Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಮಟ್ಟದ ಇಕೋಕ್ಲಬ್‌ಗಳ ಸಮ್ಮೇಳನ ಸಮುದ್ರ 2016
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಮಟ್ಟದ ಇಕೋಕ್ಲಬ್‌ಗಳ ಸಮ್ಮೇಳನ ಸಮುದ್ರ 2016

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಪರಿಸರ ಸಂರಕ್ಷಣೆಯ ಹೊಣೆಗಾರಿಕೆಯಿಂದ ನೆಮ್ಮದಿಯ ಬದುಕು : ಡಾ. ಭಾಸ್ಕರ ಆಚಾರ್ಯ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಂದು ಪರಿಸರ ಆತಂಕದ ಸ್ಥಿತಿಯಲ್ಲಿದ್ದು, ಅದನ್ನು ಊಳಿಸಿ ಸಮದೂಗಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲವಾದಲ್ಲಿ ಮುಂದೊಂದು ದಿನ ಅಪಾಯ ಕಟ್ಟಿಟ್ಟ ಬುತ್ತಿ. ಆದುದರಿಂದ ಪರಿಸರ, ಜೀವ ವೈವಿಧ್ಯವನ್ನು ಸಂರಕ್ಷಿಸುವ ಹೊಣೆಗಾರಿಕೆಯನ್ನು ಪ್ರತಿಯೊಬ್ಬರು ಹೊತ್ತಾಗ ನೆಮ್ಮದಿಯ ಬದುಕು ಸಾಧ್ಯ ಎಂದು ಕೋಟೇಶ್ವರದ ಡಾ. ಎನ್. ಆರ್. ಆಚಾರ್ಯ ಮೆಮೋರಿಯಲ್ ಟ್ರಸ್ಟ್‌ನ ಮುಖ್ಯಸ್ಥರಾದ ಡಾ. ಭಾಸ್ಕರ ಆಚಾರ್ಯ ಹೇಳಿದರು.

    ಅವರು ಫ್ಲೋರಾ ಎಂಡ್ ಫೌನಾ ಕ್ಲಬ್ ಕುಂದಾಪುರ, ಡಾ| ಎನ್. ಆರ್. ಆಚಾರ್ಯ ಮೆಮೋರಿಯಲ್ ಟ್ರಸ್ಟ್ ಕೋಟೇಶ್ವರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ವಲಯದ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಹರಿಪ್ರಸಾದ್‌ನ ಅಕ್ಷತಾ ಸಭಾಂಗಣದಲ್ಲಿ ನ.೨೬ರಂದು ನಡೆದ ಕುಂದಾಪುರ ತಾಲೂಕು ಮಟ್ಟದ ಇಕೋಕ್ಲಬ್‌ಗಳ ಸಮ್ಮೇಳನ ಸಮುದ್ರ ೨೦೧೬ ರಲ್ಲಿ ಡಾ| ಎನ್.ಆರ್. ಆಚಾರ್ಯ ಸ್ಮಾರಕ ಅತ್ಯುತ್ತಮ ಇಕೋ ಕ್ಲಬ್ ಪ್ರಶಸ್ತಿ ಪ್ರದಾನ ನೆರವೇರಿಸಿ ಸಮಾರೋಪ ಬಾಷಣ ಮಾಡಿದರು.

