Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗಭೂಮಿಯಿಂದ ವೈಚಾರಿಕ ಬೆಳೆ ತೆಗೆಯಬೇಕು: ರಂಗ ನಿರ್ದೇಶಕ ಕಿರಣ್ ಭಟ್
    ಊರ್ಮನೆ ಸಮಾಚಾರ

    ರಂಗಭೂಮಿಯಿಂದ ವೈಚಾರಿಕ ಬೆಳೆ ತೆಗೆಯಬೇಕು: ರಂಗ ನಿರ್ದೇಶಕ ಕಿರಣ್ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ನಾಟಕವನ್ನು ಚಂದಗೊಳಿಸುವ ಕಡೆಗೆ ನಿರ್ದೇಶಕರು ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ರಂಗಭೂಮಿಯನ್ನು ಸದೃಢವಾಗಿ ಕಟ್ಟುವ ಬಗೆಗೆ ಮನಸ್ಸು ಮಾಡಿ, ವೈಚಾರಿಕ ಬೆಳೆ ತೆಗೆಯಲು ಪ್ರಯತ್ನಿಸಬೇಕಿದೆ ಎಂದು ಹೊನ್ನಾವರದ ರಂಗ ನಿರ್ದೇಶಕ ಕಿರಣ್ ಭಟ್ ಹೇಳಿದರು.

    Click Here

    Call us

    Click Here

    ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ’ರಂಗಸುರಭಿ ೨೦೧೬’ ನಾಟಕ ಸಪ್ತಾಹದ ಎರಡನೇ ದಿನ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದರು. ರಂಗಭೂಮಿಯ ಪ್ರತಿನಟನೂ ಎದುರಿಗೆ ತನ್ನನ್ನು ನೋಡುವವರಿದ್ದಾರೆ ಎಂಬ ಗ್ರಹಿಕೆಯ ಮೆಲೆ ನಟಿಸುತ್ತಾನೆ. ಆ ಮೂಲಕ ಪಾತ್ರವನ್ನು ಜೀವಿಸುತ್ತಾನೆ. ನಾಟಕ ಪ್ರೇಕ್ಷಕರನ್ನು ಭ್ರಮೆಯಿಂದ ವಾಸ್ತಗಳತ್ತ ಕರೆದೊಯ್ಯುವಂತಿರಬೇಕು. ರಂಗಭೂಮಿ ಲೋಕಭೂಮಿಯಾದಾಗ ನಮ್ಮಲ್ಲಿನ ತುಮುಲುಗಳನ್ನು, ಸಂವೇದನೆಯನ್ನು ಹಂಚಿಕೊಳ್ಳಲು ಸಾಧ್ಯವಿದೆ.

    ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ ರಂಗಭೂಮಿಯ ಕಲಾವಿದರು ಜೊತೆ ಸೇರುವ, ಬದುಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ಯೋಚಿಸುವ, ನಮ್ಮ ಹಾಗೂ ಜನರ ಸಮಸ್ಯೆಗಳನ್ನು ಹೇಳಿ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಇದೆ ಎಂದವರು ಹೇಳಿದರು.

    ಅರಣ್ಯ ಇಲಾಖೆಯ ನಿವೃತ್ತ ಐಎಫ್‌ಎಸ್ ಬಿ. ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-೧ರ ಅಸಿಸ್ಟೆಂಟ್ ಗವರ್ನ್‌ರ್ ಸತೀಶ್ ಎನ್. ಶೇರೆಗಾರ್, ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ ಕೊಡೇರಿ, ಸುರಭಿಯ ನಿರ್ದೇಶಕರಾದ ಸುಧಾಕರ ಪಿ. ಬೈಂದೂರು, ಗಣಪತಿ ಹೋಬಳಿದಾರ್, ಕಾರ್ಯದರ್ಶಿ ಲಕ್ಷ್ಮಣ್ ವೈ ಕೊರಗ ವಂದಿಸಿದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ ಯಡ್ತರೆ ಸ್ವಾಗತಿಸಿದರು. ಯಸ್ಕೋರ್ಡ್ ಟ್ರಸ್ಟ್‌ನ ಕೃಷ್ಣಮೂರ್ತಿ ಉಡುಪ ಕಬ್ಸೆ ವಂದಿಸಿದರು. ಶಿಕ್ಷಕ ಸುಬ್ರಹ್ಮಣ್ಯ ತಗ್ಗರ್ಸೆ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026

    ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    21/08/2026

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026
    Leave A Reply Cancel Reply

    20 + eighteen =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.