ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಇಂಜಿನಿಯರಿಂಗ್ ಪದವಿ ಪರೀಕ್ಷೆಯ ಆಟೊಮೊಬೈಲ್ ವಿಭಾಗದಲ್ಲಿ ಬೆಂಗಳೂರಿನ ಆಕ್ಸ್ಫರ್ಡ್ ತಾಂತ್ರಿಕ ಮಹಾವಿದ್ಯಾಲಯದ ಸಂದೇಶ್ ಎ. ತೋಳಾರ್ ದ್ವಿತೀಯ ರ್ಯಾಂಕ್ ಗಳಿಸಿರುವರು. ಅವರು ನಾವುಂದದ ಆನಂದ ಆರ್. ತೋಳಾರ್, ಗಿರಿಜಾ ಎ. ತೋಳಾರ್ ದಂಪತಿಯ ಪುತ್ರ.