ನರೇಂದ್ರ ಮೋದಿ, ಬಿಎಸ್‌ವೈ ಶ್ರೇಯಸ್ಸಿಗಾಗಿ ಕೊಲ್ಲೂರಿಗೆ ಪಾದಯಾತ್ರೆ, ಚಂಡಿಕಾಯಾಗ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಶ್ರೇಯಸ್ಸಿಗಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ನೇತೃತ್ವದಲ್ಲಿ ಜಡ್ಕಲ್ ಕ್ರಾಸ್‌ನಿಂದ ಕೊಲ್ಲೂರು ದೇವಳದ ತನಕ ಪಾದಯಾತ್ರೆ ಹಾಗೂ ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಯಿತು. ಜಡ್ಕಲ್ ಕ್ರಾಸ್‌ನಿಂದ ಕೊಲ್ಲೂರು ದೇವಳದ ತನಕ ಅಮ್ಮನೆಡೆಗೆ ನಮ್ಮ ನಡಿಗೆ ಕಾಲ್ನಡಿಗೆ ಜಾಥದಲ್ಲಿ ಭಾಗವಹಿಸಿದ್ದ ನೂರಾರು ಸಂಖ್ಯೆಯ ಕಾರ್ಯಕರ್ತರು ದೇವಳದಲ್ಲಿ ನಾಯಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು.

Call us

Click Here

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ ಬಟವಾಡಿ, ತಾರನಾಥ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಪುಪ್ಪರಾಜ ಶೆಟ್ಟಿ, ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ ಕಾವೇರಿ, ಜಿಪಂ ಮಾಜಿ ಸದಸ್ಯ ಪ್ರಕಾಶ್ ಟಿ. ಮೆಂಡನ್, ತಾಪಂ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿ ಹರೀಶ್ ತೋಳಾರ್, ರೈತಮೋರ್ಚಾದ ದೀಪಕ್‌ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Leave a Reply