Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂತ ಮೇರಿ ಶಾಲೆ 80ರ ದಶಕದ ಶಿಕ್ಷಕ- ವಿದ್ಯಾರ್ಥಿಗಳ ಪುನರ್ಮಿಲನ
    ಊರ್ಮನೆ ಸಮಾಚಾರ

    ಸಂತ ಮೇರಿ ಶಾಲೆ 80ರ ದಶಕದ ಶಿಕ್ಷಕ- ವಿದ್ಯಾರ್ಥಿಗಳ ಪುನರ್ಮಿಲನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ಸಂತಮೇರಿ ಶಾಲೆಯ ಪ್ರಾಥಮಿಕ ತರಗತಿಗಳಿಂದ ಆರಂಭಿಸಿ ೧೯೮೦ರ ತನಕ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಕಲಿಸಿದ ಶಿಕ್ಷಕರ ಅಪೂರ್ವ ಸಮ್ಮಿಲನವು ಕೋಟೆಶ್ವರದ ಸಹನಾ ಮಿನಿ ಸಭಾಂಗಣದಲ್ಲಿ ಜರಗಿತು.

    Click Here

    Call us

    Click Here

    ತಮ್ಮ ಸಂಸಾರದೊಂದಿಗೆ ಬಹತೇಕ ಗುರುಶಿಷ್ಯರು ಈ ಪುನರ್ಮಿಲನ ೧೯೮೦ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ತಮ್ಮ ಅಂದಿನ ವಿದ್ಯಾರ್ಥಿ ಜೀವನದಲ್ಲಿ ಜತೆಗಿದ್ದು ಅಕಾಲದಲ್ಲಿ ತಮ್ಮನ್ನು ಅಗಲಿರುವ ಸಹಪಾಠಿ ಹಾಗೂ ಶಿಕ್ಷಕರಿಗೆ ಮೌನ ಸ್ಮರಣೆಯ ಮೂಲಕ ಸಂತಾಪ ಸಲ್ಲಿಸಿದ ಗುರುಶಿಷ್ಯರು ತದ ನಂತರ ಅರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಅಂದಿನ ಪ್ರಾಥಮಿಕ ಶಾಲೆಯ ಬೋಧಕರಾದ ನೆಲ್ಲಿ ಟೀಚರ್, ಜೋನ್, ಕೊಗ್ಗ ಮಾಸ್ತರ್ ಶೀನ ಸರ್ ಸಹಿತ ಪ್ರೌಡ ಶಾಲೆಯ ಅಧ್ಯಾಪಕರುಗಳಾದ ಸೂರ್ಯನಾರಾಯಣ ಶರ್ಮ, ಗಂಗಾಧರ ಐತಾಳ್, ಲೂವಿಸ್ ಫೆರ್ನಾಂಡಿಸ್, ವಾಲ್ಟರ್ ಡಿಸೋಜಾ, ಶಂಕರ್ ಶೆಟ್ಟಿ, ಶ್ಯಾಮ್ ಸುಂದರ್ ಅರೆ ಹೊಳೆ, ಝೀಟಾ ಟೀಚರ್ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಹಾಗೂ ಇದೀಗ ಉಡುಪಿ ಮಹಿಳಾ ಕಾಲೇಜಿನಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ರಾಮಚಂದ್ರ ಅಡಿಗ ಶಿಕ್ಷಕರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕೇಂದ್ರ ಕಾರ್ಮಿಕ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಕುಂದಾಪುರದ ರಾಜೇಂದ್ರ ಹೊಸ್ಕೊಟೆ ಪರಿಚಯವನ್ನು ನೀಡಿ ಇಂತಹ ತೀರಾ ಅಪರೂಪದ ಮಿಲನಕ್ಕೆ ಮುನ್ನುಡಿ ಬರೆದ ಕುಂದಾಪುರದವರಾಗಿ ವಿದೇಶದಲ್ಲಿ ಉದ್ಯಮಿಯಾಗಿ ಬೆಳೆದು ಇದೀಗ ಮಂಗಳೂರಿನಲ್ಲಿ ನೆಲೆಸಿರುವ ವಿಲ್ಸನ್ ಡಿಸೋಜಾ ಹಾಗೂ ಅದನ್ನು ಸಾಕಾರಗೊಳಿಸುವುದರಲ್ಲಿ ಶ್ರಮಿಸಿದ ಕುಂದಾಪುರದ ಖ್ಯಾತ ಓರ್ಥೋಪೆಡಿಕ್ ತಜ್ಞ ಡಾ. ಶಿವಕುಮಾರ್ ಅವರ ಶ್ರಮವನ್ನು ಶ್ಲಾಘಿಸಿದರು. ಪ್ರತಿಯೋರ್ವ ಶಿಕ್ಷಕರನ್ನು ಕ್ರಮವಾಗಿ ಸುಧೀರ್ ಕಾಮತ್, ವಿಲ್ಫ್ರೆಡ್ ಡಿಲೀಮಾ, ಮನೋಹರ್ ತಿಂಗಳಾಯ, ವಿಶ್ವನಾಥ ಶೆಟ್ಟಿ, ಡಾ| ಶಿವಕುಮಾರ್, ವಿಲ್ಸನ್ ಡಿಸೋಜಾ, ವಿನ್ಸೆಂಟ್ ಡಿಸೋಜಾ, ಉದಯ ಶೆಣ್ಯೆ, ರಮಾ ಬೋಳಾರ್, ದಿವಾಕರ, ವಿಕ್ರಮ್ ಕ್ರಾಸ್ತಾ, ವೈಲೆಟ್ ಅವರು ಪುಷ್ಪಗುಚ್ಛ ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಿದರು. ಅಷ್ಟೂ ವರ್ಷಗಳ ನಂತರವೂ ನಮ್ಮನ್ನು ನೆನಪಿಟ್ಟು ಆಮಂತ್ರಿಸಿ ಸಮ್ಮಾನಿಸಿದ ವಿದ್ಯಾರ್ಥಿಗಳ ಪ್ರೀತಿಯ ಬಗ್ಗೆ ಮನದುಂಬಿ ಮಾತನಾಡಿದ ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳಿಗೂ ಶುಭಹಾರೈಸಿದರು. ಅತ್ಯಂತ ಉತ್ಸಾಹದಿಂದ ತಮ್ಮ ಕುಟುಂಬ ಸಮೇತರಾಗಿ ಪಾಲ್ಗೊಂಡ ವಿದ್ಯಾರ್ಥಿಗಳು ಸರಿಸುಮಾರು ೪೦ ವರ್ಷಗಳ ಹಿಂದಿನ ನೆನಪುಗಳನ್ನು ಕೇವಲ ನಿನ್ನೆ, ಮೊನ್ನೆಯ ನೆನಪುಗಳಂತೆ ಈಚೆಗೆ ಎಳೆದು ತಂದರು.ಮಕ್ಕಳಂತೆ ನಲಿದು ಅಂದಿನ ದಿನಗಳನ್ನು ಮತ್ತೇ ಮತ್ತೇ ಮೆಲಕು ಹಾಕಿದರು. ಕೆಲವರು ಹಾಲಿನಂತೆ ಫಳಫಳಿಸುತ್ತಿದ್ದ ತಮ್ಮ ತಲೆಕೂದಲುಗಳನ್ನು ಸವರಿಕೊಂಡರೆ ಮತ್ತೇ ಕೆಲವರು ತಮಗೆ ಸಹಕಾರ ನೀಡುತ್ತಿರುವ ಗಾಡ್ರೇಜ್, ಇಂಡಿಕಾ ಮೊದಲಾದ ಬ್ಯ್ಲಾಕ್ ಮೆಹಂದಿಗಳಿಗೆ ಗುಟ್ಟಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

