Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರದ ಕಿನಾರೆಯಲ್ಲಿ ಗುರುಕುಲ ಗಾಳಿಪಟ ಉತ್ಸವದ ಮೋಡಿ
    Recent post

    ಕೋಟೇಶ್ವರದ ಕಿನಾರೆಯಲ್ಲಿ ಗುರುಕುಲ ಗಾಳಿಪಟ ಉತ್ಸವದ ಮೋಡಿ

    Updated:02/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಬಾನಲ್ಲಿ ಬಣ್ಣದ ಗಾಳಿಪಟ ಚಿಟ್ಟೆಗಳ ಹಾರಾಟ, ಚಾರ್ಲಿ ಚಾಪ್ಲಿನಿಂದ ಹಿಡಿದು, ಮಿಕಿಮೌಸ್ ವರೆಗೆ, ಯಕ್ಷಗಾನ ಬಣ್ಣದ ಒಡ್ಡೋಲಗ ಮೊದಲ್ಗೊಂಡು ಪುಟಾಣಿ ಗಾಳಿಪಟಗಳು ಬಾನೆತ್ತರದಲ್ಲಿ ವೈಯ್ಯಾರದಲ್ಲಿ ವಾಲಿ, ಅಕ್ಕಪಕ್ಕ ತೇಲಿ, ಒಮ್ಮೆ ಕೆಳಕ್ಕೆ ಬಂದು ಮತ್ತೆ ಸರಕ್ಕಂತ ಮೇಲಕ್ಕೇರುವ ಮೂಲಕ ಕೋಡಿಯಲ್ಲಿ ಗಾಳಿಪಟ ಮಾಡಿದ ಮೋಡಿ ಅವರ್ಣಿನೀಯ.

    Click Here

    Call us

    Click Here

    ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ ಕೋಟೇಶ್ವರ ಕಿನಾರೆಯಲ್ಲಿ ಮೂರನೇ ಬಾರಿಗೆ ಆಯೋಜಿಸಿದ್ದ ಗಾಳಿಪಟ ಉತ್ಸವ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.. ಟೀಮ್ ಮಂಗಳೂರು ಮತ್ತು ಒನ್ ಇಂಡಿಯಾ ಕೈಟ್ ಟೀಮ್ ಕೇರಳ ಉತ್ಸವದಲ್ಲಿ ಪಾಲ್ಗೊಂಡಿತ್ತು. ಕಡಲಬ್ಬರದ ಅಲೆಗಳ ಜೋರಿಗೆ ಗಾಳಿ ಪಟ ಹಾರಿಸುವ ಉಮೇದು ಜೋರಾಗಿಯೇ ನಡೆದಿತ್ತು. ಕಿರಿಕ್ ಪಾರ್ಟಿ ಸಿನೇಮಾ ನಿರ್ದೇಶಕ ರಿಶಬ್ ಶೆಟ್ಟಿ ಹಾಗೂ ಅವರ ಉತ್ಸವದ ಮೆರಗು ಹೆಚ್ಚಿಸಿದ್ದವು. ಒಂದು ಕಡೆ ಗಾಳಿಪಟದೊಟ್ಟಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ, ಮತ್ತಷ್ಟು ಜನ ಸಿನೇಮಾ ಮಂದಿಯೊಟ್ಟಿಗೆ ಸೆಲ್ಫಿ ಕ್ರೇಜಿಗೆ ಬಿದ್ದಿದ್ದರು. ಅಲ್ಲೆ ಅರಳಿದ ಮರಳು ಶಿಲ್ಪ ಕಲೆ ಸಮುದ್ರ ತೀರಕ್ಕೊಂದು ರಂಗು ನೀಡಿದ್ದರೆ, ಗಾಳಿಪಟ ಬಾನೆತ್ತರದಲ್ಲಿ ಬಿಡಿಸಿದ ರಂಗೋಲಿ ಚಿತ್ತಾರ!

