Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜೇಶ ಶಿಬಾಜೆ ಮಾಧ್ಯಮ ಪ್ರಶಸ್ತಿ: ಸುಭಾಶ್ಚಂದ್ರ ವಾಗ್ಲೆ ಮತ್ತು ನವೀನ್.ಕೆ ಇನ್ನ ಆಯ್ಕೆ
    ಉಡುಪಿ ಜಿಲ್ಲೆ

    ರಾಜೇಶ ಶಿಬಾಜೆ ಮಾಧ್ಯಮ ಪ್ರಶಸ್ತಿ: ಸುಭಾಶ್ಚಂದ್ರ ವಾಗ್ಲೆ ಮತ್ತು ನವೀನ್.ಕೆ ಇನ್ನ ಆಯ್ಕೆ

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ತನ್ನ ಇಪ್ಪತ್ತೈದರ ಹರೆಯದಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿಯ ಪ್ರಶಸ್ತಿ ಪಡೆದ ದಿ. ರಾಜೇಶ ಶಿಬಾಜೆ ಹೆಸರಿನಲ್ಲಿ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಘಟಕವು ನೀಡುವ ಪ್ರತಿಷ್ಠಿತ ರಾಜೇಶ ಶಿಬಾಜೆ ಮಾಧ್ಯಮ ಪ್ರಶಸ್ತಿಗೆ ಉಡುಪಿಯ ಹಿರಿಯ ಪತ್ರಕರ್ತ ಕನ್ನಡಪ್ರಭ ವರದಿಗಾರ ಸುಭಾಶ್ಚಂದ್ರ ಎಸ್.ವಾಗ್ಲೆ ಮತ್ತು ಮುಂಬಯಿಯ ಕರ್ನಾಟಕ ಮಲ್ಲದಲ್ಲಿ ೨೫ ವರ್ಷಗಳಿಂದ ಕ್ರೀಡಾ ಅಂಕಣವನ್ನು ಬರೆಯುತ್ತಿರುವ ಕರ್ನಾಟಕ ಮಲ್ಲ ಪತ್ರಿಕೆಯ ವರದಿಗಾರ ನವೀನ್ ಕೆ. ಇನ್ನ ಅವರು ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ತಿಳಿಸಿದ್ದಾರೆ.

    Click Here

    Call us

    Click Here

    ಸುಭಾಶ್ಚಂದ್ರ ಎಸ್. ವಾಗ್ಳೆ
    ಅವರು ಕನ್ನಡ ಪ್ರಭ ಪತ್ರಿಕೆಯ ಹಿರಿಯ ವರದಿಗಾರರಾಗಿದ್ದಾರೆ. ೧೯೯೬ರಲ್ಲಿ ಪುತ್ತೂರಿನ ಜನ ಈ ದಿನ ಪತ್ರಿಕೆಯಲ್ಲಿ ಛಾಯಾಚಿತ್ರಗ್ರಾಹಕರಾಗಿ ವೃತ್ತಿ ಆರಂಭ. ೧೯೯೮ರಲ್ಲಿ ಸುಪ್ರಭಾತ ಛಾನೆಲ್, ೧೯೯೯ರಲ್ಲಿ ಕಾವೇರಿ ಛಾನೆಲ್, ೨೦೦೦ರಲ್ಲಿ ಉಡುಪಿ ದರ್ಶನ ಕೇಬಲ್ ಛಾನೆಲ್, ೨೦೦೨ರಲ್ಲಿ ಕನ್ನಡಪ್ರಭದ ಮಣಿಪಾಲ ವರದಿಗಾರ, ೨೦೦೩ರಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಸೇವೆ ಆರಂಭಿಸಿ ಅದೇ ಪತ್ರಿಕೆಯಲ್ಲಿ ೧೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಛಾಯಾಗ್ರಹಣ ಅವರ ಪ್ರೀತಿಯ ಕ್ಷೇತ್ರ, ಸಾಹಿತ್ಯಾಸಕ್ತರು.

