Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸ ನೋಟು ಅಲಭ್ಯ. ಕೃಷಿಕ, ವ್ಯಾಪಾರಿ, ಜನಸಾಮಾನ್ಯನಿಗೆ ತೊಂದರೆ: ಎಸ್. ರಾಜು ಪೂಜಾರಿ
    ಊರ್ಮನೆ ಸಮಾಚಾರ

    ಹೊಸ ನೋಟು ಅಲಭ್ಯ. ಕೃಷಿಕ, ವ್ಯಾಪಾರಿ, ಜನಸಾಮಾನ್ಯನಿಗೆ ತೊಂದರೆ: ಎಸ್. ರಾಜು ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಹಳೆಯ 500, 1000 ನೋಟುಗಳ ರದ್ಧತಿಯ ಬಳಿಕ ಹೊಸ ನೋಟುಗಳು ಸಮರ್ಪಕವಾಗಿ ಜನರ ಕೈಸೇರುವಲ್ಲಿ ವಿಳಂಬವಾಗುತ್ತಿರುವುದಿಂದ ಗ್ರಾಮೀಣ ಭಾಗದ ಜನಸಾಮಾನ್ಯರು ತೀರಾ ತೊಂದರೆ ಅನುಭವಿಸುವಂತಾಗಿದೆ. ರೈತರು, ಮೀನುಗಾರರು, ಕೂಲಿ ಕಾರ್ಮಿಕರು, ಚಿಲ್ಲರೆ ವ್ಯಾಪಾರಿಗಳು ಹಾಗೂ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಕೈಯಲ್ಲಿ ಹಣವಿಲ್ಲದೇ, ವ್ಯವಹಾರ ವಹಿವಾಟು ನಡೆಸದ ಪರಿಸ್ಥಿತಿ ಬಂದೊದಗಿದೆ. ಹಳೆಯ ನೋಟು ನಿಷೇಧಿಸಿ 22 ದಿನಗಳೇ ಕಳೆದರೂ ಹೊಸ ನೋಟುಗಳು ಗ್ರಾಮೀಣ ಭಾಗವನ್ನು ತಲುಪುತ್ತಿಲ್ಲ. ಎರಡು ಸಾವಿರದ ನೋಟುಗಳಗೆ ಚಿಲ್ಲರೆ ದೊರೆಯದ ಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ.

    Click Here

    Call us

    Click Here

    ಗ್ರಾಮೀಣ ಭಾಗದ ಜನರ ಬಹುಪಾಲು ವ್ಯವಹಾರ ನಡೆಯುವುದೇ ಸಹಕಾರಿ ಸಂಘಗಳು ಹಾಗೂ ಸಹಕಾರಿ ಬ್ಯಾಂಕುಗಳ ಮುಖಾಂತರ. ಲಕ್ಷಾಂತರ ರೈತರು, ಕೂಲಿ ಕಾರ್ಮಿಕರ ಉಳಿತಾಯ ಖಾತೆಗಳ ಸಹಕಾರಿ ಸಂಘಗಳಲ್ಲಿವೆ. ಬ್ಯಾಂಕುಗಳಲ್ಲಿ ನೋಟು ವಿನಮಯ, ಠೇವಣಿಗೆ ಅವಕಾಶ ಮಾಡಿಕೊಟ್ಟು ಸಹಕಾರಿ ಸಂಘಗಳಲ್ಲಿ ಈ ಅಧಿಕಾರ ಮೊಟಕುಗೊಳಿಸಿರುವ ಕ್ರಮವೇ ಖಂಡನಾರ್ಹವಾಗಿದೆ. ಬ್ಯಾಂಕುಗಳಿಗೆ ಹೊಸ ನೋಟುಗಳನ್ನು ನೀಡುತ್ತಿರುವ ಆರ್.ಬಿ.ಐ ಸಹಕಾರಿ ಸಂಘಗಳಿಗೆ ಹೊಸ ನೋಟುಗಳು ದೊರೆಯುವಂತೆ ಮಾಡದೇ ಸಂಘವನ್ನು ಅವಲಂಬಿಸಿಕೊಂಡಿದ್ದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ.

    raju-poojaryಕರಾವಳಿ, ಮಲೆನಾಡು ಭಾಗಗಳಲ್ಲಿ ರೈತರು, ಮೀನುಗಾರರ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಕೊಳ್ಳುವವರಿಲ್ಲ. ರೈತನಿಗೆ ಹಣ ನೀಡಲು ಮಧ್ಯವರ್ತಿಗಳ ಬಳಿ ಹಣವೇ ಇಲ್ಲ. ಕೂಲಿ ಕಾರ್ಮಿಕನಿಗೆ ಸರಿಯಾದ ಕೂಲಿಯೂ ದೊರೆಯುತ್ತಿಲ್ಲ. ಬ್ಯಾಂಕುಗಳಲ್ಲಿ ಹಣ ಪಡೆಯುವ ಗರಿಷ್ಠ ಮಿತಿಯನ್ನು 24,000ರೂ.ಗೆ ಸೀಮಿತಗೊಳಿಸಿರುವುದು ವ್ಯವಹಾರ ನಡೆಸುವವರಿಗೆ ತೊಂದರೆಯಾಗುತ್ತಿರುವುದಲ್ಲದೇ, ಆದಾಯವನ್ನು ನಂಬಿ ಬದುಕು ಸಾಗಿಸುವ ಬಡ ಮಧ್ಯಮ ವರ್ಗದವರ ಬಳಿ ಹಣವೇ ಇಲ್ಲದ ಸ್ಥಿತಿ ಎದುರಾಗಿದೆ.

    ಕಾಳಧನವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರಕಾರ ಕೈಗೊಂಡ ಕ್ರಮವನ್ನು ಸ್ವಾಗತಿಸಬಹುದಾದರೂ ಅದರ ಅನುಷ್ಠಾನದಲ್ಲಿ ಎಡವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇಡೀ ಯೋಜನೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ.

    ಮಹಿಳೆಯರು ಮನೆಯಲ್ಲಿ ಇಟ್ಟುಕೊಂಡಿರುವ ಹಣ, ಬಡವರು ತಮ್ಮ ತುರ್ತು ಕಾರ್ಯಗಳಿಗಾಗಿ ಪಡೆದಿಟ್ಟುಕೊಂಡ ಹಣ ಎಲ್ಲವನ್ನು ಕಪ್ಪುಹಣವೆಂಬಂತೆ ಪರಿಗಣಿಸುವ ಸ್ಥಿತಿಯುನ್ನು ಕೇಂದ್ರ ಸರಕಾರ ನಿರ್ಮಾಣ ಮಾಡಿದೆ. ಆದಾಯ ತೆರಿಗೆ ವಿನಾಯಿತಿಯ ಪ್ರಮಾಣದಲ್ಲಿಯೂ ಗೊಂದಲ ಇರುವುದರಿಂದ ತಮ್ಮ ಕೈಯಲ್ಲಿರುವ ಹಣವನ್ನು ಹೇಗೆ ಬ್ಯಾಂಕಿಗೆ ಕಟ್ಟುವುದು ಹಾಗೂ ಸಹಕಾರಿ ಸಂಘಗಳಲ್ಲಿ ಮಾತ್ರ ಖಾತೆ ಹೊಂದದ್ದವರು ಹಣ ಠೇವಣಿ ಮಾಡುವ ಕಾರಣಕ್ಕೆ ದೂರ ದೂರದ ಬ್ಯಾಂಕುಗಳಲ್ಲಿ ತೆರಳಿ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ಎದುರಾದದ್ದು ಮಾತ್ರ ಖೇದಕರ.

    Click here

    Click here

    Click here

    Call us

    Call us

    ಒಟ್ಟನಲ್ಲಿ ಕೇಂದ್ರ ಸರಕಾರದ ಅವ್ಯವಸ್ಥಿತ, ಅಸ್ಪಷ್ಟ ನಿಲುವಿನಿಂದಾಗಿ ರೈತರ ಉತ್ಪನ್ನಗಳಿಗೆ ಬೆಲೆಯಿಲ್ಲ ಕೊಳ್ಳುವವರೂ ಇಲ್ಲ, ಜನಸಾಮಾನ್ಯರ ಬಳಿ ಹಣವಿಲ್ಲ. ಸಹಕಾರಿ ಸಂಘಗಳಿಗೆ ಹೊಸ ನೋಟುಗಳನ್ನು ಬಿಡುಗಡೆ ಮಾಡದೇ ಇರುವುದರಿಂದ ಇಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಈ ಬೇರೆ ಮಾರ್ಗವೂ ಕಾಣುತ್ತಿಲ್ಲ.

    ಹಳೆಯ ನೋಟುಗಳ ನಿಷೇಧದ ಬಗೆಗೆ ಸ್ಪಷ್ಟವಾದ ಗುರಿ ಇಲ್ಲದೇ ಏಕಾಏಕಿ ಕೈಗೊಂಡಿರುವ ನಿರ್ಣಯದಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳ ಜನಸಾಮಾನ್ಯರು, ರೈತರು, ಮಧ್ಯವರ್ತಿಗಳು, ಮೀನುಗಾರರು, ಚಿಲ್ಲರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು ತೀವ್ರ ತರನಾದ ತೊಂದರೆ ಅನುಭವಿಸುವಂತೆ ಮಾಡಲಾಗಿದೆ. ಬ್ಯಾಂಕುಗಳನ್ನು ಸರಾಗವಾಗಿ ಹಣಕಾಸಿನ ವಹಿವಾಟು ನಡೆಸಲು ಅವಕಾಶ ನೀಡಿ ಶ್ರೀಮಂತರಿಗೆ ಅವಕಾಶ ಮಾಡಿಕೊಟ್ಟ ಕೇಂದ್ರ ಸರಕಾರ, ಗ್ರಾಮೀಣ ಭಾಗದ ವ್ಯವಹಾರ ನಡೆಯುವ ಸಹಕಾರಿ ಸಂಘಗಳ ವಹಿವಾಟಿಗೆ ಮೇಲೆ ನಿಯಂತ್ರಣ ಹೇರಿ ಸಹಕಾರಿ ಬ್ಯಾಂಕು ಸಂಘಗಳ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮೀಣ ಭಾಗದ ಜನ ತೊಂದರೆ ಅನುಭವಿಸುವಂತೆ ಮಾಡಿರುವ ಕ್ರಮ ಖಂಡನಾರ್ಹ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    Like this:

    Like Loading...

    Related

    Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d