Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಯೋಧ ಕುಟುಂಬಗಳಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಯೋಧ ಕುಟುಂಬಗಳಿಗೆ ಸನ್ಮಾನ

    Updated:25/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಈ ದೇಶ, ಸಂಸ್ಕೃತಿ, ಧರ್ಮ ಹಾಗೂ ಸಮಾಜಕ್ಕಾಗಿ ತಮ್ಮ ಜೀವನವನ್ನು ಯಾರು ಮುಡಿಪಾಗಿಸಿಡುತ್ತಾರೋ, ಅವರು ಶ್ರೇಷ್ಠ ಸಾಧಕರಾಗಲು ಸಾಧ್ಯ. ದೇಶದ ಗಡಿ ಕಾಯುವ ಸೈನಿಕರು ದೇಶ ರಕ್ಷಣೆಗಾಗಿ ದಿನದ ೨೪ ಗಂಟೆ ಕರ್ತವ್ಯ ನಿರ್ವಹಿಸುತ್ತಾರೆ, ಅವರು ನಮ್ಮಿಂದ ಅಪೇಕ್ಷಿಸುವುದು ಕೇವಲ ಅಭಿಮಾನ ಮಾತ್ರ, ದೇಶ ರಕ್ಷಣೆಗಾಗಿ ನಿಂತ ಸೈನಿಕರನ್ನು ನಿತ್ಯ ನೆನೆಯುವ ಕೆಲಸವಾಗಬೇಕು ಎಂದು ಮಾನವ ಹಕ್ಕು ಜಾಗೃತಿ ಸಮಿತಿಯ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಹೇಳಿದರು.

    Click Here

    Call us

    Click Here

    ಬಿಜೂರು ಕಂಚಿಕಾನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಯೋಧ ಕುಟುಂಬಗಳಿಗೆ ಸನ್ಮಾನ ಹಾಗೂ ಯೋಧರಿಗೆ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಜಗತ್ತಿನಲ್ಲಿ ರಾಷ್ಟ್ರವನ್ನು ತಾಯಿ ಎಂದು ಪೂಜಿಸುವ ದೇಶ ಎಂದರೆ ಭಾರತವಾಗಿದೆ. ಇಲ್ಲಿ ದೇಶ, ಪ್ರಕೃತಿ, ಗೋವು ಎಲ್ಲರದಲ್ಲೂ ತಾಯಿಯನ್ನು ಕಾಣುವ ಉದಾತ್ತ ಸಂಸ್ಕೃತಿಯಿಂದ ಕೂಡಿದೆ. ಈ ರಾಷ್ಟ್ರ ಉಳಿಯಬೇಕಾದರೇ ಹೋರಾಡುವ ವ್ಯಕ್ತಿ ಅಗತ್ಯವಾಗಿದೆ. ಸೈನಿಕರು ಕ್ಷಣಕ್ಷಣಕ್ಕೂ ಜಾಗೃತರಾಗಿ ದೇಶ ಉಳಿವಿಗಾಗಿ ಹೋರಾಟ ನಡೆಸಿದರೇ, ಮಾತ್ರ ದೇಶವಾಸಿಗಳು ನಿಶ್ಚಿಂತೆಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಸಂಸ್ಕೃತಿ ಹಾಳಾಗುತ್ತಿದೆ, ಮಕ್ಕಳಿಗೆ ಏಳವೆಯಲ್ಲಿಯೇ ಸಂಸ್ಕೃತಿ, ಸಂಸ್ಕಾರ ಅರಿವು ಮೂಡಿಸುವ ಕೆಲಸವಾಗಬೇಕಾಗಿದೆ ಎಂದ ಅವರು ನಾವು ಕತ್ತರಿಯ ಆರಾಧಕರಾಗದೇ, ಸೂಜಿಯ ಆರಾಧಕರಾಗಿ ಸಮಾಜ ಜೋಡಿಸುವ ಕೆಲಸಮಾಡಬೇಕು ಎಂದರು.

    ಹಳೇ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಪುಂಡಲೀಕ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವೀರಯೋಧ ನರಸಿಂಹ ಶೆಟ್ಟಿ ಬವಳಾಡಿ ಅವರ ಪತ್ನಿ ಸುಮಿತ್ರಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ದಿ. ಆರ್. ಕೆ. ಸಂಜೀವ ರಾವ್ ಅವರ ಪುತ್ರಿ ಪ್ರಮಿಳಾ ಕುಂದಾಪುರ, ಕೋಟ ಗ್ರಾಮ ಕರಣಿಕ ಮಾಧವ ಕೊಠಾರಿ, ಬಿಜೂರು ಗ್ರಾಮ ಕರಣಿಕ ಮಂಜುನಾಥ ಪಾಟೀಲ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿವೃತ್ತ ಇಒ ಸದಾಶಿವ ಉಡುಪ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಜಿ. ಮಂಜುನಾಥ ಶೆಟ್ಟಿ, ಶಾಲಾ ಎಸ್‌ಡಿಎಂಸಿ ಮಾಜಿ ಸದಸ್ಯ ಸತೀಶ ಶೆಟ್ಟಿ, ಉದ್ಯಮಿಗಳಾದ ಶಂಕರ ಭಂಡಾರಕರ್, ರಾಮ ದೇವಾಡಿಗ, ಚಿತ್ತರಂಜನ್ ಉಬ್ಜೇರಿ, ರಾಘವೇಂದ್ರ ಮಲಗದ್ದೆಮನೆ, ವಿದ್ಯಾರ್ಥಿ ನಾಯಕ ಶಿವಪ್ರಸಾದ್, ಪ್ರಶಾಂತ ಆಚಾರ್ಯ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ರವೀಂದ್ರ ಕಿಣಿ ಸ್ವಾಗತಿಸಿ, ಪ್ರಕಾಶ್ ಆಚಾರ್ಯ ಉಪ್ಪುಂದ ಶುಭ ಹಾರೈಸಿದರು. ತಾಪಂ ಸದಸ್ಯ ಜಗದೀಶ ದೇವಾಡಿಗ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026

    ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ

    21/08/2026
    Leave A Reply Cancel Reply

    10 − 6 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.