    ಬೆಳಿಗ್ಗೆಯಿಂದ ಸಂಜೆಯವರೆಗೂ ನಡೆದ ಈ ಪುನರ್ಮಿಲನ ಸಂಭ್ರಮದಲ್ಲಿ ಅಂತ್ಯಾಕ್ಷರಿ, ಹೌಸಿ ಹೌಸಿ,ಡ್ಯಾನ್ಸ್, ಮ್ಯೂಸಿಕ್ ಛೇರ್, ಸ್ಪೂನ್ ಬಾಲ್ ಸೇರಿದಂತೆ ಇನ್ನಿತರ ಸ್ಪರ್ಧೆಗಳಲ್ಲಿ ಆಯೋಜಿಸಲಾಗಿದ್ದು, ಅಂದಿನ ನೆನಪುಗಳನ್ನು ಮತ್ತೇ ಭದ್ರವಾಗಿಸಲೋ ಎಂಬಂತೆ ತಾವು ಕಲಿತ ಶಾಲೆಗೆ ಸಂಜೆ ಸುಮಾರಿಗೆ ಆಗಮಿಸಿದ ಮಾಜಿ ವಿದ್ಯಾರ್ಥಿಗಳು ಅಲ್ಲಿ ಕ್ರಿಕೆಟ್ ಆಡಿ,ಶಾಲಾ ಕಟ್ಟಡದೆದುರು ವಿದಾಯದ ನೆನಪೆಂಬಂತೆ ಗ್ರೂಪ್ ಫೋಟೊ ತೆಗೆದು ಸಂಭ್ರಮಿಸಿದರು. ಅಷ್ಟರಲ್ಲಾಗಲೇ ಸಮಯ ಪಾದರಸದಂತೆ ಸರಿದು ಪಶ್ಚಿಮದಲ್ಲಿ ಸೂರ್ಯ ಸರಿಯಲಾರಂಭಿಸಿದ ಇನ್ನು ತಮ್ಮ ತಮ್ಮ ಗೂಡುಗಳನ್ನು ಸೇರುವ ಅನಿವಾರ್ಯತೆ ಅಲ್ಲಿ ಬಂದೊದಗಿದ್ದರಿಂದ ಮತ್ತೊಮ್ಮೆ ಸೇರುವ ಪ್ರಾಮಿಸ್‌ನೊಂದಿಗೆ ಬೇರೆ ಬೇರೆಯಾದ ಸುಮಾರು ೪೦ ವರ್ಷಗಳ ಹಿಂದಿನ ಸಹಪಾಠಿಗಳ ಪುನರ್ಮಿಲನ ಸಮಾರಂಭವು ಅತ್ಯಂತ ಯಶಸ್ವಿಯಾಗಿ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    4 + thirteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.