    ಹತ್ತು ಹಲವು ರೀತಿಯಲ್ಲಿ ಪರಿಸರವನ್ನು ವಿರೂಪಗೊಳಿಸುತ್ತಿರುವುದರಿಂದ ಜೀವ ವೈವಿಧ್ಯಗಳು ಅಳಿವಂಚಿನಲ್ಲಿವೆ. ವಿಷಯುಕ್ತ ವಾತಾವರಣ, ಆಹಾರಗಳಿಂದ ಗುಬ್ಬಚ್ಚಿ, ರಣಹದ್ದುಗಳು ನಮ್ಮ ಪರಿಸರದಲ್ಲಿ ಕಾಣ ಸಿಗುವುದು ತೀರ ವಿರಳವಾಗಿದೆ. ಪರಿಸರ ಹಾನಿಯ ನಿರಂತರತೆ ಪ್ರಾಕೃತಿಕ ವಿಕೋಪಕ್ಕೆ ಮುನ್ನುಡಿಯಾಗಿ ಮನುಕುಲ ಅಪಾಯಕ್ಕೆ ಸಿಲುಕಬಹುದು ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಕಾಳಜಿಯನ್ನು ಹೊಂದಿ ಸ್ವಸ್ಥ ಪರಿಸರ, ಸ್ವಸ್ಥ ಜೀವನದ ಪ್ರೇರಕ ಶಕ್ತಿಗಳಾಗಿರಿ ಎಂದವರು ನುಡಿದರು.

    ಇದೇ ಸಂದರ್ಭದಲ್ಲಿ ಡಾ| ಎನ್.ಆರ್. ಆಚಾರ್ಯ ಸ್ಮಾರಕ ಅತ್ಯುತ್ತಮ ಇಕೋ ಕ್ಲಬ್ ಪ್ರಶಸ್ತಿಯನ್ನು ಬಸ್ರೂರಿನ ಸರಕಾರಿ ಪ್ರೌಢಶಾಲೆ ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಕೆದೂರಿನ ಸರಕಾರಿ ಪ್ರೌಢಶಾಲೆ ಪಡೆದುಕೊಂಡರು. ಪರಿಸರ ಚಿತ್ರಕಲೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಲ್ಪಾ ಪ್ರಥಮ, ಧೀರಜ್ ಡಿ. ಪಟೇಲ್ ದ್ವಿತೀಯ, ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಶಾಲೆಯ ವೈಷ್ಣವಿ ಪ್ರಥಮ, ಹಕ್ಲಾಡಿಯ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯ ವಿಖ್ಯಾತ್ ದ್ವಿತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪ್ರೌಢಶಾಲೆ ಪ್ರಥಮ, ಬೈಂದೂರಿನ ಸರಕಾರಿ ಪ. ಪೂ. ಕಾಲೇಜು ದ್ವಿತೀಯ, ಕಿರು ಪ್ರಸಹಸನದಲ್ಲಿ ಗುಜ್ಜಾಡಿಯ ಭಾಸ್ಕರ ಪೈ ಪ್ರೌಢಶಾಲೆ ಪ್ರಥಮ, ಕೆದೂರಿನ ಸರಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.

    Click here

    Click here

    Click here

    Call us

    Call us

    ವೇದಿಕೆಯಲ್ಲಿ ಕುಂದಾಪುರದ ಫ್ಲೋರಾ ಎಂಡ್ ಫೌನಾ ಕ್ಲಬ್‌ನ ಅಧ್ಯಕ್ಷ ಡಾ. ಎಚ್. ಎಸ್. ಮಲ್ಲಿ, ಉಪಾಧ್ಯಕ್ಷ ಪ್ರಶಾಂತ ತೋಳಾರ್, ಕಾರ್ಯದರ್ಶಿ ಎನ್. ಮೋಹನ ಆಚಾರ್ಯ, ಕೋಶಾಧಿಕಾರಿ ಕೆ. ನಾರಾಯಣ, ಸದಸ್ಯರಾದ ಡಾ. ಉತ್ತಮ್‌ಕುಮಾರ್ ಶೆಟ್ಟಿ, ವಸಂತ ಬಂಗೇರ, ಗಣೇಶ್ ಐತಾಳ್ ಇನ್ನಿತರರು ಉಪಸ್ಥಿತರಿದ್ದರು. ಸದಸ್ಯ ಪ್ರವೀಣಕುಮಾರ್ ಟಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಉದಯ ಗಾಂವ್‌ಕರ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.