Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಮಟ್ಟದ ಕೃಷಿ ಉತ್ಸವ, ಮೆರಗು ನೀಡಿದ ವಸ್ತು ಪ್ರದರ್ಶನ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಮಟ್ಟದ ಕೃಷಿ ಉತ್ಸವ, ಮೆರಗು ನೀಡಿದ ವಸ್ತು ಪ್ರದರ್ಶನ

    Updated:31/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯ ಸರ್ಕಾರ ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ೩ ಲಕ್ಷ ರೂ. ಹಾಗೂ ಶೇ. ೩ ಬಡ್ಡಿದರದಲ್ಲಿ ೩ ರಿಂದ ೧೦ ಲಕ್ಷ ರೂ. ಸಾಲ, ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣ, ಪ್ರತಿ ಲೀ. ಹಾಲಿಗೆ ೫ ರೂ. ಪ್ರೋತ್ಸಾಹ ಧನ ಸೇರಿದಂತೆ ಕೃಷಿಕರ ಕಲ್ಯಾಣಕ್ಕಾಗಿ ಹತ್ತಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕೃಷಿಕರು ಇದರ ಸದುಪಯೋಗ ಪಡೆದು, ಕೃಷಿಗೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಕುಂದಾಪುರ, ಆರ್ .ಕೆ ಸಂಜೀವ ರಾವ್ ಜನ್ಮ ಶತಾಬ್ದಿ ಸಂಸ್ಮರಣಾ ಸಮಿತಿ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಕಂಬದಕೋಣೆ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಇವರ ಸಂಯುಕ್ತ ಆಶ್ರಯದಲಿ, ಡಾ. ಡಿ. ವೀರೇಂದ್ರ ಹಗ್ಡೆಯವರ ಮಾರ್ಗದರ್ಶನದಲ್ಲಿ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕೃಷಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತಾನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೊಸ ಶಕ್ತಿ ಬಂದಿದೆ, ಕೃಷಿ ಉತ್ಸವಗಳ ಮೂಲಕ ಕೃಷಿಕರ ಸಮಸ್ಯೆ ಹಾಗೂ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾದ್ಯವಾಗುತ್ತದೆ, ಇಂದು ಹಳ್ಳಿಗಳು ವೃದ್ಧಾಶ್ರಮದಂತಾಗಿದೆ, ಕೃಷಿಕರ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಅಂಕ ಸಂಬಳಕ್ಕಾಗಿ ನಗರಗಳತ್ತ ಮುಖ ಮಾಡುತ್ತಿದ್ದಾರೆ, ಹೀಗಾಗಿ ಕೃಷಿಭೂಮಿ ಹಡಿಲು ಬೀಳುತ್ತಿದೆ. ರಾಜ್ಯದಲ್ಲಿ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕರಾವಳಿ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಎಲ್ಲಾ ಸರ್ಕಾರಗಳು ಕಡೆಗಣಿಸಿದೆ ಎಂದ ಅವರು ಕೃಷ್ಣ ಮೇಲ್ದಂಡೆ ಕಾಮಗಾರಿಗೆ ೩೦ ಸಾವಿರ ಕೋಟಿ ರೂ, ಅನುದಾನ ಒದಗಿಸಿದರೇ, ೧೬ ಟಿಎಂಸಿ ನೀರು ಒದಗಿಸುವ ವಾರಾಹಿ ಯೋಜನೆಗೆ ಕಳೆದ ೩೩ ವರ್ಷದಿಂದ ಇದುವರೆಗೆ ಸರ್ಕಾರ ಒದಗಿಸಿರುವುದು ಕೇವಲ ೬೮೦ ಕೋಟಿ ರೂ. ಮಾತ್ರ, ಈ ಬಗ್ಗೆ ಈ ಭಾಗದ ಜನಪ್ರತಿನಿಗಳು ಎಚ್ಚೆತ್ತು ಕರಾವಳಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಹೋರಾಟ ನಡೆಸಬೇಕಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕೃಷಿ ಅಧಾರಿತ ಈ ಭಾಗದ ರೈತಾಪಿ ಜನರನ್ನು ಅಭಿವೃದ್ಧಿಯ ಪಥದತ್ತ ಮುನ್ನೆಡಸಬೇಕು ಹಾಗೂ ಅವರಲ್ಲಿ ಉಳಿತಾಯ ಮಾಡುವ ಪ್ರವೃತ್ತಿಯನ್ನು ಬೆಳೆಸಲು ದುಡಿಮೆಯಲ್ಲಿ ನಿರತರಾಗುವುದಕ್ಕೆ ಅವಕಾಶ ಮಾಡಿಕೊಡಬೇಕು. ಮಹಿಳೆಯರಿಗೆ ವಿಶೇಷವಾದ ಸಹಕಾರದ ಜತೆಗೆ ಮಾರ್ಗದರ್ಶನ ನೀಡುವುದರ ಮೂಲಕ ಸ್ವಾವಲಂಬಿಗಳನ್ನಾಗಿಸಿ ಗೌರವಯುತವಾದ ಜೀವನ ನಡೆಸುವಂತಾಗಬೇಕು ಎನ್ನುವ ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಕಳೆದ ೧೪ ವರ್ಷಗಳ ಹಿಂದೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇಂದಿಗೂ ಅದು ಯಶಸ್ವಿಯಾಗಿ ಮುಂದುವರಿಯುತ್ತಿದೆ ಎಂದರು.

    Click here

    Click here

    Click here

    Call us

    Call us

    ಆರ್.ಕೆ. ಸಂಜೀವ ರಾವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಕೆ. ಎಸ್. ಪ್ರಕಾಶ ರಾವ್ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿದರು. ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ತಾ.ಪಂ. ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಪುರುಷೋತ್ತಮ, ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಎಂ. ಹನುಮಂತಪ್ಪ, ಸಹಾಯಕ ಕೃಷಿ ನಿರ್ದೇಶಕ ವಿ.ವಿ. ವಿಠ್ಠಲ್ ರಾವ್, ಗ್ರಾ.ಪಂ. ಅಧ್ಯಕ್ಷೆ ಲಲಿತಾ ಖಾರ್ವಿ, ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಕೃಷ್ಣ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಕಾರಿ ಅಮರ ಪ್ರಸಾದ ಶೆಟ್ಟಿ ಉಪಸ್ಥಿತರಿದ್ದರು. ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.