    ನವೀನ್ ಕೆ.ಇನ್ನ:
    ಭಾರತೀಯ ಭಾಷಾ ಪತ್ರಿಕೋದ್ಯಮದಲ್ಲಿಯೇ ದಾಖಲೆಯೆಂಬಂತೆ ಕಳೆದ ೨೫ ವರ್ಷಗಳಿಂದ ಒಂದೇ ಪತ್ರಿಕೆಯಲ್ಲಿ ಪ್ರತಿವಾರ ಕ್ರೀಡಾ ಅಂಕಣ ಬರೆಯುತ್ತಾ ಬಂದವರು. ಯಾಉದೇ ಫಲಾಪೇಕ್ಷೆ ಪಡೆಯದೆ, ಗೌರವ ಧನ ಪಡೆಯದೆ ಈ ಅಂಕಣವನ್ನು ಬರೆಯುತ್ತಿದ್ದಾರೆ.ಕಾರ್ಕಳ ತಾಲೂಕಿನ ಇನ್ನದವರಾದ ಅವರು ಹುಟ್ಟಿ ಬೆಳೆದದ್ದು ಮುಂಬಯಿಯಲ್ಲಿ, ಆದರೂ ಅವರಿಗೆ ತನ್ ನ ಹುಟ್ಟೂರಿನ ಬಗ್ಗೆ ವಿಶೇಷ ಕಾಳಜಿ. ಮುಂಬಯಿಯ ದೈನಿಕ ಕರ್ನಾಟಕ ಮಲ್ಲದ ವರದಿಗಾರರಾಗಿ, ಜಾಹಿರಾತುದಾರರಾಗಿ, ಸ್ವತಃ ಛಾಯಾಗ್ರಾಹಕರಾಗಿ ಮತ್ತು ಸಮಾಜ ಸೇವಕರಾಗಿ ಮುಂಬಯಿಯಲ್ಲಿ ಜನಪ್ರಿಯರಾಗಿದ್ದಾರೆ. ದೈವ, ದೇವರ ಬಗ್ಗೆ ಅಪಾರ ಅಭಿಮಾಣ ಹೊಂದಿರುವ ಅವರು ಧಾರ್ಮಿಕ ಕ್ಷೇತ್ರಗಳ ಬಗ್ಗೆ ನೂರಾರು ಲೇಖನಗಳನ್ನು ಬರೆದಿದ್ದಾರೆ. ಮುಂಬಯಿಯ ದೈವಾರಾಧನೆಯ ಬಗ್ಗೆ ನಡೆದಾಡುವ ವಿಶ್ವಕೋಶವಾಗಿದ್ದಾರೆ.

    ದಯಾನಂದ ಪೈ ಕುಂಟಾಡಿ ಅವರಿಂದ ಆರಂಭಿಸಿ ಸತತವಾಗಿ ಈ ಗೌರವವನ್ನು ಮೊದಲು ಯುವ ಪ್ರತಿಭಾ ವೇದಿಕೆ ಮೂಲಕ ಮತ್ತು ಈಗ ಪತ್ರಕರ್ತರ ವೇದಿಕೆ ಮೂಲಕ ಈ ಗೌರವ ನೀಡಲಾಗುತ್ತಿದೆ. ಪಾಲಾಕ್ಷ ಸುವರ್ಣ ಬೆಳ್ತಂಗಡಿ, ಜಾನ್ ಡಿಸೋಜಾ ಕುಂದಾಪುರ, ಸುಕುಮಾರ ಮುನಿಯಾಲ್, ಯು.ಎಸ್.ಶೆಣೈ, ವಿಲಾಸ್ ಕುಮಾರ್ ನಿಟ್ಟೆ, ಧನಂಜಯ ಗುರುಪುರ, ಚಂದ್ರ ಕೆ. ಹೆಮ್ಮಾಡಿ ಮೊದಲಾದವರಿಗೆ ಈ ಹಿಂದೆ ರಾಜೇಶ ಶಿಬಾಜೆ ಮಾಧ್ಯಮ ಗೌರವ ನೀಡಲಾಗಿದೆ.

     

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d