Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಸ್ಕೃತ ತ್ರಿಕಾಲಾಬಾಧಿತ ಸುಂದರ ಸೂಕ್ತಿಗಳ ಸಾಗರಃ ಸುರೇಂದ್ರ ಅಡಿಗ
    ಕುಂದಾಪ್ರದ್ ಸುದ್ಧಿ

    ಸಂಸ್ಕೃತ ತ್ರಿಕಾಲಾಬಾಧಿತ ಸುಂದರ ಸೂಕ್ತಿಗಳ ಸಾಗರಃ ಸುರೇಂದ್ರ ಅಡಿಗ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿಶ್ವವ್ಯಾಪಿಯಾದ ಸಂಸ್ಕೃತ ನಮ್ಮ ನೆಲದ ಅತ್ಯಂತ ಪ್ರಾಚೀನ ಭಾಷೆ. ಸಹಸ್ರಾರು ವರ್ಷಗಳು ಸಂದರೂ ಒಂದು ಶಬ್ದವೂ ಅಪಭ್ರಂಶಗೊಳ್ಳದೆ, ಪರಿಶುದ್ಧತೆಯನ್ನು ಕಾಪಾಡಿಕೊಂಡು ಬಂದಿರುವುದು ಇದರ ವೈಶಿಷ್ಟ್ಯ. ಕನ್ನಡ ಮೊದಲಾದ ರಾಜ್ಯ ಭಾಷೆಗಳ ಮೇಲೆ ಸಂಸ್ಕೃತ ಗಾಢವಾದ ಪ್ರಭಾವ ಬೀರಿದೆ. ವೇದಗಳಿಂದ ಮೊದಲ್ಗೊಂಡು ಜಾನಪದ ಸಾಹಿತ್ಯದವರೆಗೆ ವಿಪುಲವಾದ ಸಾಹಿತ್ಯವನ್ನು ಹೊಂದಿದ ಸಂಸ್ಕೃತ ತ್ರಿಕಾಲಾಭಾಧಿತವಾದ ಸುಂದರ ಸೂಕ್ತಿಗಳ ಸಾಗರ. ಅಂತಹ ಸೂಕ್ತಿಗಳಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಉಪಯುಕ್ತ ಸೂಕ್ತಿಗಳನ್ನು ಸಂಗ್ರಹಿಸಿ, ಸರಳ ಕನ್ನಡ ಅನುವಾದದೊಂದಿಗೆ ಪ್ರಕಟಿಸಲಾದ ಈ ಕೃತಿ ಸಾಹಿತ್ಯ ಲೋಕಕ್ಕೊಂದು ವಿಶಿಷ್ಟ ಕೊಡುಗೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಾಹಿತಿ ಶ್ರೀ ನೀಲಾವರ ಸುರೇಂದ್ರ ಅಡಿಗರು ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ರೋಟರಿ ಭವನದಲ್ಲಿ ಹಿರಿಯ ಸಾಹಿತಿ, ವಿಶ್ರಾಂತ ಪ್ರಾಧ್ಯಾಪಕ ಡಾ| ಎಚ್.ವಿ. ನರಸಿಂಹಮೂರ್ತಿಯವರ ’ಸಂಸ್ಕೃತ ಸೂಕ್ತಿಗಳು’ ಎಂಬ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದರು. ಕುಂದಾಪುರ ರೋಟರಿ ಅಧ್ಯಕ್ಷ ರೊ| ಉದಯಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ಅಪೂರ್ವವಾದ ಈ ಕೃತಿಯಲ್ಲಿರುವ ಎಲ್ಲ ಸೂಕ್ತಿಗಳನ್ನು ಉಪಯುಕ್ತ ವಿವರಣೆಯೊಂದಿಗೆ ಪ್ರಕಟಿಸಿದರೆ ಇದೊಂದು ಹೆಬ್ಬೊತ್ತಿಗೆಯಾಗುವುದರಲ್ಲಿ ಸಂಶಯವಿಲ್ಲ. ಡಾ|| ಮೂರ್ತಿಯವರು ಬರೆದುಕೊಟ್ಟರೆ ಆ ಹೊತ್ತಿಗೆಯನ್ನು ನನ್ನ ಪ್ರಕಾಶನ ಸಂಸ್ಥೆಯ ಆಶ್ರಯದಲ್ಲಿ ಉಚಿತವಾಗಿ ಪ್ರಕಟಿಸಿ, ಆಸಕ್ತರಿಗೆಲ್ಲ ತಲುಪಿಸುತ್ತೇನೆ ಎಂದು ಶ್ರೀ ಅಡಿಗರು ಘೋಷಿಸಿದರು.

    ಅಂತಾರಾಷ್ಟ್ರೀಯ ರೋಟರಿಯ ಶತಾಬ್ದಿ ಜಿಲ್ಲಾ ಗವರ್ನರರಾದ ಶ್ರೀ ಎ.ಎಸ್.ಎನ್. ಹೆಬ್ಬಾರರ ಪರವಾಗಿ ಕುಂದಾಪುರ ರೋಟರಿಯ ಹಿರಿಯ ಸ್ಥಾಪಕಸದಸ್ಯ ಶ್ರೀ ಸೊಲಮನ್ ಸೋನ್ಸ್‌ರವರು ಈ ಪುಸ್ತಕದ ಲೇಖಕರಾದ ರೊ| ಡಾ| ಎಚ್.ವಿ. ನರಸಿಂಹಮೂರ್ತಿಯವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿದರು. ರೊ| ರತ್ನಾಕರ ಶೆಟ್ಟಿ ಪ್ರಾರ್ಥಿಸಿದರು. ರೊ| ಉದಯಕುಮಾರ ಶೆಟ್ಟಿ ಸ್ವಾಗತಿಸಿದರು. ರೊ| ಶಶಿಧರ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ರೊ| ಮನೋಜ್ ನಾಯರ್ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d