ಏಡ್ಸ್ ಬಗ್ಗೆ ಅರಿವು ಮೂಡಿಸಿ, ನಿಯಂತ್ರಣಕ್ಕೆ ತರುವಂತಾಗಬೇಕು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ “ವಿಶ್ವ ಏಡ್ಸ್ ದಿನ”ದ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ ಮತ್ತು ಯೂತ್ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Call us

Click Here

ಚಿನ್ಮಯಿ ಆಸ್ಪತ್ರೆ ಕುಂದಾಪುರ ಇದರ ನಿರ್ದೇಶಕರಾದ ಡಾ| ಉಮೇಶ್ ಪುತ್ರನ್ ಮಾತನಾಡಿ ನಾವು ಏಡ್ಸ್ ದಿನವನ್ನು ಆಚರಣೆ ಮಾಡುವಂತಾಗಬಾರದು. ಇದರ ಬಗ್ಗೆ ಅರಿವು ಮೂಡಿಸಿ, ಏಡ್ಸ್‌ನ್ನು ನಿಯಂತ್ರಣಕ್ಕೆ ತರುವಂತಾಗಬೇಕು ಅಂತ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ. ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿಗಳಾದ ಎಸ್. ಜಯಕರ ಶೆಟ್ಟಿಯವರು ಪ್ರಾಸ್ತಾವಿಕ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಪದಾಧಿಕಾರಿಗಳಾದ ಡಾ| ಹೆಚ್.ಎಸ್. ಮಲ್ಲಿ, ಮುತ್ತಯ್ಯ ಶೆಟ್ಟಿ, ಶ್ರೀ ಶಿವರಾಮ ಶೆಟ್ಟಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಿ.ಎಂ. ಗೊಂಡ ಎಲ್ಲರನ್ನು ಸ್ವಾಗತಿಸಿ, ಮೈತ್ರಿ ನಿರೂಪಿಸಿ, ವಿದ್ಯಾರಾಣಿ ವಂದಿಸಿದರು.

Leave a Reply