Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಗೀತಾಪಠಣ ಯಜ್ಞದ ಸಮರ್ಪಣಾ ಉತ್ಸವ
    ಊರ್ಮನೆ ಸಮಾಚಾರ

    ಬೈಂದೂರು: ಗೀತಾಪಠಣ ಯಜ್ಞದ ಸಮರ್ಪಣಾ ಉತ್ಸವ

    Updated:24/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಶ್ರೀಮದ್ಭಗವದ್ಗೀತೆಯು ವ್ಯಕ್ತಿತ್ವ ವಿಕಸನದಲ್ಲಿ ಔಚಿತ್ಯ ಪ್ರಜ್ಞೆಯನ್ನು ಬೋಧಿಸುತ್ತಾ ಸಂತುಲಿನ ಜೀವನ ಪದ್ಧತಿಯನ್ನು ಆಪೇಕ್ಷಿಸುತ್ತದೆ. ಅತಿಯಾದಲ್ಲಿ ಎಲ್ಲವೂ ನ್ಯೂನತೆಯಾಗುವುದರಿಂದ ಸಮಚಿತ್ತ, ಶುದ್ಧಚಾರಿತ್ಯ ಪ್ರತಿ ವ್ಯಕ್ತಿಯ ಆಂತರಿಕ ಮತ್ತು ಸಾಮಾಜಿಕ ಕರ್ತವ್ಯಗಳನ್ನು ನಿರ್ವಹಿಸುವಲ್ಲಿನ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಯಳಜಿತ್ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ ಸಂತ ವೈ. ಮಂಗೇಶ ಶೆಣೈ ಹೇಳಿದರು.

    Click Here

    Call us

    Click Here

    ಬೈಂದೂರು ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನ ಮಹಾಸ್ವಾಮಿಗಳ ಪೀಠಾರೋಹಣ ರಜತ ವರ್ಷದ ಪ್ರಯುಕ್ತ ವಿವಿಧ ಶೃದ್ಧಾ ಕೇಂದ್ರಗಳಲ್ಲಿ ನಡೆದ ಸಪ್ತಾಹ ಗೀತಾಪಠಣ ಯಜ್ಞದ ಸಮರ್ಪಣಾ ಉತ್ಸವ ಉದ್ಘಾಟಿಸಿ ಮಾತನಾಡಿದರು.

    ಭಗವದ್ಗೀತೆ ನಿಜಾರ್ಥದಲ್ಲಿ ಒಂದು ಜಾತ್ಯಾತೀತ ಗ್ರಂಥವಾಗಿದ್ದು, ಅದು ಯಾವುದೇ ಒಂದು ಜನಾಂಗದ, ಜಾತಿಯ, ವರ್ಗದ, ದೇಶದ ಜನರನ್ನು ಉದ್ದೇಶಿಸಿ ಉಪದೇಶ ಮಾಡುವಂತಹದ್ದಲ್ಲ. ಎಲ್ಲಾ ಮಾನವರು ತಮ್ಮ ಉದ್ದಾರವನ್ನು ತಾವೇ ಮಾಡಿಕೊಳ್ಳಲು ಬೇಕಾದ ಜೀವನಕ್ರಮವನ್ನು ಮತ್ತು ಚಿಂತನಾ ಕ್ರಮಗಳನ್ನು ಕೊಡುತ್ತದೆ. ಗೀತೆಯ ಅಧ್ಯಯನದಿಂದ ನಮ್ಮ ಧರ್ಮ ಹಾಗೂ ಕರ್ತವ್ಯಗಳನ್ನು ಹೆಚ್ಚು ನಿಷ್ಟೆಯಿಂದ ಪಾಲಿಸುವಂತ ಮಾರ್ಗದರ್ಶನ ದೊರೆಯುತ್ತದೆ. ಕಾಲಾಬಾಧಿತವಾಗದೇ ಇಂದಿಗೂ ಸೂತ್ರಪ್ರಾಯವಾಗಿರುವ ಹಾಗೂ ನಮ್ಮ ದಿನನಿತ್ಯದ ಬದುಕಿಗೂ ಬೆಳಕು ನೀಡುವಂತಹ ಈ ಕಿರು ಗ್ರಂಥ ವಿಶ್ವ ಮಾನ್ಯವಾಗಿದೆ ಎಂದರು.

    ಆಚರಣಾ ಸಮಿತಿ ಅಧ್ಯಕ್ಷ ಬಿಜೂರು ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆವಹಿಸಿದ್ದರು. ಸಪ್ತಾಹ ಗೀತಾ ಪಠಣ ಯಜ್ಞದಲ್ಲಿ ಭಾಗವಹಿಸಿದ ಕೇಂದ್ರ ನಿರ್ವಾಹಕರು ಮತ್ತು ಪಠಣಕಾರರಿಗೆ ಪ್ರಶಂಸಾ ಪತ್ರ ನೀಡಲಾಯಿತು. ಬೈಂದೂರು ಶಿಕ್ಷಣ ವಲಯದ ವಿವಿಧ ಸಂಪನ್ಮೂಲ ಕೇಂದ್ರಗಳಲ್ಲಿ ನಡೆದ ಸ್ಪರ್ಧೆಯ ವಿಜೇತ ಮತ್ತು ಕೇಂದ್ರದಲ್ಲಿ ನಡೆದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಸಮಿತಿಯ ಗೌರವಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ, ಉಪಾಧ್ಯಕ್ಷರಾದ ಯು. ರಮೇಶ ವೈದ್ಯ, ಹೇರಂಜಾಲು ನಾಗೇಶ ರಾವ್, ಗೋವಿಂದ ಎಂ., ಸ್ಪರ್ಧಾ ಸಮಿತಿ ಮುಖ್ಯಸ್ಥ ಬಿಜೂರು ವಿಶ್ವೇಶ್ವರ ಅಡಿಗ, ಸಮಿತಿಯ ಜಿಲ್ಲಾ ಪ್ರತಿನಿಧಿಗಳಾದ ಜಿ.ಆರ್.ಹೆಗಡೆ, ಭಾಸ್ಕರ್ ಹೆಗಡೆ, ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಬಿ. ಗೋಪಾಲ ನಾಯಕ್, ಮಾತೃಮಂಡಳಿ ಅಧ್ಯಕ್ಷೆ ಆಶಾ ಪಟವಾಲ್, ಪ್ರಾ.ಶಾ.ಶಿ.ಸಂಘದ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಎಚ್. ನಾಯ್ಕ್ ಸ್ವಾಗತಿಸಿ, ಮಂಜುನಾಥ ಎಂ ವಂದಿಸಿದರು. ಆಶಾ ದಿನೇಶ್, ಭಾರತಿ ಮಂಜುನಾಥ್, ಲಲಿತಾ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026
    Leave A Reply Cancel Reply

    four − three =

    Call us

    Click Here

    Call us

    Call us

    Call us
    Highest Viewed Recently
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.