Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಸಿರು ಉತ್ಸವ – 2015: ಬೇಸಿಗೆ ಶಿಬಿರ
    ಕರಾವಳಿ

    ಹಸಿರು ಉತ್ಸವ – 2015: ಬೇಸಿಗೆ ಶಿಬಿರ

    Updated:15/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಶಿರ್ವ: ಮಾಲಿನ್ಯದಂತಹ ವಿಪತ್ತಿನಿಂದ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರಾಗಿದೆ. ಆ ನಿಟ್ಟಿನಲ್ಲಿ ಬಾಲ್ಯದಿಂದಲೇ ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜನ್ ವಿ. ಎನ್. ಹೇಳಿದರು.

    Click Here

    Call us

    Click Here

    ಅವರು ಶಿರ್ವ ಸಂತ ಮೇರಿ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಪಡುಕಳತ್ತೂರು ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕುತ್ಯಾರು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಪಡುಕಳತ್ತೂರು ಶಾಲಾ ವಠಾರದ ಹಸಿರು ಅಂಗಳದಲ್ಲಿ ಪರಿಸರ ಸಂರಕ್ಷಣೆಯ ಕುರಿತಾದ ಹಸಿರು ಉತ್ಸವ-2015 ಮಕ್ಕಳ ನಡಿಗೆ ಪ್ರಕೃತಿಯೆಡೆಗೆ ಎಂಬ ಎರಡು ದಿನದ ಬೇಸಿಗೆ ಶಿಬಿರವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

    ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುತ್ಯಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ ವಹಿಸಿದ್ದರು. ಅತಿಥಿಗಳಾಗಿ ಕಳತ್ತೂರು ಮರಿಯಾ ನಿವಾಸದ ಮುಖ್ಯಸ್ಥರಾದ ಸಿಸ್ಟರ ರೀಟಾ ಫೆರ್ನಾಂಡಿಸ್, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ್ ಡಿ. ಶೆಟ್ಟಿ, ಶಾಲಾ ಮುಖ್ಯೋಪಾದ್ಯಾಯಿನಿ ಶಶಿಕಲಾ ಎನ್ ಮತ್ತು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ವಿಘ್ನೇಶ್‌ ಉಪಸ್ಥಿತರಿದ್ದರು.

    ಸುಮಾರು 45 ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿದ್ದ ಹಸಿರು ಉತ್ಸವದಲ್ಲಿ ಪರಿಸರ ಗೀತೆಗಳು, ಬಣ್ಣಗಳನ್ನು ಬಳಸದೇ ಮಣ್ಣಿನ ಕಲಾಕೃತಿಗಳ ರಚನೆ, ನಿಸರ್ಗದ ಕುರಿತಾದ ಚಿತ್ರಕಲಾ ಸ್ಪರ್ಧೆ, ಕಾಡಿನ ಮಹತ್ವದ ಬಗ್ಗೆ ಉಪನ್ಯಾಸ, ಕಸದಿಂದ ರಸ, ಕೃಷಿ ಭೂಮಿಗೆ ಭೇಟಿಗಳಂತಹ ಹಲವು ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಸಮಾರೋಪ ಸಮಾರಂಭದಲ್ಲಿ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಪ್ರೇಮನಾಥ್, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕಿ ಲಕ್ಷ್ಮೀ ಆಚಾರ್ಯ, ಉಪನ್ಯಾಸಕ ಮಹಮ್ಮದ್ ನಸೀರ್‌ರವರು ಅತಿಥಿಗಳಾಗಿ ಆಗಮಿಸಿದ್ದರು.

    Click here

    Click here

    Click here

    Click Here

    Call us

    Call us

    ಹಸಿರು ಉತ್ಸವವು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಬಿನು, ಸುಶಾಂತಿ, ಕುಮಾರಿ ದೀಕ್ಷಾ ರಿಯಾ, ಸ್ಟೀಫನ್, ನಾಗೇಂದ್ರರಾಜು, ಮೆಲ್ರೋಯ್ ಮತ್ತು ರಾಜೇಶ್‌ ಯಶಸ್ವಿಯಾಗಿ ಸಂಘಟಿಸಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    3 × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.