    ಕೋಟೇಶ್ವರದಲ್ಲಿ ಕೇವಲ ಕುಂದಾಪುರ ನಾಗರಿಕಷ್ಟೇ ಅಲ್ಲದೆ ಉಡುಪಿ, ಮಂಗಳೂರು, ಕೇರಳ, ಬೈಂದೂರು, ಭಟ್ಕಳವಲ್ಲದೆ ಗ್ರಾಮೀಣ ಜನರು ಪಾಲ್ಗೊಳ್ಳುವ ಮೂಲಕ ಗಾಳಿಪಟ ಹಾರಿಸಿ ಸಂತಸಪಟ್ಟರು. ಪ್ರಾಥಮಿಕ, ಪ್ರೌಢ ಹಾಗೂ ಪದಿವಿಪೂರ್ವ ವಿದ್ಯಾರ್ಥಿಗಳು ತಾವೇ ಸಿದ್ದ ಪಡಿಸಿದ ಗಾಳಿಮಟ ಹಾರಿಸಿ, ಖುಷಿಪಟ್ಟರೆ ಸಾರ್ವಜನಿಕರು ಗಾಳಿಪಟ ಕೊಂಡು ಹಾರಿಸಿ ಸಂಭ್ರಮಿಸಿದರು. ಕಡಲ ತೀರವಂತೂ ಜನಜಂಗುಳಿಯಲ್ಲಿ ಮಿಂದೆದ್ದಿತು.

    ಗಾಳಿಮಟ ಆಕಾಶದೆತ್ತರಕ್ಕೆ ಏರಿದ ಸಂಭ್ರಮ ಒಂದೆಡೆಯಾದರೆ, ಇಷ್ಟು ಪ್ರಯತ್ನಿಸದರೂ ಮೇಲಕ್ಕೆಳದೆ ಸತಾಯಿಸುವ ಪಟ ಹಟಕ್ಕೆ ಮೂಡಿದ ನಿರಾಸೆ, ಗಾಳಿಪಟದ ಸೂತ್ರ ಹರಿದು ಹಾರಿ ಹೋದ ನೋವು, ದೊಡ್ಡ ದೊಡ್ಡ ಗಾಳಿಪಠ ಹಾರಿಸಲು ಸೂತ್ರ ಹಿಡಿದ ಓಡುವ ತಂಡದೊಟ್ಟಿಗೆ ಮಕ್ಕಳ ಮರಿಗಳು ಹರ್ಷೋದ್ಘಾರ ಒಂದೇ ಎರೆಡೇ, ಎಲ್ಲವನ್ನೂ ಮರೆತರು ಒಂದಾಗಿ ನಕ್ಕರು. ಇಲ್ಲಿರಲಿಲ್ಲ ಜಾತಿಧರ್ಮದ ಗೊಡವೆ, ಗಾಳಿಮಟ ಒಮ್ಮೆ ಎಲ್ಲರನ್ನೂ ತನ್ನ ಸೆಳೆದು ಪ್ರಪಂಚ ಮರೆಸುವ ಸುಖ ಕೊಟ್ಟಿದ್ದು ಸುಳ್ಳಲ್ಲ. ಗೆದ್ದವರು ಬಹುಮಾನ ಪಡೆದರೆ ಸೋತವರಿಗೆ ಗಾಳಿಪಟ ಹಾರಿಸಿದ ಖುಷಿ.

    ಗಾಳಿಪಟ ಉತ್ಸವಕ್ಕೆ ಚಾಲನೆ:
    ಅದಾನಿ ಪವರ್ ಕಾಪೊರೇಶನ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವಾ ಗಾಲಿಪಟ ಉತ್ಸವಕ್ಕೆ ಚಾಲನೆ ನಿಡಿ ಮಾತನಾಡಿ ಗಾಳಿಪಟ ಮನೋರಣಜನೆಗಷ್ಟೇ ಅಲ್ಲ. ಕಣ್ಣು ಹಾಗೂ ದೈಹಿಕ ಆರೋಗ್ಯಕ್ಕೆ ಪೂರಕ. ಗಾಳಿಪಟ ಹಾರಿಸುವ ಮೂಲಕ ಮಾನಸಿಕ ಏಕಾಗ್ರತೆ, ಸಮಾನತೆ ಭಾತೃತ್ವ ವೃದ್ಧಿಸುತ್ತದೆ. ಗಾಳಿಪಟ ಸ್ಪರ್ಧೆ ಆಯೋಜಿಸುವ ಮೂಲಕ ಗುರುಕುಲ ಪಬ್ಲಿಕ್ ಶಾಲಾ ಆರೋಗ್ಯ ಹಾಗೂ ಸೌಹಾರ್ದ ಸಮಾಜದ ಜೊತೆ ಪ್ರವಾಸೋದ್ಯಮ ಸ್ಥಳಗಳ ಪರಿಚಯಿಸುವ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

    Click here

    Click here

    Click here

    Click Here

    Call us

    Call us

    ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿ ಗಾಳಿ ಪಟ ಹಾರಿಸುವುದರಿಂದ ಮಾನಸಿಕ ಫಿಟ್‌ನೆಸ್ ವೃದೃದ್ಧಿಸುತ್ತಿದ್ದು, ಗಾಳಿ ಪಟ ಉತ್ಸವ ಶಾಲಾ ಜೀವನದ ನೆನಪುಗಳ ಮರಕಳಿಸುತ್ತುದೆ. ಶಾಲಾ ಮಕ್ಕಳು ವಿದ್ಯಾಭ್ಯಾಸ, ಶಿಕ್ಷಣ ಸಮಸ್ಯೆಗಳ ಬೆಳಕು ಚಿಲ್ಲುವ ಕನ್ನಡ ಸಿನೇಮಾ ಮಾಡಲು ಸಿದ್ಧತೆ ನಡೆಸಿದ್ದು, ಅತೀ ಉದ್ದದ ಅಂದರೆ ಸರಕಾರಿ ಪ್ರಾಥಮಿಕ ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ ಎಂಬ ಹೆಸರಿಡಲಾಗಿದೆ. ಈ ಸಿನೇಮಾ ಶಿಕ್ಷಣ ವಿಷ್ಯಗಳ ಮೇಲೆ ಬೆಳಕು ಚೆಲ್ಲಲಿದೆ ಎಂದರು.

    ರಿಶಬ್ ಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬಾಂಡ್ಯ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಬಿ.ಅಪ್ಪಣ್ಣ ಹೆಗ್ಡೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಸದಸ್ಯರಾದ ಲಕ್ಷ್ಮೀ ಮಂಜು ಬಿಲ್ಲವ, ಶ್ರೀಲತಾ ಸುರೇಶ್ ಶೆಟ್ಟಿ, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ಜನಕಿ ಬಿಲ್ಲವ. ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ ಜಂಟಿ ಕಾರ್ಯನಿರ್ವಾಹಕ ನಿದೇರ್ಶಕರಾದ ಸುಭಾಶ್ಚಂದ್ರ ಶೆಟ್ಟಿ, ಅನುಪಮಾ ಎಸ್.ಶೆಟ್ಟಿ, ಪ್ರಾಂಶುಪಾಲ ಶಾಜಿ ನಾಯರ್, ಶಿಕ್ಷಕ ರಾಮಚಂದ್ರ ಹೆಬ್ಬಾರ್ ಮೊದಲಾದವರು ಜೊತೆಗಿದ್ದರು.

      

    Gurukula Public School
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಿ: ಅನುಪಮಾ ಎಸ್. ಶೆಟ್ಟಿ

    18/03/2026

    ಗುರುಕುಲ ವಿದ್ಯಾಸಂಸ್ಥೆಯಲ್ಲಿ ʼಗುರುಕುಲ ಕಾರ್ನಿವಲ್‌ ಮಕ್ಕಳ ಹಬ್ಬʼ

    28/01/2026

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

    23/10/2025
    Leave A Reply Cancel Reply

    nine + 20 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.