ಕುಂದಾಪುರ: ಸರಣಿ ಅಫಘಾತ. ಎಸ್ಪಿ ರಾಜೇಂದ್ರ ಪ್ರಸಾದ್ ಪಾರು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತಲ್ಲೂರು ರಾಜಾಡಿ ಸೇತುವೆ ಬಳಿ ಕಾರು-ಟ್ರ್ಯಾಕ್ಸಿ ಹಾಗೂ ಬಸ್ಸಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Call us

Click Here

ಮುರುಡೇಶ್ವರ ಕಡೆಗೆ ಎಸ್ಪಿ ರಾಜೇಂದ್ರ ಪ್ರಸಾದ್ ಅವರು ತೆರಳುತ್ತಿದ್ದ ಖಾಸಗಿ ವಾಹನವು ಮುಂದೆ ಸಾಗುತ್ತಿದ್ದ ಟ್ರಾಕ್ಸ್‌ಗೆ ಢಿಕ್ಕಿ ಹೊಡಿದು ಬಳಿಕ ಕುಂದಾಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ವಾಹನಗಳು ಕಾರು ಹಾಗೂ ಬಸ್ಸಿನ ಮುಂಭಾಗ, ಟ್ರಾಕ್ಸ್‌ನ ಹಿಂಭಾಗ ಜಖಂಗೊಂಡಿದೆ. ಬಸ್ಸು ಟ್ರಾಕ್ಸ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಅಫಘಾತದಿಂದಾಗಿ ಗಂಟೆಗೂ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಕುಂದಾಪುರ ಸಂಚಾರಿ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply