Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ: ಶಿಕ್ಷಕ ಭೋಜು ಹಾಂಡರಿಗೆ ಡಿವೈಎಫ್‌ಐ ಶ್ರದ್ಧಾಂಜಲಿ
    ಊರ್ಮನೆ ಸಮಾಚಾರ

    ಹೆಮ್ಮಾಡಿ: ಶಿಕ್ಷಕ ಭೋಜು ಹಾಂಡರಿಗೆ ಡಿವೈಎಫ್‌ಐ ಶ್ರದ್ಧಾಂಜಲಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರಿಗೆ ಹೆಮ್ಮಾಡಿಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ನೇತೃತ್ವದಲ್ಲಿ ಆಯೋಜಿಸಿದ್ದ  ಶ್ರದ್ದಾಂಜಲಿ ಸಭೆಯಲ್ಲಿ ಅವರ ಭಾವಚಿತ್ರವನ್ನಿಟ್ಟು ಪುಷ್ಪ ನಮನ ಸಲ್ಲಿಸಿ ಮೊಂಬತ್ತಿ ಬೆಳಗಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

    Click Here

    Call us

    Click Here

    ಶಿಕ್ಷಕ ಹಾಗೂ ಕುಂದಾಪುರ ಸಮುದಾಯ ಸಂಘಟನೆಯ ಕಾರ್ಯದರ್ಶಿ ಸದಾನಂದ ಬೈಂದೂರು ಮಾತನಾಡಿ, ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರು ತಾವೂ ಬೆಳೆಯುವುದರೊಂದಿಗೆ ಎಲ್ಲರೂ ಬೆಳೆಯಬೇಕು, ಬದುಕನ್ನು ಪ್ರೀತಿಸಬೇಕು ಎಂಬ ಆಶಯವನ್ನಿಟ್ಟುಕೊಂಡವರು. ತಾವು ತರಗತಿಗಳಿಗೆ ಹೊರಡುವ ಮೊದಲು ಚಿತ್ರಕಲೆಗೆ ಬೇಕಾಗುವ ಎಲ್ಲ ಸಲಕರಣೆಗಳನ್ನು ಐದು ನಿಮಿಷದ ಮೊದಲು ತಮ್ಮ ಮೇಜಿನ ಎದುರಿಟ್ಟು ತಯಾರಾಗುತ್ತಿದ್ದರು. ಶಿಸ್ತುಬದ್ದ ಜೀವನ ನಡೆಸಿದ ಭೋಜು ಹಾಂಡರು, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು ಎಂದು ಹೇಳಿದರು.

    ಅದೆಷ್ಟೊ ವಿದ್ಯಾರ್ಥಿಗಳು ಇವರಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಎಲ್ಲಿಯೂ ಸಹ ತಾನೊಬ್ಬ ದೊಡ್ಡ ಕಲೆಗಾರನಾಬೇಕೆಂದು ಕನಸು ಕೂಡ ಕಂಡವರಲ್ಲ. ತಾನು ಕಲಿತದ್ದನ್ನು ಮಕ್ಕಳಿಗೂ ತಲುಪಿಸಬೇಕು ಆ ಮೂಲಕ ವಿದ್ಯಾರ್ಥಿಗಳ ಏಳಿಗೆಯಾಗಬೇಕೆಂದು ಕನಸು ಕಂಡಿದ್ದರು. ಅವರ ವೃತ್ತಿ ಜೀವನದಲ್ಲಿ ಶಿಕ್ಷಕರನ್ನು ಕೂಡ ಬೆಳೆಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡದೇ ಸರಳ ಸಜ್ಜನ ವ್ಯಕ್ತಿತ್ವದಿಂದಲೇ ಹಲವರ ಪ್ರೀತಿಗೆ ಪಾತ್ರರಾಗಿದ್ದರು. ಈ ದಿನ ದೊಡ್ಡ ಚೇತನವನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸದಾನಂದ ಬೈಂದೂರು ದುಖಃ ವ್ಯಕ್ತಪಡಿಸಿದರು.

    ಡಿವೈಎಫ್‌ಐ ತಾಲೂಕು ಉಪಾಧ್ಯಕ್ಷ ಸುರೇಶ್ ಕಲ್ಲಾಗರ ಮಾತನಾಡಿ, ಭೋಜು ಹಾಂಡರು ಹೆಮ್ಮಾಡಿ ಡಿವೈಎಫ್‌ಐ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು. ಡಿವೈಎಫ್‌ಐನ ಎಲ್ಲಾ ಕಾರ್ಯಕ್ರಮಗಳಿಗೂ ಮಾರ್ಗದರ್ಶಕರಾಗಿದ್ದರು. ಅವರ ಈ ಅಕಾಲಿಕ ಸಾವು ನಮಗೆ ತುಂಬಲಾರದ ನಷ್ಟ. ಭೋಜು ಹಾಂಡರು ಕಲೆಯನ್ನು ಪ್ರೀತಿಸುತ್ತಿದ್ದರು. ಕಲೆಯೊಂದು ವ್ಯವಹಾರವಾಗಿರುವ ಈ ದಿನದಲ್ಲಿ ಎಲ್ಲರಿಗೂ ಕಲೆಯನ್ನು ತಲುಪಿಸಬೇಕೆಂಬ ಮಹದಾಸೆ ಇಟ್ಟುಕೊಂಡವರು ಎಂದರು.

    ಕುಂದಾಪುರ ಎಪಿಎಂಸಿ ನೂತನ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿದರು. ಭೋಜು ಹಾಂಡ ಕುಟುಂಬದವರಾದ ರಮೇಶ ಹಾಂಡ ಉಪಸ್ಥಿತರಿದ್ದರು. ಡಿವೈಎಫ್‌ಐ ಸಂಘಟನೆಯ ವೆಂಕಟೇಶ, ಹರೀಶ, ನಾಗೇಶ, ಸುರೇಶ, ಪ್ರದೀಪ ಹಾಗೂ ಕಟ್ಟಡ ಕಾರ್ಮಿಕ ಸಂಘಟನೆಯ ಜಗದೀಶ್ ಆಚಾರ್, ರಾಮ ಕುಲಾಲ್, ವಾಸು ಕಟ್ಟು, ಲಕ್ಷ್ಮಣ ಮೂವತ್ತುಮುಡಿ ಉಪಸ್ಥಿತರಿದ್ದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಪ್ರಸ್ತಾಪಿಸಿ ಸ್ವಾಗತಿಸಿದರು. ಡಿವೈಎಫ್‌ಐ ಕಾರ್ಯದರ್ಶಿ ವಿಘ್ನೇಶ್ ವಂದಿಸಿದರು.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ

    22/08/2026

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ

    22/08/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026
    Leave A Reply Cancel Reply

    eleven + 5 =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ
    • ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ
    • ಉಡುಪಿ: ಕಲಾವಿದರಿಂದ ಅರ್ಜಿ ಆಹ್ವಾನ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.