋ

    138a7222 138a7224 138a7237 138a7246 138a7250138a7255 138a7258 138a7276 138a7280138a7272138a7343 138a7302 138a7306 138a7316138a7367 138a7376 138a7394

    Like this:

    Like Loading...

    Related

    Cartoon Habba 2016 Cartoonist Satish Acharya SP Annamalai
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d