Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋನ್ಸ್‌ ಬಂಟ್ವಾಳ್‌ಗೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ
    ಮುಂಬೈ

    ರೋನ್ಸ್‌ ಬಂಟ್ವಾಳ್‌ಗೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Rons Bantwalಮುಂಬಯಿ: ದಾಯ್ಜಿವರ್ಲ್ಡ್, ಕೆಮ್ಮಣ್ಣು, ಕೆನರ ನ್ಯೂಸ್‌ ಡಾಟ್‌ ಕಾಂ ಇದರ ಮಹಾರಾಷ್ಟ್ರದ ಬ್ಯೂರೊ ಚೀಫ್‌, ಸುದ್ದಿ ಸಂಪಾದಕರಾಗಿ ಸೇವೆಸಲ್ಲಿಸುತ್ತಿರುವ ರೋನ್ಸ್‌ ಬಂಟ್ವಾಳ್‌ ಅವರಿಗೆ “ಕರ್ನಾಟಕ ರಾಜ್ಯ ಮಾಧ್ಯಮ’ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ನಗರ ಹಾಗೂ ನಾಡಿನ ಪ್ರಸಿದ್ಧ ಪತ್ರಿಕೆಗಳು ಸೇರಿದಂತೆ ಹತ್ತಾರು ಕನ್ನಡ-ಕೊಂಕಣಿ ವಾರಪತ್ರಿಕೆಗಳು,ಇಂಗ್ಲಿಷ್‌ ಸಾಪ್ತಾಹಿಕಗಳು, ಪಾಕ್ಷಿಕ ಮತ್ತು ಅನೇಕ ಮಾಸಿಕಗಳ ಅಧಿಕೃತ ವರದಿಗಾರರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 25 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ತೊಡಗಿಸಿಕೊಂಡು ಯಶಸ್ವಿ ಪತ್ರಿಕೋದ್ಯಮಿಯಾಗಿರುವ ಅವರು ಸಿವಿಲ್‌ ಎಂಜಿನಿಯರ್‌ ಪದವೀಧರರಾಗಿ ಉದ್ಯೋಗದ ನಿಮಿತ್ತ ಮುಂಬಯಿಗೆ ಆಗಮಿಸಿ ವ್ಯಂಗ್ಯಚಿತ್ರ ಕಲಾಕಾರರಾಗಿ ಪತ್ರಿಕಾರಂಗಕ್ಕೆ ಪ್ರವೇಶಿಸಿದ್ದರು.

    ರಾಕೊ ಕೊಂಕಣಿ ವಾರಪತ್ರಿಕೆಯ ಮೂಲಕ ಮುಂಬಯಿಯಲ್ಲಿ ಪತ್ರಿಕೋದ್ಯಮಕ್ಕೆ ಕಾಲಿಟ್ಟ ಅವರು ಕ್ರಮೇಣ “ಜನವಾಹಿನಿ’ ಕನ್ನಡ ದೈನಿಕ ಮುಂಬಯಿ ಮುಖ್ಯಸ್ಥರಾಗಿದ್ದರು. ಅನಂತರ ಉದಯವಾಣಿ, ತರಂಗ, ರೂಪತಾರ ಮುಂತಾದ ಪತ್ರಿಕೆಗಳಲ್ಲಿ ಸತತ ಆರುವರೆ ವರ್ಷಗಳ ಗಣನೀಯ ಸೇವೆಸಲ್ಲಿಸಿದ್ದಾರೆ.

    ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕ ಗೌ|ಪ್ರ| ಕಾರ್ಯದರ್ಶಿಯಾಗಿ ಪತ್ರಕರ್ತ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ 3 ವರ್ಷಗಳಿಂದ ತನ್ನ ಸಂಪಾದಕತ್ವದಲ್ಲಿ ಪತ್ರಕರ್ತರ “ಡೈರಿ-ಡಿರೆಕ್ಟರಿ’ಯನ್ನು ಪ್ರಕಟಿಸಿದ್ದಾರೆ.

    ಅಲ್ಲದೆ ಸಾಂತಾಕ್ರೂಜ್‌ ವಿಮಾನ ನಿಲ್ದಾಣದ ಸಮೀಪದಲ್ಲಿ ತನ್ನ ದೂರದೃಷ್ಟಿಯಲ್ಲಿ ಸುಮಾರು ಮೂರು ಕೋ. ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ರೂಪಿಸುವ ತಯಾರಿಯಲ್ಲಿರುವ ರೋನ್ಸ್‌ ಮಹಾನಗರದ 30ಕ್ಕೂ ಅಧಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಅವರ ಸಾಧನೆಗಳಿಗೆ “ಕೊಂಕಣಿ ಎಕ್ಸಲೆಂಟ್‌ ಅವಾರ್ಡ್‌’, “ದಿವೋ ಕೊಂಕಣಿ ಸಾಹಿತ್ಯಪುರಸ್ಕಾರ-2007′, “ಪರಿವರ್ತನ ಪತ್ರಕರ್ತ ಪುರಸ್ಕಾರ’ಅಂತಾರಾಷ್ಟ್ರೀಯ ಪುರಸ್ಕಾರ, ವಿಶ್ವ ಕನ್ನಡಿಗ ಪುರಸ್ಕಾರ,”ಸಾಧಕ ಪತ್ರಕರ್ತ’ ಇನ್ನಿತರ ಹಲವಾರು ಪ್ರಶಸ್ತಿ,ಸಮ್ಮಾನಗಳು ಲಭಿಸಿವೆ

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.