Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಯಾತ್ಮಕ ಸಾಂಸ್ಕೃತಿಕ ಚಟುವಟಿಕೆಯಿಂದ ಸುಂದರ ವಾತಾವರಣ: ಸುರಭಿ ಕಲಾಗ್ರಾಮಕ್ಕೆ ಶಿಲನ್ಯಾಸಗೊಳಿಸಿ ಸಚಿವೆ ಉಮಾಶ್ರೀ
    ಊರ್ಮನೆ ಸಮಾಚಾರ

    ಕ್ರೀಯಾತ್ಮಕ ಸಾಂಸ್ಕೃತಿಕ ಚಟುವಟಿಕೆಯಿಂದ ಸುಂದರ ವಾತಾವರಣ: ಸುರಭಿ ಕಲಾಗ್ರಾಮಕ್ಕೆ ಶಿಲನ್ಯಾಸಗೊಳಿಸಿ ಸಚಿವೆ ಉಮಾಶ್ರೀ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕ್ರೀಯಾತ್ಮಕ ಹಾಗೂ ರಚನಾತ್ಮಕ ಸಾಂಸ್ಕೃತಿಕ ಮನಸ್ಸು ನಿರಂತರವಾಗಿ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಸುಂದರ ವಾತಾವರಣ ನಿರ್ಮಾಣವಾಗುತ್ತದೆ. ಯಕ್ಷಗಾನ, ರಂಗಭೂಮಿ,ಕಲೆ ಸಾಹಿತ್ಯ ಕ್ಷೇತ್ರದಲ್ಲಿ ಹತ್ತಾರು ದಿಗ್ಗಜರುಗಳು ಹುಟ್ಟಿದ ಕರಾವಳಿಯ ಮಣ್ಣಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಪುಲ ಅವಕಾಶಗಳಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.

    Click Here

    Call us

    Click Here

    ಅವರು ಸುರಭಿ ರಿ. ಬೈಂದೂರು ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ ರಂಗಸುರಭಿ – ೨೦೧೬ರ ನಾಟಕ ಸಪ್ತಾಹದಲ್ಲಿ ಪಡುವರಿ ಗ್ರಾಮದ ಮಾವಿನಕುಳಿಯಲ್ಲಿ ಸುರಭಿ ಕಲಾಗ್ರಾಮಕ್ಕೆ ಶಿಲನ್ಯಾಸಗೈದ ಬಳಿಕ ಶಾರದಾ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಾ ರಸಿಕರು ಕಲಾ ಪ್ರೋತ್ಸಾಹಕರು ಇಲ್ಲದೇ ಇದ್ದರೇ ಏನನ್ನೂ ಮಾಡಲು ಸಾಧ್ಯವಿಲ್ಲ. ಎಲ್ಲರ ಬೆಂಬಲದಿಂದ ಮಾತ್ರ ಉತ್ತಮ ಕಾರ್ಯಕ್ರಮಗಳ ಆಯೋಜನೆ ಸಾಧ್ಯ. ಸುರಭಿ ಸಂಸ್ಥೆಯ ನಿರಂತರವಾಗಿ ವಿದ್ಯಾರ್ಥಿಗಳಿಗೆ ಸಂಗೀತ, ಕಲೆಗಳ ತರಬೇತಿ ನೀಡುತ್ತಾ, ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿದ್ದು, ಸರಕಾರದ ಮಟ್ಟದಲ್ಲಿ ಅಗತ್ಯ ನೆರವು ನೀಡಲು ಬದ್ದ ಎಂದವರು ಭರವಸೆಯಿತ್ತರು.

    ಕನ್ನಡ ಮತ್ತು ಸಂಸ್ಕತಿ ಇಲಾಖೆಯಲ್ಲಿ ಹಲವು ಗುಣಾತ್ಮಕ ಬದಲಾವಣೆಗಳನ್ನು ತರಲಾಗಿದೆ. ಆಡಳಿತ ಸುಧಾರಣೆಗಾಗಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡಿದ್ದು, ರಾಜ್ಯದಲ್ಲಿ ಜಿಲ್ಲಾ ಮಟ್ಟದ ತನಕ ಇಲಾಖೆಯಲ್ಲಿ ಕಾಗದರಹಿತ ಆಡಳಿತವನ್ನು ಮೊದಲು ಅಳವಡಿಸಿಕೊಂಡ ಹೆಗ್ಗಳಿಗೆ ನಮ್ಮದು. ಸರಕಾರದಿಂದ ಸಾಂಸ್ಕೃತಿಕ ಸಂಘ ಸಂಸ್ಥೆಗಳು ಹಾಗೂ ಕಲಾವಿದರಿಗೆ ನೀಡಲಾಗುತ್ತಿರುವ ಅನುದಾನದ ಸಮರ್ಪಕವಾದ ಬಳಕೆಯಾಗಬೇಕೆಂಬ ನಿಟ್ಟಿನಲ್ಲಿ ಆನ್ಲೈನ್ ಅರ್ಜಿ, ಖಾತೆಗಳಿಗೆ ನೇರ ಹಣ ವರ್ಗಾವಣೆ, ವೆಬ್ಸೈಟ್‌ಗಳಲ್ಲಿ ಕನ್ನಡ ಪುಸ್ತಕ, ಪಠ್ಯ ಅಳವಡಿಕೆ ಮುಂತಾದವುಗಳನ್ನು ಇಲಾಖೆಯಿಂದ ಮಾಡಲಾಗಿದೆ ಎಂದವರು ಹೇಳಿದರು.

    ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವಾಸುದೇವ ರಾವ್. ಪಿ ಉಡುಪಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಮೇಶ್ ಸಾಲಿಯಾನ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಆಡಳಿತ ಧರ್ಮದರ್ಶೀ ಜಯಾನಂದ ಹೋಬಳಿದಾರ್, ಪ್ರಥಮ ದರ್ಜೆ ಗುತ್ತಿಗೆದಾರರಾದ ಗೋಕುಲ್ ಶೆಟ್ಟಿ, ಶ್ರೀಧರ್ ಬೆಲೆಮನೆ, ಉದ್ಯಮಿಗಳಾದ ಅಶೋಕ್ ಕುಮಾರ್ ಬಾಡಾ, ಪ್ರಸಾದ್ ಪ್ರಭು, ಡಾ. ಪ್ರವೀಣ್ ಶೆಟ್ಟಿ, ಮಣೆಗಾರ್ ಅಬ್ದುಲ್ ರೆಹಮಾನ್, ಮೋಹನ್ ರೇವಣ್ಕರ್, ಸುರಭಿ ಸಂಸ್ಥೆಯ ಅಧ್ಯಕ್ಷ ಶಿವರಾಮ ಕೊಠಾರಿ ಉಪಸ್ಥಿತರಿದ್ದರು.

    ಸುರಭಿ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ತಾಸ್ತಾವಿಕ ಮಾತುಗಳನ್ನಾಡಿದರು. ಗಣಪತಿ ಹೋಬಳಿದಾರ್ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ವೈ ಕೊರಗ ಧನ್ಯವಾದಗೈದರು. ಸ್ವಾತಿ ಶೇರುಗಾರ್ ಹಾಗೂ ಅಬ್ದುಲ್ ರವೂಫ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    _mg_3421 _mg_3430 _mg_3439 _mg_3448 _mg_3462 _mg_3473 _mg_3474 _mg_3492 _mg_3505 _mg_3515 _mg_3535 _mg_3537 _mg_3530-2

    Surabhi R Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.